ಬ್ರೇಕಿಂಗ್ ನ್ಯೂಸ್
19-03-24 08:53 pm Mangaluru Correspondent ಕ್ರೈಂ
ಮಂಗಳೂರು, ಮಾ.19: ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಪೊಲೀಸರು ರೌಡಿಗಳ ಬಗ್ಗೆ ನಿಗಾ ವಹಿಸಿದ್ದು, ಮಂಗಳೂರಿನ ಮೂವರು ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.

ಉಳ್ಳಾಲ ಕೋಟೆಪುರ ನಿವಾಸಿ ಮಹಮ್ಮದ್ ಕಬೀರ್ ಅಲಿಯಾಸ್ ಚಬ್ಬಿ(31), ಗುರುಪುರ ಮೂಳೂರು ನಿವಾಸಿ ನವಾಜ್ (30) ಮತ್ತು ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಶಕ್ತಿನಗರ ನಿವಾಸಿ ಜಯಪ್ರಶಾಂತ್ (30) ಗೂಂಡಾ ಕಾಯ್ದೆಯಡಿ ಬಂಧಿತರಾದವರು.
ಮಹಮ್ಮದ್ ಕಬೀರ್ 14 ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದು, ಒಂದು ಕೊಲೆ, ಮೂರು ಕೊಲೆಯತ್ನ, ಆರು ಗಲಭೆ ಪ್ರಕರಣ, ಮೂರು ಹಲ್ಲೆ, ಒಂದು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ. ನವಾಜ್ ಬಜ್ಪೆ, ಕಾವೂರು, ಮಂಗಳೂರು ಗ್ರಾಮಾಂತರ, ಕದ್ರಿ, ಬರ್ಕೆ ಠಾಣೆಯಲ್ಲಿ ಎಂಟು ಪ್ರಕರಣಗಳನ್ನು ಹೊಂದಿದ್ದಾನೆ. ಒಂದು ಕೊಲೆ, ಒಂದು ಕೊಲೆಯತ್ನ, ಒಂದು ಕೊಲೆಗೆ ಸಂಚು, ಎರಡು ಗಾಂಜಾ ಸೇವನೆ, ಮೂರು ಡ್ರಗ್ ಪೆಡ್ಲಿಂಗ್ ಪ್ರಕರಣ ಹೊಂದಿದ್ದಾನೆ. ಜಯಪ್ರಶಾಂತ್ ಎಂಟು ಪ್ರಕರಣಗಳನ್ನು ಎದುರಿಸುತ್ತಿದ್ದು, ಮೂರು ಕೋಮು ಗಲಭೆ, ಒಂದು ಕೊಲೆಯತ್ನ, ನಾಲ್ಕು ನೈತಿಕ ಪೊಲೀಸ್ ಪ್ರಕರಣ ಮತ್ತು ಕಾನೂನಿಗೆ ವಿರುದ್ಧವಾಗಿ ಗುಂಪು ಕೂಡಿರುವಂತಹ ಪ್ರಕರಣ ಹೊಂದಿದ್ದಾನೆ.
ಇವರು ಅಪರಾಧ ಪ್ರಕರಣಗಳಲ್ಲಿ ಹಲವು ಬಾರಿ ಬಂಧಿತರಾಗಿ ಜೈಲು ಪಾಲಾಗಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡ ಬಳಿಕ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿಸಿದ್ದಾರೆ. ಹೀಗಾಗಿ ಅಪರಾಧ ಪ್ರವೃತ್ತಿಯನ್ನು ಮೈಗೂಡಿಸಿರುವುದು ಮತ್ತು ಸಮಾಜದ ಶಾಂತಿ ಕದಡುವ ಪ್ರವೃತ್ತಿಯವರಾಗಿದ್ದರಿಂದ ಅವರನ್ನು ಬಂಧಿಸಿ ಜೈಲಿನಲ್ಲೇ ಇಡಬೇಕೆಂಬ ಪೊಲೀಸರ ಕೋರಿಕೆಯಂತೆ ಗೂಂಡಾ ಕಾಯ್ದೆ ಜಾರಿಗೊಳಿಸಿದ್ದಾಗಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
Three accused booked under Goonda Act in Mangalore. Nawaz from Gurupur, Mohammed Kabeer from Kotepura and Jayaprashanth from Shakti Nagara.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm