ಬ್ರೇಕಿಂಗ್ ನ್ಯೂಸ್
21-03-24 08:04 pm HK News Desk ಕ್ರೈಂ
ರಾಯಚೂರು, ಮಾ 21: ಮದುವೆ ಆಗಿದ್ದರೂ ಮತ್ತೊಬ್ಬನ ಮೋಹಿಸಿದ ಮಹಿಳೆ ಗಂಡನನ್ನೇ ಕೊಂದು ಹಾಕಿದ್ದಾಳೆ. ಬಿಜೆಪಿಯ ಮಾಜಿ ತಾಲೂಕು ಪಂಚಾಯತಿ ಸದಸ್ಯನೊರ್ವ ಪತ್ನಿಯಿಂದಲೇ ಕೊಲೆಯಾಗಿದ್ದಾನೆ. ರಾಜು ನಾಯ್ಕ್ (38) ಕೊಲೆಯಾದವರು. ಸ್ನೇಹಾ ಕೊಲೆ ಆರೋಪಿ ಆಗಿದ್ದಾಳೆ. ರಾಯಚೂರಿನ ಸಿಂಗನೋಡಿ ತಾಂಡಾದಲ್ಲಿ ಈ ಘಟನೆ ನಡೆದಿದೆ.
ಗ್ರಾಮಕ್ಕೆ ದೇವಸ್ಥಾನದ ಗೋಪುರ ಕಟ್ಟಲು ಬಂದಿದ್ದ ಮಹಾರಾಷ್ಟ್ರ ಮೂಲದ ವ್ಯಕ್ತಿ ಜತೆಗೆ ಸ್ನೇಹಾ ಸಲುಗೆಯನ್ನು ಬೆಳೆಸಿದ್ದಳು. ಆತನನ್ನು ಮೋಹಿಸಿದ ಸ್ನೇಹಾ ಆತನೊಟ್ಟಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಕದ್ದು ಮುಚ್ಚಿ ಆತನೊಟ್ಟಿಗೆ ಸೇರುತ್ತಿದ್ದಳು. ಆದರೆ ಇದು ಪತಿ ರಾಜುಗೆ ತಿಳಿದುಹೋಯಿತು.
ಹೆಂಡತಿ ವಿಷಯ ಊರವರಿಗೆ ತಿಳಿದರೆ ಮಾನ ಮಾರ್ಯಾದೆ ಹೋಗುತ್ತೆ ಎಂದು ರಾಜು, ತನ್ನ ಪತ್ನಿ ಸ್ನೇಹಾಗೆ ಬುದ್ಧಿವಾದ ಹೇಳಿದ್ದ. ಆದರೂ ಸ್ನೇಹಾ ತನ್ನ ಅಕ್ರಮ ಸಂಬಂಧವನ್ನು ಮುಂದುವರಿಸಿದ್ದಳು. ಇದೇ ವಿಚಾರಕ್ಕೆ ಇವರಿಬ್ಬರ ಮಧ್ಯೆ ಕಳೆದ 2 ವರ್ಷಗಳಿಂದ ಜಗಳ ನಡೆಯುತ್ತಿತ್ತು.
ಇತ್ತೀಚೆಗೆ ದಂಪತಿ ಮಧ್ಯೆ ಇದೇ ವಿಷಯಕ್ಕೆ ಜಗಳ ನಡೆದಿತ್ತು. ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಕ್ಕೆ ಸ್ನೇಹಾ ಆತನನ್ನು ಮುಗಿಸಿಬಿಡುವ ಪ್ಲ್ಯಾನ್ ಮಾಡಿದ್ದಳು. ಪತಿಗಿದ್ದ ಕುಡಿತವನ್ನೇ ಬಂಡವಾಳ ಮಾಡಿಕೊಂಡ ಸ್ನೇಹ, ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ಕೊಟ್ಟಿದ್ದಳು. ಅದನ್ನೂ ಕುಡಿಯುತ್ತಿದ್ದಂತೆ ರಾಜು ನಿದ್ರೆಗೆ ಜಾರಿದಾಗ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ನೇಹಾಳನ್ನು ವಶಕ್ಕೆ ಪಡೆದಿರುವ ಯಾಪಲದಿನ್ನಿ ಪೊಲೀಸರು, ಈ ಸಂಬಂಧ ಪ್ರಕರಣಕ್ಕೆ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.
Raichur wife kills husband over her illicit affair. The deceased has been identified as Raju Naik. Since two years wife was in affair with a construction worker who had come from Maharashtra to Raichur.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm