ಬ್ರೇಕಿಂಗ್ ನ್ಯೂಸ್
20-03-24 06:31 pm Mangalore Correspondent ಕ್ರೈಂ
ಉಳ್ಳಾಲ, ಮಾ.20: ಸೋಮೇಶ್ವರ ಉಚ್ಚಿಲದ ನಾಗತೋಟ ಎಂಬಲ್ಲಿನ ಖಾಸಗಿ ಜಾಗದ ಮರಳು ಅಡ್ಡೆಗೆ ಸಿಸಿಬಿ ಪೊಲೀಸರು, ಭೂ ಮತ್ತು ಗಣಿ ವಿಜ್ಞಾನ ಅಧಿಕಾರಿಗಳು ಜಂಟಿಯಾಗಿ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಅಪಾರ ಪ್ರಮಾಣದಲ್ಲಿ ದಾಸ್ತಾನಿರಿಸಿದ್ದ ಮರಳು ಮತ್ತು ಮರಳು ಸಾಗಾಟ ನಡೆಸುತ್ತಿದ್ದ ನಾಲ್ಕು ನಾಡದೋಣಿಗಳನ್ನ ವಶಪಡಿಸಿಕೊಂಡಿದ್ದಾರೆ.
ಸೋಮೇಶ್ವರ ಉಚ್ಚಿಲದ ಬಟ್ಟಪ್ಪಾಡಿ ಸಮುದ್ರ ತೀರದಿಂದ ದಿನನಿತ್ಯವೂ ಅಕ್ರಮವಾಗಿ ಮರಳು ತೆಗೆದು ನಾಡ ದೋಣಿಗಳ ಮೂಲಕ ಹೊಳೆಯಲ್ಲಿ ಸಾಗಾಟ ನಡೆಸಿ ನಾಗತೋಟ ನಿವಾಸಿ ಮಹಮ್ಮದ್ ಆಲಿ ಎಂಬವರ ಖಾಸಗಿ ಜಮೀನಿನಲ್ಲಿ ದಾಸ್ತಾನು ಇರಿಸಲಾಗುತ್ತಿತ್ತು. ದಾಸ್ತಾನು ಇರಿಸಿದ್ದ ಮರಳನ್ನು ಮಧ್ಯರಾತ್ರಿ ಕೇರಳಕ್ಕೆ ಸಾಗಾಟ ನಡೆಸಲಾಗುತ್ತಿತ್ತು. ಬಟ್ಟಪ್ಪಾಡಿಯಲ್ಲಿ ನಡೆಯುತ್ತಿದ್ದ ಮರಳು ಮಾಫಿಯಾ ಬಗ್ಗೆ ಸ್ಥಳೀಯ ಸಾಮಾಜಿಕ ಕಾರ್ಯಕರ್ತರಾದ ಸುಖೇಶ್ ಉಚ್ಚಿಲ್ ಮತ್ತು ರಂಜಿತ್ ಬಟ್ಟಪ್ಪಾಡಿ ಅವರು ಸ್ಥಳೀಯ ಪೊಲೀಸರಿಗೆ ಪದೇ ಪದೇ ದೂರು ನೀಡಿದ್ದರೂ ಅಕ್ರಮ ಮರಳುಗಾರಿಕೆಗೆ ಕಡಿವಾಣ ಬಿದ್ದಿರಲಿಲ್ಲ.



ಎಗ್ಗಿಲ್ಲದೆ ಮುಂದುವರೆದಿದ್ದ ಅಕ್ರಮ ಮರಳುಗಾರಿಕೆಯ ಬಗ್ಗೆ ಸುಖೇಶ್ ಮತ್ತು ರಂಜಿತ್ ಅವರು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರಿಗೇ ಮಂಗಳವಾರ ಕರೆ ಮಾಡಿ ತಿಳಿಸಿದ್ದರು. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಸಿಸಿಬಿ ಪೊಲೀಸರನ್ನೊಳಗೊಂಡ ತಂಡವು ಬುಧವಾರ ಬೆಳ್ಳಂಬೆಳಗ್ಗೆ ನಾಗತೋಟದ ಅಕ್ರಮ ಮರಳು ಅಡ್ಡೆಗೆ ದಿಢೀರ್ ದಾಳಿ ನಡೆಸಿದ್ದು ನಂತರ ಉಳ್ಳಾಲ ಪೊಲೀಸರಿಗೂ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಸೇರಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಗಳಾದ ಕುಂಜತ್ತೂರಿನ ಜಯರಾಮ್ ಶೆಟ್ಟಿ, ಇಬ್ರಾಹಿಂ ಕೋಟೆಪುರ, ವಿನೋದ್ ಉಚ್ಚಿಲ್ ಯಾನೆ ಹನಿ ಹಿಂದುಸ್ಥಾನಿ, ಚಂದ್ರ ಸೋಮೇಶ್ವರ ಮತ್ತು ಸುನಿಲ್ ತಲೆಮರೆಸಿಕೊಂಡಿದ್ದಾರೆ. ವಶ ಪಡಿಸಿಕೊಳ್ಳಲಾದ ಅಪಾರ ಪ್ರಮಾಣದ ಮರಳು ಮತ್ತು ನಾಡ ದೋಣಿಗಳನ್ನು ಪೊಲೀಸರು ಭೂ ಮತ್ತು ಗಣಿ ವಿಜ್ನಾನ ಇಲಾಖಾಧಿರಿಗಳಿಗೆ ಹಸ್ತಾಂತರಿಸಿದ್ದಾರೆ.
ಅಕ್ರಮ ಮರಳನ್ನು ದಾಸ್ತಾನು ಇರಿಸಿ ಮರಳು ಮಾಫಿಯಾಗಳನ್ನು ಬೆಂಬಲಿಸುತ್ತಿದ್ದ ಮಹಮ್ಮದ್ ಆಲಿ ಅವರ ಜಮೀನನ್ನು ಮುಟ್ಟುಗೋಲು ಹಾಕುವಂತೆ ಸುಖೇಶ್ ಉಚ್ಚಿಲ್ ಅವರು ಜಿಲ್ಲಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.
Mangalore Uchila illegal sand mining centre raid by CCB Police, four boats, sand seized.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 06:13 pm
HK News Staffer
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm