ಬ್ರೇಕಿಂಗ್ ನ್ಯೂಸ್
06-03-24 03:20 pm Bangalore Correspondent ಕ್ರೈಂ
ಬೆಂಗಳೂರು, ಮಾ 06: ಪ್ರತಿ ವರ್ಷದಂತೆ ಈ ಸಲವೂ ವೆಡ್ಡಿಂಗ್ ಆನಿವರ್ಸರಿಗೆ ಗಂಡ ಉಡುಗೊರೆ ಕೊಡಲಿಲ್ಲ ಎಂಬ ಕಾರಣಕ್ಕೆ ಮಲಗಿದ್ದ ಪತಿಗೆ ಆತನ ಪ್ರಿಯ ಪತ್ನಿ ಚಾಕುವಿನಿಂದ ಇರಿದ ಶಾಕಿಂಗ್ ಘಟನೆ ಬೆಳ್ಳಂದೂರಿನ ಜುನ್ನಸಂದ್ರದಲ್ಲಿ ನಡೆದಿದೆ.
ಗಾಯಾಳು ವ್ಯಕ್ತಿಯನ್ನು 37 ವರ್ಷ ವಯಸ್ಸಿನ ಕಿರಣ್ (ಹೆಸರು ಬದಲಿಸಲಾಗಿದೆ) ಎಂದು ಗುರ್ತಿಸಲಾಗಿದೆ. ಕಿರಣ್ ಅವರು ಖಾಸಗಿ ಸಂಸ್ಥೆಯೊಂದರಲ್ಲಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಪತ್ನಿ 35 ವರ್ಷ ವಯಸ್ಸಿನ ಸಂಧ್ಯಾ (ಹೆಸರು ಬದಲಿಸಲಾಗಿದೆ) ಗೃಹಿಣಿಯಾಗಿದ್ದು, ತಮ್ಮ ಪತಿ ಮೇಲಿನ ಸಿಟ್ಟಿನಿಂದ ಈ ಕೃತ್ಯ ಎಸಗಿದ್ದಾರೆ.
37 ವರ್ಷದ ಗಾಯಾಳು ಪತಿಯ ಹೇಳಿಕೆ ಆಧರಿಸಿ, ಆತನ 35 ವರ್ಷ ವಯಸ್ಸಿನ ಪತ್ನಿಯ ವಿರುದ್ಧ ಬೆಳ್ಳಂದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
'ಪ್ರತಿ ವರ್ಷ ವಿವಾಹ ವಾರ್ಷಿಕೋತ್ಸವದ ದಿನ ಪತ್ನಿಗೆ ಏನಾದರೂ ಗಿಫ್ಟ್ ನೀಡುತ್ತಿದ್ದೆ. ಆದರೆ, ಈ ವರ್ಷ ನನ್ನ ತಾತ ನಿಧನರಾಗಿದ್ದರಿಂದ ಹಿಂದಿನ ದಿನ ಗಿಫ್ಟ್ ಖರೀದಿಸಲು ಸಾಧ್ಯವಾಗಿರಲಿಲ್ಲ. ಅದೇ ಕೋಪದಲ್ಲಿದ್ದ ಪತ್ನಿ, ನಾನು ನಿದ್ದೆಗೆ ಜಾರಿದ್ದ ಸಮಯದಲ್ಲಿ ಚಾಕುವಿನಿಂದ ಇರಿದಿದ್ದಾಳೆ' ಎಂದು ಪತಿ ಪೊಲೀಸರೆದುರು ಹೇಳಿಕೆ ನೀಡಿದ್ದಾನೆ.
ಇರಿತದಿಂದ ಪತಿಯ ಕೈಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಕು ಇರಿತ ಪ್ರಕರಣವಾದ್ದರಿಂದ ಆಸ್ಪತ್ರೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರನ್ವಯ ಗಾಯಾಳುವಿನ ಹೇಳಿಕೆ ಪಡೆದುಕೊಂಡ ಬೆಳ್ಳಂದೂರು ಠಾಣೆ ಪೊಲೀಸರು, ಮಾರ್ಚ್ 1 ರಂದು ಕಿರಣ್ ನೀಡಿದ ದೂರಿನ ಆಧಾರದ ಮೇಲೆ ಸಂಧ್ಯಾ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಸಂಧ್ಯಾ ಅವರ ಬಳಿಕ ಹಲವು ಬಾರಿ ವಿಚಾರಣೆಯನ್ನೂ ನಡೆಸಲಾಗಿದೆ. ಅಂತಿಮವಾಗಿ ಇದು ಅಪರಾಧಿಕ ಕೃತ್ಯ ಎನ್ನುವುದಕ್ಕಿಂತಾ ಹೆಚ್ಚಾಗಿ ಕೌಟುಂಬಿಕ ಪ್ರಕರಣ ಆದ ಕಾರಣ ಗಂಡ - ಹೆಂಡತಿ ಇಬ್ಬರೂ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಲು ಪೊಲೀಸರು ಅವಕಾಶ ನೀಡಿದ್ದಾರೆ.
Bangalore Wife stabs husband for not giving gift on wedding anniversary. Police have taken wife into custody and have sent her to counselling centre.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm