ಬ್ರೇಕಿಂಗ್ ನ್ಯೂಸ್
27-02-24 03:45 pm HK News Desk ಕ್ರೈಂ
ಮಂಡ್ಯ, ಫೆ 27: ಹಣಕ್ಕಾಗಿ ಮಗನೇ ತಂದೆಯನ್ನು ಭೀಕರವಾಗಿ ಹತ್ಯೆಗೈದಿರುವ ಘಟನೆ ಮಂಡ್ಯದ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಂಜಪ್ಪ (65) ಎಂಬವರು ಹತ್ಯೆಯಾದ ದುರ್ದೈವಿ. ಮಹದೇವ್ ಕೊಲೆ ಆರೋಪಿಯಾಗಿದ್ದು, ಹಣಕ್ಕಾಗಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ತಂದೆಯನ್ನು ಹತ್ಯೆಗೈದ ಬಳಿಕ ಆರೋಪಿ ತಲೆ ಮರೆಸಿಕೊಂಡಿದ್ದಾನೆ.
ನಂಜಪ್ಪ ತಮ್ಮ ಜಮೀನನ್ನು ಮಗನಿಗೆ ಹಾಗೂ ಮಗಳಿಗೆ ಹಂಚಿದ್ದರು. ಇತ್ತೀಚೆಗೆ 20 ಗುಂಟೆ ಜಮೀನನ್ನು ಮಾರಾಟ ಮಾಡಿ, ಬಂದ ಹಣದಲ್ಲಿ ಒಂದು ಭಾಗ ಮಗನಿಗೆ, ಒಂದು ಭಾಗ ಮಗಳು ಸೌಭಾಗ್ಯ ಎಂಬವರಿಗೆ ನೀಡಿದ್ದರು. ಸ್ವಲ್ಪ ಹಣವನ್ನು ನಂಜಪ್ಪ ಅವರು ಇಟ್ಟುಕೊಂಡಿದ್ದರು. ಆರೋಪಿ ಮಹದೇವ್ ತಂದೆ ನೀಡಿದ್ದ ಹಣ ಖರ್ಚು ಮಾಡಿಕೊಂಡು, ತಂದೆಯ ಬಳಿ ಹಣಕ್ಕಾಗಿ ಆಗಾಗ ಜಗಳ ಆಡುತ್ತಿದ್ದ ಎಂದು ತಿಳಿದು ಬಂದಿದೆ.
ಹಣದ ವಿಚಾರಕ್ಕೆ ಸೋಮವಾರ ರಾತ್ರಿ ಸಹ ತಂದೆಯ ಮನೆಗೆ ನುಗ್ಗಿ, ತಂದೆ-ತಾಯಿಗಳ ಮೇಲೆ ಮಹದೇವ್ ಹಲ್ಲೆ ಮಾಡಿದ್ದಾನೆ. ಬಳಿಕ ತಂದೆಯ ತಲೆಯ ಮೇಲೆ ಕಲ್ಲು ಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಇನ್ನೂ ಗಂಭೀರವಾಗಿ ಗಾಯಗೊಂಡಿರುವ ತಾಯಿ ಮಹದೇವಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Mandya murder, son fills own father over money and flees away. Mandya police are now on the hunt for the missing son.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm