ಬ್ರೇಕಿಂಗ್ ನ್ಯೂಸ್
27-02-24 06:18 pm Bangalore Correspondent ಕ್ರೈಂ
ಬೆಂಗಳೂರು, ಫೆ 27: ಡ್ರಗ್ ಪೆಡ್ಲರ್ಗಳ ವಿರುದ್ಧ ಸಿಸಿಬಿbಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಸೋಲದೇವನಹಳ್ಳಿ ಮತ್ತು ಆರ್ಎಂಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂವರು ವಿದೇಶಿ ಮೂಲದ ಡ್ರಗ್ ಪೆಡ್ಲರ್ಗಳು ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.
ಘಾನಾ ಮೂಲದ ಇಮ್ಯಾನ್ಯುಲ್ ಕ್ವಾಸಿ (32), ನೈಜೀರಿಯಾ ಮೂಲದ ಚೈನಸಾ ಸಿಪ್ರಿಲಾನ್ ಒಕೋಯ್ (38) ಹಾಗೂ ಕಲು ಚುಕ್ವಾ (40) ಎಂಬಾತನ ಸಹಿತ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರಿಂದ ಒಟ್ಟು 2.35 ಕೋಟಿ ಮೌಲ್ಯದ 730 ಗ್ರಾಂ ಎಂಡಿಎಂಎ ಕ್ರಿಸ್ಟಲ್ಸ್, 1273 ಎಕ್ಸ್ಟಸಿ ಪಿಲ್ಸ್, 42 ಗ್ರಾಂ ಹೈಡೋಗಾಂಜಾ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ 4 ಮೊಬೈಲ್ ಫೋನ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿದ್ದ ಬಂಧಿತ ಆರೋಪಿಗಳು ಪ್ರವಾಸಿ ವೀಸಾ, ಬ್ಯುಸಿನೆಸ್ ವೀಸಾದಡಿ ಭಾರತಕ್ಕೆ ಬಂದಿದ್ದು, ಪರಿಚಯಸ್ಥ ಗಿರಾಕಿಗಳಿಗೆ ವಿವಿಧ ರೀತಿಯ ನಿಷೇಧಿತ ಮಾದಕ ವಸ್ತುಗಳನ್ನು ಸರಬರಾಜು ಮಾಡುವ ಮೂಲಕ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದರು. ಈ ಪೈಕಿ ಓರ್ವ ಆರೋಪಿಯು ಈ ಹಿಂದೆ ಮುಂಬೈನಲ್ಲಿ ನೆಲೆಸಿದ್ದು, ಮಾದಕ ಪದಾರ್ಥಗಳ ಮಾರಾಟ ಪ್ರಕರಣದಲ್ಲಿ ಸೆರೆವಾಸ ಸಹ ಅನುಭವಿಸಿದ್ದ ಎಂದು ತಿಳಿದು ಬಂದಿದೆ.
ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಆರೋಪಿಯು ಸ್ಥಳೀಯನಾಗಿದ್ದು, ಪೋಸ್ಟ್ ಮೂಲಕ ಹೈಡೋಗಾಂಜಾವನ್ನು ತರಿಸಿಕೊಳ್ಳುತ್ತಿದ್ದನು. ಆರೋಪಿಯ ಕುರಿತು ಖಚಿತ ಮಾಹಿತಿಯ ಮೇರೆಗೆ ಆತನನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವಿದೇಶಿ ಮೂಲದವರ ಸಹಿತ 7 ಜನ ಡ್ರಗ್ ಪೆಡ್ಲರ್ಗಳ ಸೆರೆ : ಕಳೆದ ತಿಂಗಳು ಜನವರಿ 30 ರಂದು ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಸರಬರಾಜಿನಲ್ಲಿ ತೊಡಗಿದ್ದ ವಿದೇಶಿ ಮೂಲದವರ ಸಹಿತ 7 ಜನ ಆರೋಪಿಗಳನ್ನ ಸಿಸಿಬಿಯ ಮಾದಕ ವಸ್ತು ನಿಗ್ರಹದಳದ ಪೊಲೀಸರು ಬಂಧಿಸಿದ್ದರು. ನಗರದ ಜ್ಞಾನಭಾರತಿ, ಬಾಣಸವಾಡಿ, ಹುಳಿಮಾವು, ಪುಲಿಕೇಶಿನಗರ ವ್ಯಾಪ್ತಿಗಳಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಶೇಕ್ ಮೊಹಮ್ಮದ್ ಅರ್ಬಾಜ್, ಗೌತಮ್, ಕೆ. ಅಭಿಷೇಕ್, ಎನ್ ಜಾಧವ್, ರಿತಿಕ್ ರಾಜ್ ಎಂಬಾತನ ಸಹಿತ 7 ಜನ ಆರೋಪಿಗಳನ್ನು ಸೆರೆ ಹಿಡಿದಿದ್ದರು.
ಬಂಧಿತ ಆರೋಪಿಗಳಿಂದ 219 ಎಕ್ಸ್ಟಸಿ ಪಿಲ್ಸ್, 505 ಗ್ರಾಂ ಎಂಡಿಎಂಎ ಕ್ರಿಸ್ಟಲ್ಸ್, 130 ಗ್ರಾಂ ಚರಸ್, 100.88 ಗ್ರಾಂ ಕೊಕೇನ್ ಸಹಿತ 1.52 ಕೋಟಿ ಮೌಲ್ಯದ ಮಾದಕ ಪದಾರ್ಥಗಳು, 1 ದ್ವಿಚಕ್ರ ವಾಹನ, 6 ಮೊಬೈಲ್ ಫೋನ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಮಾಹಿತಿ ನೀಡಿದ್ದರು.
The CCB police have launched a massive crackdown against drug peddlers. A total of four accused, including three foreign-based drug peddlers, have been arrested in Soladevanahalli and RMC Yard police station limits.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm