ಬ್ರೇಕಿಂಗ್ ನ್ಯೂಸ್
10-03-24 05:07 pm Udupi Correspondent ಕ್ರೈಂ
ಉಡುಪಿ, ಮಾ.10: ಫೇಸ್ಬುಕ್ನಲ್ಲಿ ನಲ್ಲಿ ಪರಿಚಯವಾದ ವಂಚಕನೊಬ್ಬ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು ಪೋಸ್ ಕೊಟ್ಟು ಬ್ರಹ್ಮಾವರದ ಮಹಿಳೆಗೆ 54 ಲಕ್ಷ ರೂ. ಪಂಗನಾಮ ಹಾಕಿದ್ದಾನೆ.
ಫೆಬ್ರವರಿ 10 ರಂದು ಫೇಸ್ಬುಕ್ನಲ್ಲಿ ಮಿಹಿಯಾಲ್ ನೀಲ್ಗೆನ್ ಎಂಬ ಆನ್ಲೈನ್ ವಂಚಕ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂಬುದಾಗಿ ಹೇಳಿಕೊಂಡು ಬ್ರಹ್ಮಾವರದ ಲವೀನಾ ಸ್ಟೆಫನಿ ಕ್ರಸ್ತಾ (42) ಎಂಬವರ ಜೊತೆ ಸ್ನೇಹ ಬೆಳೆಸಿಕೊಂಡು, ವಾಟ್ಸ್ಅಪ್ ನಲ್ಲಿ ಇಬ್ಬರು ಚಾಟಿಂಗ್ ನಡೆಸಿ ಸ್ನೇಹಿತರಾಗಿದ್ದಾರೆ. ನಂತರ ಲವೀನಾ ಅವ್ರಿಗೆ ಗಿಫ್ಟ್ ಕಳುಹಿಸುವುದಾಗಿ ನಂಬಿಸಿ ಫೆ.1 ರಂದು, ದೆಹಲಿಯ ಪಾರ್ಸೆಲ್ ಆಫೀಸ್ನಿಂದ ಅಪರಿಚಿತ ವ್ಯಕ್ತಿ ಒಬ್ಬ ಮೊಬೈಲ್ ನಂಬರ್ ಗೆ ಕರೆ ಮಾಡಿ ಜರ್ಮನಿಯಿಂದ ಬಂದಿರುವ ಪಾರ್ಸೆಲ್ ನಲ್ಲಿ ಜ್ಯುವೆಲರಿ, ಯುರೋ ಕರೆನ್ಸಿ ಇದ್ದು ಈ ಬಗ್ಗೆ ಪಾರ್ಸೆಲ್ ಪಡೆಯಲು ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೇಟ್, ಕಸ್ಟಂ ಸರ್ಟಿಫಿಕೇಟ್ ಪಡೆಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದಾನೆ. ಲವೀನಾ ಅದನ್ನು ನಂಬಿ, ಆರೋಪಿ ಕೊಟ್ಟ ಬ್ಯಾಂಕ್ ಡೀಟೇಲ್ಸ್ ಗೆ, ಗೂಗಲ್ ಪೇ ಮುಖಾಂತರ ಹಂತ ಹಂತವಾಗಿ ಒಟ್ಟು 54 ಲಕ್ಷದ 74 ಸಾವಿರ ಹಣವನ್ನ ಪಾವತಿಸಿದ್ದಾರೆ.
ಆರೋಪಿ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು, ಗಿಫ್ಟ್ ಪಾರ್ಸೆಲ್ ಕಳಿಸುವುದಾಗಿ ನಂಬಿಸಿ, ಪಾರ್ಸೆಲ್ ಪಡೆಯಲು ಭಾರೀ ಪ್ರಮಾಣದ ಹಣವನ್ನು ಪಡೆದು, ಪಾರ್ಸೆಲ್ ಕಳುಹಿಸದೇ, ಕಳುಹಿಸಿದ ಹಣವನ್ನು ವಾಪಾಸು ನೀಡದೇ ಮೋಸ ಮಾಡಿದ್ದಾನೆ ಎಂದು ಹೇಳಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಲವೀನಾ ಕೇಸ್ ದಾಖಲಿಸಿದ್ದಾರೆ.
ನಯ ವಂಚಕನ ಒಂದೇ ಫೋನ್ ಕರೆಗೆ ಕಷ್ಟಪಟ್ಟು ದುಡಿದ ಲಕ್ಷಗಟ್ಟಲೆ ಹಣ ಮಂಗ ಮಾಯ ಆಗಿದ್ದು ಮಾತ್ರ ವಿಪರ್ಯಾಸ.
Udupi bhramavara Laveen Stephenie crasta looses 54 lakhs to online fraud over parcel charges on Facebook. A case has been registered at the cyber police station in Udupi. Online fraudster introduced himself as a Germany military officer.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm