ಬ್ರೇಕಿಂಗ್ ನ್ಯೂಸ್
19-03-24 08:53 pm Mangaluru Correspondent ಕ್ರೈಂ
ಮಂಗಳೂರು, ಮಾ.19: ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಪೊಲೀಸರು ರೌಡಿಗಳ ಬಗ್ಗೆ ನಿಗಾ ವಹಿಸಿದ್ದು, ಮಂಗಳೂರಿನ ಮೂವರು ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.
ಉಳ್ಳಾಲ ಕೋಟೆಪುರ ನಿವಾಸಿ ಮಹಮ್ಮದ್ ಕಬೀರ್ ಅಲಿಯಾಸ್ ಚಬ್ಬಿ(31), ಗುರುಪುರ ಮೂಳೂರು ನಿವಾಸಿ ನವಾಜ್ (30) ಮತ್ತು ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಶಕ್ತಿನಗರ ನಿವಾಸಿ ಜಯಪ್ರಶಾಂತ್ (30) ಗೂಂಡಾ ಕಾಯ್ದೆಯಡಿ ಬಂಧಿತರಾದವರು.
ಮಹಮ್ಮದ್ ಕಬೀರ್ 14 ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದು, ಒಂದು ಕೊಲೆ, ಮೂರು ಕೊಲೆಯತ್ನ, ಆರು ಗಲಭೆ ಪ್ರಕರಣ, ಮೂರು ಹಲ್ಲೆ, ಒಂದು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ. ನವಾಜ್ ಬಜ್ಪೆ, ಕಾವೂರು, ಮಂಗಳೂರು ಗ್ರಾಮಾಂತರ, ಕದ್ರಿ, ಬರ್ಕೆ ಠಾಣೆಯಲ್ಲಿ ಎಂಟು ಪ್ರಕರಣಗಳನ್ನು ಹೊಂದಿದ್ದಾನೆ. ಒಂದು ಕೊಲೆ, ಒಂದು ಕೊಲೆಯತ್ನ, ಒಂದು ಕೊಲೆಗೆ ಸಂಚು, ಎರಡು ಗಾಂಜಾ ಸೇವನೆ, ಮೂರು ಡ್ರಗ್ ಪೆಡ್ಲಿಂಗ್ ಪ್ರಕರಣ ಹೊಂದಿದ್ದಾನೆ. ಜಯಪ್ರಶಾಂತ್ ಎಂಟು ಪ್ರಕರಣಗಳನ್ನು ಎದುರಿಸುತ್ತಿದ್ದು, ಮೂರು ಕೋಮು ಗಲಭೆ, ಒಂದು ಕೊಲೆಯತ್ನ, ನಾಲ್ಕು ನೈತಿಕ ಪೊಲೀಸ್ ಪ್ರಕರಣ ಮತ್ತು ಕಾನೂನಿಗೆ ವಿರುದ್ಧವಾಗಿ ಗುಂಪು ಕೂಡಿರುವಂತಹ ಪ್ರಕರಣ ಹೊಂದಿದ್ದಾನೆ.
ಇವರು ಅಪರಾಧ ಪ್ರಕರಣಗಳಲ್ಲಿ ಹಲವು ಬಾರಿ ಬಂಧಿತರಾಗಿ ಜೈಲು ಪಾಲಾಗಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡ ಬಳಿಕ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿಸಿದ್ದಾರೆ. ಹೀಗಾಗಿ ಅಪರಾಧ ಪ್ರವೃತ್ತಿಯನ್ನು ಮೈಗೂಡಿಸಿರುವುದು ಮತ್ತು ಸಮಾಜದ ಶಾಂತಿ ಕದಡುವ ಪ್ರವೃತ್ತಿಯವರಾಗಿದ್ದರಿಂದ ಅವರನ್ನು ಬಂಧಿಸಿ ಜೈಲಿನಲ್ಲೇ ಇಡಬೇಕೆಂಬ ಪೊಲೀಸರ ಕೋರಿಕೆಯಂತೆ ಗೂಂಡಾ ಕಾಯ್ದೆ ಜಾರಿಗೊಳಿಸಿದ್ದಾಗಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
Three accused booked under Goonda Act in Mangalore. Nawaz from Gurupur, Mohammed Kabeer from Kotepura and Jayaprashanth from Shakti Nagara.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm