ಬ್ರೇಕಿಂಗ್ ನ್ಯೂಸ್
04-03-24 11:43 am Mangalore Correspondent ಕ್ರೈಂ
ಪುತ್ತೂರು, ಮಾ.4: ಕಾಲೇಜು ಆವರಣದಲ್ಲಿ ಕುಳಿತಿದ್ದ ಮೂವರು ಪಿಯುಸಿ ವಿದ್ಯಾರ್ಥಿನಿಯರ ಮೇಲೆ ಯುವಕನೊಬ್ಬ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಡಬ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಕೇರಳ ಮೂಲದ ವಿದ್ಯಾರ್ಥಿನಿ ಅಲೀನಾ ಸಿಬಿ, ಅರ್ಚನಾ, ಅಮೃತ ಆ್ಯಸಿಡ್ ದಾಳಿಗೆ ಒಳಗಾದ ವಿದ್ಯಾರ್ಥಿನಿಯರು. ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಯುವಕ ಆ್ಯಸಿಡ್ ಎರಚಿದ್ದಾನೆ. ಆರೋಪಿ ಮಾಸ್ಕ್, ತಲೆಗೆ ಟೋಪಿ ಹಾಕಿದ್ದು ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ.



ಕೂಡಲೇ ವಿದ್ಯಾರ್ಥಿನಿಯರನ್ನು ಕಡಬದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಯನ್ನು ಬಳಿಕ ಸ್ಥಳೀಯರು ಸೇರಿ ಹಿಡಿದು ಕಡಬ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಕೇರಳ ಮೂಲದ ಅಬಿನ್ ಎಂದು ಗುರುತಿಸಲಾಗಿದೆ. ಈತ ಕೇರಳದಲ್ಲಿ ಎಂಬಿಎ ಓದುತ್ತಿದ್ದು ಕಡಬಕ್ಕೆ ಬಂದು 17 ವರ್ಷದ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ಮಾಡಿದ್ದಾನೆ. ಒಬ್ಬ ವಿದ್ಯಾರ್ಥಿನಿ ಆತನ ಟಾರ್ಗೆಟ್ ಆಗಿತ್ತು. ಜೊತೆಗೆ ಕುಳಿತಿದ್ದವರ ಮೇಲೆಯೂ ಏಸಿಡ್ ಬಿದ್ದಿದೆ. ಒಬ್ಬಳು ವಿದ್ಯಾರ್ಥಿನಿಯ ದೇಹಕ್ಕೆ ಹೆಚ್ಚು ಸುಟ್ಟ ಗಾಯಗಳಾಗಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು ದ.ಕ. ಎಸ್ಪಿ ರಿಷ್ಯಂತ್ ಸಿಂಗ್ ಮಾಹಿತಿ ನೀಡಿದ್ದಾರೆ.
ವಿದ್ಯಾರ್ಥಿಗಳು ಶಾಲಾ ವರಾಂಡದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. ವಿದ್ಯಾರ್ಥಿನಿಯ ಮುಖದ ಭಾಗ ಸುಟ್ಟು ಹೋಗಿದೆ. ಒಬ್ಬಳು ವಿದ್ಯಾರ್ಥಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನೆಗೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ವನ್ ಸೈಡ್ ಪ್ರೀತಿಯ ಕಾರಣಕ್ಕೆ ಏಸಿಡ್ ದಾಳಿ ಮಾಡಿದ್ದಾನೆಂದು ಹೇಳಲಾಗುತ್ತಿದೆ.
Three Pre-University students were attacked with acid on Monday when they were inside their college in Kadaba of Dakshina Kannada district. The students are being treated at the local hospital and will shifted to Mangaluru for further treatment. The police have arrested the accused.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm