ಬ್ರೇಕಿಂಗ್ ನ್ಯೂಸ್
21-03-24 10:43 pm Mangalore Correspondent ಕ್ರೈಂ
ಮಂಗಳೂರು, ಮಾ.21: ನಗರದ ಪ್ರತಿಷ್ಠಿತ ಕಾಲೇಜು ಒಂದರಲ್ಲಿ ವಿದ್ಯಾರ್ಥಿಗಳಾಗಿರುವ ಯುವಕರು ಹುಡುಗಿ ವಿಚಾರದಲ್ಲಿ ಹೊಡೆದಾಡಿದ್ದು, ಒಬ್ಬ ಯುವಕನಿಗೆ ಮುಖದಲ್ಲಿ ರಕ್ತ ಒಸರುವ ರೀತಿ ಹಿಗ್ಗಾಮುಗ್ಗಾ ಹೊಡೆದಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.
ನೀರುಮಾರ್ಗದಲ್ಲಿ ಈ ಘಟನೆ ನಡೆದಿದ್ದು ವಿಡಿಯೋದಲ್ಲಿ ಯುವಕರ ಹೊಡೆದಾಟದ ದೃಶ್ಯ ಇದೆ. ಬಜ್ಜೋಡಿ ನಿವಾಸಿ ಯುವಕ ತಾನು ಪ್ರೀತಿಸುತ್ತಿದ್ದ ಹುಡುಗಿಯಲ್ಲಿ ಪದೇ ಪದೇ ಹಣ ಕೇಳಿ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ಯುವತಿ ತನ್ನ ನೀರುಮಾರ್ಗದ ಗೆಳೆಯನಿಗೆ ವಿಷಯ ತಿಳಿಸಿದ್ದಳು. ವಿಷಯ ತಿಳಿದ ಲವರ್ ಯುವಕ ಬಜ್ಜೋಡಿಯಿಂದ ಐದಾರು ಮಂದಿ ಯುವಕರ ಜೊತೆಗೆ ಕಾರಿನಲ್ಲಿ ನೀರುಮಾರ್ಗಕ್ಕೆ ತೆರಳಿದ್ದು ಅಲ್ಲಿನ ಯುವಕನನ್ನು ಪ್ರಶ್ನೆ ಮಾಡಿದ್ದಾರೆ.
ತಡರಾತ್ರಿಯಲ್ಲಿ ಪಾಲ್ದಾನೆ ಎಂಬಲ್ಲಿ ಆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಅಲ್ಲದೆ, ಹೊಡೆದಾಟದ ವಿಡಿಯೋವನ್ನು ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಒದೆ ತಿಂದ ಯುವಕನ ಮುಖ ರಕ್ತಸಿಕ್ತವಾಗಿತ್ತು.
ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಹುಡುಗರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಒಬ್ಬ ಯುವಕ ಕಳೆದ ವರ್ಷ ಡಿಗ್ರಿ ಪೂರೈಸಿದ್ದರೆ, ಹಲ್ಲೆ ನಡೆಸಿದ ಯುವಕ ಈ ಸಲ ಅಂತಿಮ ಪದವಿಯಲ್ಲಿದ್ದಾನೆ ಎಂಬ ಮಾಹಿತಿಯಿದೆ. ಎರಡೂ ಕಡೆಯ ಕುಟುಂಬಸ್ಥರು ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥ ಮಾಡಿದ್ದಾರೆ. ಹಲ್ಲೆ ನಡೆಸಿದ ಯುವಕ ಅಂತಿಮ ವರ್ಷದ ಡಿಗ್ರಿ ವಿದ್ಯಾರ್ಥಿಯಾಗಿದ್ದು, ಈ ಹಿಂದೆಯೂ ಕಾಲೇಜಿನಲ್ಲಿ ಗಲಾಟೆ ಮಾಡಿ ಕಿರಿಕ್ ಮಾಡಿದ್ದ. ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿ ಕಳಿಸಿಕೊಟ್ಟಿದ್ದಾರೆ.
Video of neermarga youth brutally assaulted by youth from Bajjodi in Mangalore goes viral over the issue of girl. Youth from neermarga paldane was dragged from his house and was brutally assaulted by a youth over matter of girl. The video of this has gone viral on social media. No case has been registered so far at Kankandy rural police station.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm