ಬ್ರೇಕಿಂಗ್ ನ್ಯೂಸ್
21-03-24 07:32 pm HK News Desk ಕ್ರೈಂ
ಮಂಡ್ಯ, ಮಾ 21: ನಾಗಮಂಗಲ ತಾಲೂಕಿನ ಆದಿಚುಂಚನಗಿರಿಯಲ್ಲಿ ಮಹಿಳೆ ಮತ್ತು ಎರಡೂವರೆ ವರ್ಷದ ಮಗುವೊಂದನ್ನು ದುಷ್ಕರ್ಮಿಗಳು ತುಂಡರಿಸಿ ಚೀಲದಲ್ಲಿ ಕಟ್ಟಿ ಕೆರೆಗೆ ಬಿಸಾಡಿರುವ ಘಟನೆ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕಲ್ಕೆರೆ ಗ್ರಾಮದ ಜಯಮ್ಮ (46), ಅವರ ಎರಡೂವರೆ ವರ್ಷದ ಮೊಮ್ಮಗಳು ರಿಷಿಕಾ ಕೊಲೆಯಾದವರು. ಜಯಮ್ಮ ಮಾ.12ರಂದು ಆದಿಚುಂಚನಗಿರಿಯ ವ್ಯಕ್ತಿಯೊಬ್ಬರು ತನಗೆ ಹಣ ನೀಡಬೇಕಾಗಿದ್ದು, ಅವರಿಂದ ಹಣ ಪಡೆದು ಬರುವುದಾಗಿ ತಿಳಿಸಿ ಮನೆಯಿಂದ ಮೊಮ್ಮಗಳ ಜತೆ ಬಂದಿದ್ದರು. ನಂತರ ಮಾ.18ರ ವರೆಗೂ ಮನೆಗೆ ಹಿಂದಿರುಗಿರಲಿಲ್ಲ. ಜಯಮ್ಮ ಅವರ ಮೊಬೈಲ್ ಫೋನ್ ಸ್ವೀಚ್ ಆಫ್ ಆಗಿತ್ತು. ಹೀಗಾಗಿ, ಜಯಮ್ಮ ಅವರ ಪುತ್ರ ಪ್ರವೀಣ್ ಅವರು ತಾಯಿ ಮತ್ತು ತನ್ನ ಪುತ್ರಿ ಕಾಣೆಯಾಗಿರುವುದಾಗಿ ಅಜ್ಜಂಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಮಾ.18ರಂದು ಮಧ್ಯಾಹ್ನ ಪ್ರವೀಣ್ ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಯೊಬ್ಬ ಜಯಮ್ಮ ಮತ್ತು ರಿಷಿಕಾಳನ್ನು ಕೊಲೆ ಮಾಡಿ ಚೀಲದಲ್ಲಿ ಕಟ್ಟಿ ಆದಿಚುಂಚನಗಿರಿ ಕಲ್ಯಾಣಿ ಬಳಿ ಇರುವ ಕೆರೆಗೆ ಬಿಸಾಕಿರುವುದಾಗಿ ತಿಳಿಸಿ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದ. ಪ್ರವೀಣ್ ಪೊಲೀಸರ ನೆರವಿನೊಂದಿಗೆ ಕೆರೆಗೆ ಬಂದು ಹುಡುಕಿದಾಗ ಚೀಲದಲ್ಲಿ ತುಂಡರಿಸಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದವು. ಮುಖದ ಗುರುತು ಸಿಗದಂತೆ ಜಯಮ್ಮ ಮತ್ತು ರಿಷಿಕಾಳನ್ನು ಕೊಲೆ ಮಾಡಲಾಗಿದೆ.
ಸ್ಥಳಕ್ಕಾಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಎಎಸ್ಪಿ ತಿಮ್ಮಯ್ಯ, ಸಿಪಿಐ ಬಿ.ಆರ್. ಗೌಡ ಪರಿಶೀಲನೆ ನಡೆಸಿದರು. ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Mandya body of two year old grand daughter and grand mother found in Lake. The body has been cut into pieces and thrown into the lake.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am