ಬ್ರೇಕಿಂಗ್ ನ್ಯೂಸ್
06-03-24 03:20 pm Bangalore Correspondent ಕ್ರೈಂ
ಬೆಂಗಳೂರು, ಮಾ 06: ಪ್ರತಿ ವರ್ಷದಂತೆ ಈ ಸಲವೂ ವೆಡ್ಡಿಂಗ್ ಆನಿವರ್ಸರಿಗೆ ಗಂಡ ಉಡುಗೊರೆ ಕೊಡಲಿಲ್ಲ ಎಂಬ ಕಾರಣಕ್ಕೆ ಮಲಗಿದ್ದ ಪತಿಗೆ ಆತನ ಪ್ರಿಯ ಪತ್ನಿ ಚಾಕುವಿನಿಂದ ಇರಿದ ಶಾಕಿಂಗ್ ಘಟನೆ ಬೆಳ್ಳಂದೂರಿನ ಜುನ್ನಸಂದ್ರದಲ್ಲಿ ನಡೆದಿದೆ.
ಗಾಯಾಳು ವ್ಯಕ್ತಿಯನ್ನು 37 ವರ್ಷ ವಯಸ್ಸಿನ ಕಿರಣ್ (ಹೆಸರು ಬದಲಿಸಲಾಗಿದೆ) ಎಂದು ಗುರ್ತಿಸಲಾಗಿದೆ. ಕಿರಣ್ ಅವರು ಖಾಸಗಿ ಸಂಸ್ಥೆಯೊಂದರಲ್ಲಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಪತ್ನಿ 35 ವರ್ಷ ವಯಸ್ಸಿನ ಸಂಧ್ಯಾ (ಹೆಸರು ಬದಲಿಸಲಾಗಿದೆ) ಗೃಹಿಣಿಯಾಗಿದ್ದು, ತಮ್ಮ ಪತಿ ಮೇಲಿನ ಸಿಟ್ಟಿನಿಂದ ಈ ಕೃತ್ಯ ಎಸಗಿದ್ದಾರೆ.
37 ವರ್ಷದ ಗಾಯಾಳು ಪತಿಯ ಹೇಳಿಕೆ ಆಧರಿಸಿ, ಆತನ 35 ವರ್ಷ ವಯಸ್ಸಿನ ಪತ್ನಿಯ ವಿರುದ್ಧ ಬೆಳ್ಳಂದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
'ಪ್ರತಿ ವರ್ಷ ವಿವಾಹ ವಾರ್ಷಿಕೋತ್ಸವದ ದಿನ ಪತ್ನಿಗೆ ಏನಾದರೂ ಗಿಫ್ಟ್ ನೀಡುತ್ತಿದ್ದೆ. ಆದರೆ, ಈ ವರ್ಷ ನನ್ನ ತಾತ ನಿಧನರಾಗಿದ್ದರಿಂದ ಹಿಂದಿನ ದಿನ ಗಿಫ್ಟ್ ಖರೀದಿಸಲು ಸಾಧ್ಯವಾಗಿರಲಿಲ್ಲ. ಅದೇ ಕೋಪದಲ್ಲಿದ್ದ ಪತ್ನಿ, ನಾನು ನಿದ್ದೆಗೆ ಜಾರಿದ್ದ ಸಮಯದಲ್ಲಿ ಚಾಕುವಿನಿಂದ ಇರಿದಿದ್ದಾಳೆ' ಎಂದು ಪತಿ ಪೊಲೀಸರೆದುರು ಹೇಳಿಕೆ ನೀಡಿದ್ದಾನೆ.
ಇರಿತದಿಂದ ಪತಿಯ ಕೈಗೆ ಗಾಯವಾಗಿದೆ. ಕೂಡಲೇ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಕು ಇರಿತ ಪ್ರಕರಣವಾದ್ದರಿಂದ ಆಸ್ಪತ್ರೆಯ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದರನ್ವಯ ಗಾಯಾಳುವಿನ ಹೇಳಿಕೆ ಪಡೆದುಕೊಂಡ ಬೆಳ್ಳಂದೂರು ಠಾಣೆ ಪೊಲೀಸರು, ಮಾರ್ಚ್ 1 ರಂದು ಕಿರಣ್ ನೀಡಿದ ದೂರಿನ ಆಧಾರದ ಮೇಲೆ ಸಂಧ್ಯಾ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಸಂಬಂಧ ಸಂಧ್ಯಾ ಅವರ ಬಳಿಕ ಹಲವು ಬಾರಿ ವಿಚಾರಣೆಯನ್ನೂ ನಡೆಸಲಾಗಿದೆ. ಅಂತಿಮವಾಗಿ ಇದು ಅಪರಾಧಿಕ ಕೃತ್ಯ ಎನ್ನುವುದಕ್ಕಿಂತಾ ಹೆಚ್ಚಾಗಿ ಕೌಟುಂಬಿಕ ಪ್ರಕರಣ ಆದ ಕಾರಣ ಗಂಡ - ಹೆಂಡತಿ ಇಬ್ಬರೂ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳಲು ಪೊಲೀಸರು ಅವಕಾಶ ನೀಡಿದ್ದಾರೆ.
Bangalore Wife stabs husband for not giving gift on wedding anniversary. Police have taken wife into custody and have sent her to counselling centre.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm