ಬ್ರೇಕಿಂಗ್ ನ್ಯೂಸ್
19-03-24 08:53 pm Mangaluru Correspondent ಕ್ರೈಂ
ಮಂಗಳೂರು, ಮಾ.19: ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ಪೊಲೀಸರು ರೌಡಿಗಳ ಬಗ್ಗೆ ನಿಗಾ ವಹಿಸಿದ್ದು, ಮಂಗಳೂರಿನ ಮೂವರು ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.

ಉಳ್ಳಾಲ ಕೋಟೆಪುರ ನಿವಾಸಿ ಮಹಮ್ಮದ್ ಕಬೀರ್ ಅಲಿಯಾಸ್ ಚಬ್ಬಿ(31), ಗುರುಪುರ ಮೂಳೂರು ನಿವಾಸಿ ನವಾಜ್ (30) ಮತ್ತು ಹಿಂದು ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಶಕ್ತಿನಗರ ನಿವಾಸಿ ಜಯಪ್ರಶಾಂತ್ (30) ಗೂಂಡಾ ಕಾಯ್ದೆಯಡಿ ಬಂಧಿತರಾದವರು.
ಮಹಮ್ಮದ್ ಕಬೀರ್ 14 ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದು, ಒಂದು ಕೊಲೆ, ಮೂರು ಕೊಲೆಯತ್ನ, ಆರು ಗಲಭೆ ಪ್ರಕರಣ, ಮೂರು ಹಲ್ಲೆ, ಒಂದು ಮಾನಭಂಗ ಯತ್ನ ಪ್ರಕರಣ ದಾಖಲಾಗಿದೆ. ನವಾಜ್ ಬಜ್ಪೆ, ಕಾವೂರು, ಮಂಗಳೂರು ಗ್ರಾಮಾಂತರ, ಕದ್ರಿ, ಬರ್ಕೆ ಠಾಣೆಯಲ್ಲಿ ಎಂಟು ಪ್ರಕರಣಗಳನ್ನು ಹೊಂದಿದ್ದಾನೆ. ಒಂದು ಕೊಲೆ, ಒಂದು ಕೊಲೆಯತ್ನ, ಒಂದು ಕೊಲೆಗೆ ಸಂಚು, ಎರಡು ಗಾಂಜಾ ಸೇವನೆ, ಮೂರು ಡ್ರಗ್ ಪೆಡ್ಲಿಂಗ್ ಪ್ರಕರಣ ಹೊಂದಿದ್ದಾನೆ. ಜಯಪ್ರಶಾಂತ್ ಎಂಟು ಪ್ರಕರಣಗಳನ್ನು ಎದುರಿಸುತ್ತಿದ್ದು, ಮೂರು ಕೋಮು ಗಲಭೆ, ಒಂದು ಕೊಲೆಯತ್ನ, ನಾಲ್ಕು ನೈತಿಕ ಪೊಲೀಸ್ ಪ್ರಕರಣ ಮತ್ತು ಕಾನೂನಿಗೆ ವಿರುದ್ಧವಾಗಿ ಗುಂಪು ಕೂಡಿರುವಂತಹ ಪ್ರಕರಣ ಹೊಂದಿದ್ದಾನೆ.
ಇವರು ಅಪರಾಧ ಪ್ರಕರಣಗಳಲ್ಲಿ ಹಲವು ಬಾರಿ ಬಂಧಿತರಾಗಿ ಜೈಲು ಪಾಲಾಗಿದ್ದು, ಜಾಮೀನು ಮೇಲೆ ಬಿಡುಗಡೆಗೊಂಡ ಬಳಿಕ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿಸಿದ್ದಾರೆ. ಹೀಗಾಗಿ ಅಪರಾಧ ಪ್ರವೃತ್ತಿಯನ್ನು ಮೈಗೂಡಿಸಿರುವುದು ಮತ್ತು ಸಮಾಜದ ಶಾಂತಿ ಕದಡುವ ಪ್ರವೃತ್ತಿಯವರಾಗಿದ್ದರಿಂದ ಅವರನ್ನು ಬಂಧಿಸಿ ಜೈಲಿನಲ್ಲೇ ಇಡಬೇಕೆಂಬ ಪೊಲೀಸರ ಕೋರಿಕೆಯಂತೆ ಗೂಂಡಾ ಕಾಯ್ದೆ ಜಾರಿಗೊಳಿಸಿದ್ದಾಗಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
Three accused booked under Goonda Act in Mangalore. Nawaz from Gurupur, Mohammed Kabeer from Kotepura and Jayaprashanth from Shakti Nagara.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am