ಬ್ರೇಕಿಂಗ್ ನ್ಯೂಸ್
16-02-24 10:46 pm Mangalore Correspondent ಕ್ರೈಂ
ಉಳ್ಳಾಲ, ಫೆ.16: ಬೈಕಲ್ಲಿ ತೆರಳುತ್ತಿದ್ದ ಯುವಕನ ತಡೆದು ಇರಿದು ಕೊಲೆ ಮಾಡಲು ಯತ್ನಿಸಿದ ಘಟನೆ ರಾ.ಹೆ. 66 ರ ಕೊಲ್ಯ ಎಂಬಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದ್ದು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಳ್ಳಾಲ ಪೊಲೀಸರು ಪ್ರಮುಖ ಆರೋಪಿಯನ್ನ ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ.
ಕುಂಪಲ ನಿವಾಸಿ ಮಹಮ್ಮದ್ ಆರಿಫ್(29) ಇರಿತಕ್ಕೊಳಗಾದ ಯುವಕ. ಆರಿಫ್ ಶುಕ್ರವಾರ ಬೆಳಗ್ಗೆ ಕೊಲ್ಯದಿಂದ ಕುಂಪಲದ ಕಡೆಗೆ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಲ್ಲಿ ಸಂಚರಿಸುತ್ತಿದ್ದ ವೇಳೆ ಕುಂಪಲದಿಂದ ಕೊಲ್ಯ ಕಡೆಗೆ ಬೈಕ್ನಲ್ಲಿ ಧಾವಿಸುತ್ತಿದ್ದ ಮುಝಮ್ಮಿಲ್ ಮತ್ತು
ನಿಸಾರ್ ಎಂಬಿಬ್ಬರು ಆರಿಫ್ ನನ್ನು ಕೊಲ್ಯ ಎಂಬಲ್ಲಿ ತಡೆದಿದ್ದಾರೆ. ಆರೋಪಿಗಳು ಆರೀಫ್ ಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆಗೆ ಯತ್ನಿಸಿದ್ದಾರೆ.
ಈ ವೇಳೆ ಮುಝಮ್ಮಿಲ್ ಚೂರಿಯಿಂದ ಇರಿಯಲು ಯತ್ನಿಸಿದ ಸಂದರ್ಭ ಆರೀಫ್ ತಪ್ಪಿಸಿಕೊಂಡು ಹೋಗದಂತೆ ನಿಸಾರ್ ಅಡ್ಡಗಟ್ಟಿದ್ದ ಎನ್ನಲಾಗಿದೆ. ಇದರಿಂದ ಆರೀಫ್ ಬೆನ್ನಿಗೆ ಗಾಯವಾಗಿದ್ದು , ತಕ್ಷಣ ಅವರು ಘಟನಾ ಸ್ಥಳದಿಂದ ತಪ್ಪಿಸಿಕೊಂಡಿದ್ದು, ಆರೋಪಿಗಳು ವಿಚಲಿತರಾಗಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಆರೀಫ್ ಅವರನ್ನು ಸ್ಥಳದಲ್ಲಿದ್ದ ಶ್ರವಣ್ ಮತ್ತು ಉತ್ತಮ್ ಎಂಬಿಬ್ಬರು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಿಸಿ ಕೃತ್ಯ ಎಸಗಿದ ಪ್ರಮುಖ ಆರೋಪಿ
ಮುಝಮ್ಮಿಲ್ ನನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ನಿಝಾರ್ ಪತ್ತೆಗಾಗಿ ಬಲೆ ಬೀಸಿದ್ದಾರೆ.
Kolya Murder attempt after trying to stop bike, prime accused arrested by Ullal police in Mangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 12:09 pm
HK News Staffer
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm