ಬ್ರೇಕಿಂಗ್ ನ್ಯೂಸ್
16-02-24 07:08 pm Mangalore Correspondent ಕ್ರೈಂ
ಉಳ್ಳಾಲ, ಫೆ.16: ಗಾಂಜಾ ವ್ಯಸನಿಯೋರ್ವ ನಶೆಯಲ್ಲಿ ಸಾರ್ವಜನಿಕರತ್ತ ಜಲ್ಲಿ ಕಲ್ಲು ಎಸೆದಿದ್ದು ತಡೆಯಲು ಹೋದ ವ್ಯಕ್ತಿಗೆ ಸೋಡಾ ಬಾಟಲಿಯಿಂದ ಹಲ್ಲೆಗೈದಿದ್ದಾನೆ. ಧಾಂದಲೆಕೋರನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ.
ಮಂಚಿಲ ನಿವಾಸಿ ಮಹಮ್ಮದ್ ಮುಶ್ತಾಕ್ ಯಾನೆ ಮಿಸ್ತ ಎಂಬಾತ ಶುಕ್ರವಾರ ಮಧ್ಯಾಹ್ನದ ವೇಳೆ ನಶೆಯ ಮತ್ತಿನಲ್ಲಿ ತೊಕ್ಕೊಟ್ಟು ಒಳಪೇಟೆಯ ರಿಕ್ಷಾ ಪಾರ್ಕಿನ ಬಳಿಯ ರೈಲ್ವೇ ಹಳಿಯಲ್ಲಿ ನಿಂತು ಹಳಿಗಳಲ್ಲಿದ್ದ ಜಲ್ಲಿ ಕಲ್ಲುಗಳನ್ನ ರಸ್ತೆಗೆ ಎಸೆಯಲಾರಂಭಿಸಿದ್ದಾನೆ. ಸಾರ್ವಜನಿಕರು, ಶಾಲಾ ಮಕ್ಕಳು ತೆರಳುತ್ತಿದ್ದ ರಸ್ತೆಗೆ ಕಲ್ಲೆಸೆಯುತ್ತಿದ್ದುದನ್ನ ಪ್ರಶ್ನಿಸಿ, ತಡೆಯಲು ಮುಂದಾದ ಸ್ಥಳೀಯ ನಿವಾಸಿ ರಾಜೇಶ್ ಶೆಟ್ಟಿ ಎಂಬವರ ತಲೆ ಮತ್ತು ಕೈಗೆ ಪಕ್ಕದ ಅಂಗಡಿಯಲ್ಲಿದ್ದ ಸೋಡಾ ಬಾಟಲಿಯಿಂದ ಮಿಸ್ತ ಹಲ್ಲೆಗೈದಿದ್ದಾನೆ. ಕೂಡಲೇ ಅಲ್ಲಿ ನೆರೆದಿದ್ದ ಸಾರ್ವಜನಿಕರು ಧಾಂದಲೆ ನಡೆಸುತ್ತಿದ್ದ ಮಿಸ್ತಾನನ್ನ ಹಿಡಿದು ಥಳಿಸಿ ಉಳ್ಳಾಲ ಪೊಲೀಸರಿಗೊಪ್ಪಿಸಿದ್ದಾರೆ.
ಸೋಡಾ ಬಾಟಲಿ ಏಟಿನಿಂದ ತಲೆ ಮತ್ತು ಕೈಗೆ ಹಲ್ಲೆಗೊಳಗಾದ ರಾಜೇಶ್ ಶೆಟ್ಟಿ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಮಿಸ್ತನ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳಿದ್ದು ಆತನ ವಿರುದ್ಧ ಸೂಕ್ತ ಕ್ರಮಕ್ಕಾಗಿ ರಾಜೇಶ್ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಉಳ್ಳಾಲ ಠಾಣಾ ವ್ಯಾಪ್ತಿಯ ಒಳಪೇಟೆ, ಕೇಂದ್ರ ಬಸ್ಸು ನಿಲ್ದಾಣದ ಹಿಂದಿನ ಪ್ರದೇಶ ಸೇರಿದಂತೆ ಅನೇಕ ನಿರ್ಜನ ಪ್ರದೇಶಗಳಲ್ಲಿ ಯುವಕರು ಸಾಮೂಹಿಕವಾಗಿ ಮಾದಕ ಪದಾರ್ಥಗಳನ್ನ ಸೇವಿಸುತ್ತಿದ್ದು ಪೊಲೀಸರು ಇದಕ್ಕೆ ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Mangalore Ganja addict attacks man with bottle at Thokottu. Rajesh Shetty was Attacked with stones. Druggi Mohammed Mushtaq thrashed by localites and handed over to police.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am