ಬ್ರೇಕಿಂಗ್ ನ್ಯೂಸ್
08-02-24 01:29 pm Mangalore Correspondent ಕ್ರೈಂ
ಬಂಟ್ವಾಳ, ಫೆ.8: ವಿಟ್ಲ ಬಳಿಯ ಅಡ್ಯನಡ್ಕದ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಕಳ್ಳರು ನುಗ್ಗಿ ಲಾಕರ್ ಒಡೆದು ಕೋಟ್ಯಂತರ ಮೌಲ್ಯದ ನಗದು ಮತ್ತು ಚಿನ್ನಾಭರಣ ದೋಚಿರುವ ಕೃತ್ಯ ನಡೆದಿದೆ.
ಕೇರಳ- ಕರ್ನಾಟಕ ಗಡಿಭಾಗದ ಅಡ್ಯನಡ್ಕದಲ್ಲಿ ಹಳೆ ಕಟ್ಟಡದಲ್ಲಿರುವ ಕರ್ನಾಟಕ ಬ್ಯಾಂಕ್ ಶಾಖೆಗೆ ನಿನ್ನೆ ರಾತ್ರಿ ಕಳ್ಳರು ನುಗ್ಗಿದ್ದಾರೆ. ಹಿಂಭಾಗದ ಕಿಟಕಿಯ ಸರಳನ್ನು ಕತ್ತರಿಸಿ ಕಳ್ಳರು ಒಳನುಗ್ಗಿದ್ದು ಲಾಕರ್ ಒಡೆದು ನಗದು ಮತ್ತು ಚಿನ್ನಾಭರಣ ದೋಚಿದ್ದಾರೆ. ಲಾಕರನ್ನು ಗ್ಯಾಸ್ ಕಟ್ಟರ್ ಬಳಸಿ ಒಡೆದಿರುವುದು ಕಂಡುಬಂದಿದೆ.


ಬ್ಯಾಂಕ್ ಸಿಬಂದಿ ಇಂದು ಬೆಳಗ್ಗೆ 9.30ಕ್ಕೆ ಕೆಲಸಕ್ಕೆ ಆಗಮಿಸಿದಾಗ, ಕೃತ್ಯ ಬೆಳಕಿಗೆ ಬಂದಿದೆ. ಕೂಡಲೇ ವಿಟ್ಲ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಬ್ಯಾಂಕ್ ಶಾಖೆಯನ್ನು ಸದ್ಯಕ್ಕೆ ಮುಚ್ಚಲಾಗಿದೆ. ಕಟ್ಟಡದ ಹಿಂಭಾಗದಲ್ಲಿ ಪೊದೆ ಆವರಿಸಿದ್ದು ಅದೇ ಜಾಗದಿಂದ ಕಳ್ಳರು ಕನ್ನ ಹಾಕಿರುವುದು ಯಾರಿಗೂ ಗೊತ್ತಾಗಿಲ್ಲ. ನಸುಕಿನ ಜಾವದಲ್ಲಿ ದ್ವಿಚಕ್ರ ವಾಹನದಲ್ಲಿ ಬಂದು ಕೃತ್ಯ ನಡೆದಿರುವ ಶಂಕೆಯಿದೆ. ಹಿಂಭಾಗದಲ್ಲಿ ಸಿಸಿಟಿವಿ ಇಲ್ಲದಿರುವುದು ಕಳ್ಳರಿಗೆ ವರದಾನವಾಗಿತ್ತು. ಲಾಕರಿನಲ್ಲಿ ಎರಡು ಕೋಟಿಯಷ್ಟು ಮೌಲ್ಯದ ಚಿನ್ನಾಭರಣ ಇದ್ದಿರುವ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಬ್ಯಾಂಕ್ ಕಟ್ಟಡದ ಬಗ್ಗೆ ತಿಳಿದವರೇ ಕೃತ್ಯ ಎಸಗಿರುವ ಶಂಕೆಯಿದ್ದು ಬಂಟ್ವಾಳ ಪೊಲೀಸರು ತನಿಖೆ ಆರಂಭಿಸಿದ್ದಾರೆ.
A Karnataka Bank branch was robbed on Wednesday night in Adyanadka near Vitla Town of Dakshina Kannada District. Unidentified robbers broke into the bank by breaking the backside window of the bank. Cash and jewellery were stolen from the lockers in the bank. The incident occurred on Wenesnight and came to light when the staff opened the bank on Thursday morning.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm