ಬ್ರೇಕಿಂಗ್ ನ್ಯೂಸ್
10-03-24 05:07 pm Udupi Correspondent ಕ್ರೈಂ
ಉಡುಪಿ, ಮಾ.10: ಫೇಸ್ಬುಕ್ನಲ್ಲಿ ನಲ್ಲಿ ಪರಿಚಯವಾದ ವಂಚಕನೊಬ್ಬ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು ಪೋಸ್ ಕೊಟ್ಟು ಬ್ರಹ್ಮಾವರದ ಮಹಿಳೆಗೆ 54 ಲಕ್ಷ ರೂ. ಪಂಗನಾಮ ಹಾಕಿದ್ದಾನೆ.
ಫೆಬ್ರವರಿ 10 ರಂದು ಫೇಸ್ಬುಕ್ನಲ್ಲಿ ಮಿಹಿಯಾಲ್ ನೀಲ್ಗೆನ್ ಎಂಬ ಆನ್ಲೈನ್ ವಂಚಕ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂಬುದಾಗಿ ಹೇಳಿಕೊಂಡು ಬ್ರಹ್ಮಾವರದ ಲವೀನಾ ಸ್ಟೆಫನಿ ಕ್ರಸ್ತಾ (42) ಎಂಬವರ ಜೊತೆ ಸ್ನೇಹ ಬೆಳೆಸಿಕೊಂಡು, ವಾಟ್ಸ್ಅಪ್ ನಲ್ಲಿ ಇಬ್ಬರು ಚಾಟಿಂಗ್ ನಡೆಸಿ ಸ್ನೇಹಿತರಾಗಿದ್ದಾರೆ. ನಂತರ ಲವೀನಾ ಅವ್ರಿಗೆ ಗಿಫ್ಟ್ ಕಳುಹಿಸುವುದಾಗಿ ನಂಬಿಸಿ ಫೆ.1 ರಂದು, ದೆಹಲಿಯ ಪಾರ್ಸೆಲ್ ಆಫೀಸ್ನಿಂದ ಅಪರಿಚಿತ ವ್ಯಕ್ತಿ ಒಬ್ಬ ಮೊಬೈಲ್ ನಂಬರ್ ಗೆ ಕರೆ ಮಾಡಿ ಜರ್ಮನಿಯಿಂದ ಬಂದಿರುವ ಪಾರ್ಸೆಲ್ ನಲ್ಲಿ ಜ್ಯುವೆಲರಿ, ಯುರೋ ಕರೆನ್ಸಿ ಇದ್ದು ಈ ಬಗ್ಗೆ ಪಾರ್ಸೆಲ್ ಪಡೆಯಲು ಪಾರ್ಸೆಲ್ ಚಾರ್ಜ್, ಮನಿ ಲ್ಯಾಂಡಿಂಗ್ ಸರ್ಟಿಫಿಕೇಟ್, ಕಸ್ಟಂ ಸರ್ಟಿಫಿಕೇಟ್ ಪಡೆಯಲು ಹಣ ಪಾವತಿಸಬೇಕು ಎಂದು ತಿಳಿಸಿದ್ದಾನೆ. ಲವೀನಾ ಅದನ್ನು ನಂಬಿ, ಆರೋಪಿ ಕೊಟ್ಟ ಬ್ಯಾಂಕ್ ಡೀಟೇಲ್ಸ್ ಗೆ, ಗೂಗಲ್ ಪೇ ಮುಖಾಂತರ ಹಂತ ಹಂತವಾಗಿ ಒಟ್ಟು 54 ಲಕ್ಷದ 74 ಸಾವಿರ ಹಣವನ್ನ ಪಾವತಿಸಿದ್ದಾರೆ.
ಆರೋಪಿ ಜರ್ಮನಿಯಲ್ಲಿ ಮಿಲಿಟರಿ ಅಧಿಕಾರಿ ಎಂದು, ಗಿಫ್ಟ್ ಪಾರ್ಸೆಲ್ ಕಳಿಸುವುದಾಗಿ ನಂಬಿಸಿ, ಪಾರ್ಸೆಲ್ ಪಡೆಯಲು ಭಾರೀ ಪ್ರಮಾಣದ ಹಣವನ್ನು ಪಡೆದು, ಪಾರ್ಸೆಲ್ ಕಳುಹಿಸದೇ, ಕಳುಹಿಸಿದ ಹಣವನ್ನು ವಾಪಾಸು ನೀಡದೇ ಮೋಸ ಮಾಡಿದ್ದಾನೆ ಎಂದು ಹೇಳಿ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಲವೀನಾ ಕೇಸ್ ದಾಖಲಿಸಿದ್ದಾರೆ.
ನಯ ವಂಚಕನ ಒಂದೇ ಫೋನ್ ಕರೆಗೆ ಕಷ್ಟಪಟ್ಟು ದುಡಿದ ಲಕ್ಷಗಟ್ಟಲೆ ಹಣ ಮಂಗ ಮಾಯ ಆಗಿದ್ದು ಮಾತ್ರ ವಿಪರ್ಯಾಸ.
Udupi bhramavara Laveen Stephenie crasta looses 54 lakhs to online fraud over parcel charges on Facebook. A case has been registered at the cyber police station in Udupi. Online fraudster introduced himself as a Germany military officer.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm