ಬ್ರೇಕಿಂಗ್ ನ್ಯೂಸ್
01-03-24 03:43 pm HK News Desk ಕ್ರೈಂ
ಕಲಬುರಗಿ, ಮಾ 01: ಸಂಸದ ಉಮೇಶ ಜಾಧವ ಅವರ ಬೆಂಬಲಿಗ, ಬಿಎಸ್ಎನ್ಎಲ್ ಸಲಹಾ ಸಮಿತಿ ಸದಸ್ಯ ಗಿರೀಶ್ ಚಕ್ರ (31) ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.
ಇತ್ತೀಚೆಗೆ ಫೆಬ್ರವರಿ 14ರಂದು ಗಿರೀಶ್ ಚಕ್ರ ಅವರು ಬಿಎಸ್ಎನ್ಎಲ್ ಕಲಬುರಗಿ ವಿಭಾಗದ ಟೆಲಿಫೋನ್ ಅಡ್ವೈಸರಿ ಕಮಿಟಿ ಸದಸ್ಯರನ್ನಾಗಿ ನೇಮಕ ಆಗಿದ್ದರು. ಈ ಹಿನ್ನೆಲೆಯಲ್ಲಿ ಮದ್ಯಪಾನದ ಪಾರ್ಟಿ ಹೆಸರಿನಲ್ಲಿ ಗಿರೀಶ್ ಚಕ್ರ ಅವರನ್ನು ಸಾಗನೂರು ಗ್ರಾಮದ ಜಮೀನಿಗೆ ಕರೆಸಿಕೊಳ್ಳಲಾಗಿತ್ತು. ಆದರೆ, ಸ್ನೇಹಿತರೇ ಮಧ್ಯರಾತ್ರಿ ಕಣ್ಣಿಗೆ ಕಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸದ್ಯ ಕೊಲೆಯಾದ ಗಿರೀಶ್ ಚಕ್ರ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಕಲಬುರಗಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ದೇವಲ ಗಾಣಗಾಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಘಟನಾ ಸ್ಥಳಕ್ಕೆ ಡಿವೈಎಸ್ಪಿ ಮೊಹಮ್ಮದ್ ಶರೀಫ್ ರಾವುತರ್ ಹಾಗೂ ಸಿಪಿಐ ಚೆನ್ನಯ್ಯ ಹಿರೇಮಠ ಭೇಟಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸ್ಥಳಕ್ಕೆ ಶ್ವಾನ ದಳವೂ ಕೂಡ ತೆರಳಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಜಾಲ ಬೀಸಲಾಗಿದೆ.

ನಿನ್ನೆಯಷ್ಟೆ ಬಿಜೆಪಿ ಮುಖಂಡ ಆಳಂದ ತಾಲೂಕಿನ ಸರಸಂಬ ಗ್ರಾಮದ ಮಹಾಂತಪ್ಪ ಆಲೂರೆ (45) ಅವರ ಕೊಲೆ ನಡೆದಿತ್ತು. ಜಮೀನಿಗೆ ಹೋಗಿ ಬೈಕ್ ಮೇಲೆ ವಾಪಸ್ ಬರುತ್ತಿದ್ದ ಮಹಾಂತಪ್ಪ ಅವರನ್ನು ಕಾರಿನಲ್ಲಿ ಬಂದು ಅಡ್ಡಗಟ್ಟಿ ತಡೆದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿತ್ತು. ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೊಲೆ ನಡೆದಿರುವುದು ಜಿಲ್ಲೆಯ ಜನತೆಯನ್ನು ಬೆಚ್ಚಿ ಬೀಳುವಂತೆ ಮಾಡಿದೆ.
ಬಿಜೆಪಿ ಮುಖಂಡರಾಗಿದ್ದ ಮಹಾಂತಪ್ಪ, ಸರಸಂಬಾ ಗ್ರಾಮದಲ್ಲಿ ಧನಲಕ್ಷ್ಮೀ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು. ಸತತ ಮೂರು ಬಾರಿ ಗ್ರಾಮ ಪಂಚಾಯತಿ ಸದಸ್ಯರಾಗಿಯೂ ಆಯ್ಕೆಯಾಗಿದ್ದರು.
ತಮ್ಮ ಜಮೀನಿಗೆ ಹೋಗಿ ಬರುತ್ತಿರುವಾಗ ಕಾರಿನಲ್ಲಿ ಏಕಾಏಕಿ ಬಂದು ಇವರಿದ್ದ ಬೈಕ್ಗೆ ಅಡ್ಡಗಟ್ಟಿದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಹಲ್ಲೆಗೈದು ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಾಂತಪ್ಪರನ್ನು ಪಕ್ಕದ ಮಹಾರಾಷ್ಟ್ರದ ಸೋಲಾಪೂರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
Two BJP Workers killed In Kalaburagi in just one day. The family suspected the brutal murder of Girish Chakra, a close aide of BJP MP Dr Umesh Jadhav from Kalaburagi, to be a contract killing. The murder took place in Saganura village near Afzalpur taluk.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm