ಬ್ರೇಕಿಂಗ್ ನ್ಯೂಸ್
16-02-24 07:08 pm Mangalore Correspondent ಕ್ರೈಂ
ಉಳ್ಳಾಲ, ಫೆ.16: ಗಾಂಜಾ ವ್ಯಸನಿಯೋರ್ವ ನಶೆಯಲ್ಲಿ ಸಾರ್ವಜನಿಕರತ್ತ ಜಲ್ಲಿ ಕಲ್ಲು ಎಸೆದಿದ್ದು ತಡೆಯಲು ಹೋದ ವ್ಯಕ್ತಿಗೆ ಸೋಡಾ ಬಾಟಲಿಯಿಂದ ಹಲ್ಲೆಗೈದಿದ್ದಾನೆ. ಧಾಂದಲೆಕೋರನಿಗೆ ಸಾರ್ವಜನಿಕರೇ ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೊಪ್ಪಿಸಿದ ಘಟನೆ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ.
ಮಂಚಿಲ ನಿವಾಸಿ ಮಹಮ್ಮದ್ ಮುಶ್ತಾಕ್ ಯಾನೆ ಮಿಸ್ತ ಎಂಬಾತ ಶುಕ್ರವಾರ ಮಧ್ಯಾಹ್ನದ ವೇಳೆ ನಶೆಯ ಮತ್ತಿನಲ್ಲಿ ತೊಕ್ಕೊಟ್ಟು ಒಳಪೇಟೆಯ ರಿಕ್ಷಾ ಪಾರ್ಕಿನ ಬಳಿಯ ರೈಲ್ವೇ ಹಳಿಯಲ್ಲಿ ನಿಂತು ಹಳಿಗಳಲ್ಲಿದ್ದ ಜಲ್ಲಿ ಕಲ್ಲುಗಳನ್ನ ರಸ್ತೆಗೆ ಎಸೆಯಲಾರಂಭಿಸಿದ್ದಾನೆ. ಸಾರ್ವಜನಿಕರು, ಶಾಲಾ ಮಕ್ಕಳು ತೆರಳುತ್ತಿದ್ದ ರಸ್ತೆಗೆ ಕಲ್ಲೆಸೆಯುತ್ತಿದ್ದುದನ್ನ ಪ್ರಶ್ನಿಸಿ, ತಡೆಯಲು ಮುಂದಾದ ಸ್ಥಳೀಯ ನಿವಾಸಿ ರಾಜೇಶ್ ಶೆಟ್ಟಿ ಎಂಬವರ ತಲೆ ಮತ್ತು ಕೈಗೆ ಪಕ್ಕದ ಅಂಗಡಿಯಲ್ಲಿದ್ದ ಸೋಡಾ ಬಾಟಲಿಯಿಂದ ಮಿಸ್ತ ಹಲ್ಲೆಗೈದಿದ್ದಾನೆ. ಕೂಡಲೇ ಅಲ್ಲಿ ನೆರೆದಿದ್ದ ಸಾರ್ವಜನಿಕರು ಧಾಂದಲೆ ನಡೆಸುತ್ತಿದ್ದ ಮಿಸ್ತಾನನ್ನ ಹಿಡಿದು ಥಳಿಸಿ ಉಳ್ಳಾಲ ಪೊಲೀಸರಿಗೊಪ್ಪಿಸಿದ್ದಾರೆ.
ಸೋಡಾ ಬಾಟಲಿ ಏಟಿನಿಂದ ತಲೆ ಮತ್ತು ಕೈಗೆ ಹಲ್ಲೆಗೊಳಗಾದ ರಾಜೇಶ್ ಶೆಟ್ಟಿ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಮಿಸ್ತನ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳಿದ್ದು ಆತನ ವಿರುದ್ಧ ಸೂಕ್ತ ಕ್ರಮಕ್ಕಾಗಿ ರಾಜೇಶ್ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ.
ಉಳ್ಳಾಲ ಠಾಣಾ ವ್ಯಾಪ್ತಿಯ ಒಳಪೇಟೆ, ಕೇಂದ್ರ ಬಸ್ಸು ನಿಲ್ದಾಣದ ಹಿಂದಿನ ಪ್ರದೇಶ ಸೇರಿದಂತೆ ಅನೇಕ ನಿರ್ಜನ ಪ್ರದೇಶಗಳಲ್ಲಿ ಯುವಕರು ಸಾಮೂಹಿಕವಾಗಿ ಮಾದಕ ಪದಾರ್ಥಗಳನ್ನ ಸೇವಿಸುತ್ತಿದ್ದು ಪೊಲೀಸರು ಇದಕ್ಕೆ ಕಡಿವಾಣ ಹಾಕಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Mangalore Ganja addict attacks man with bottle at Thokottu. Rajesh Shetty was Attacked with stones. Druggi Mohammed Mushtaq thrashed by localites and handed over to police.
15-08-25 09:47 pm
HK News Desk
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm