ಬ್ರೇಕಿಂಗ್ ನ್ಯೂಸ್
22-03-24 06:07 pm HK News Desk ಕ್ರೈಂ
ತುಮಕೂರು, ಮಾ.22: ಕೆರೆಯ ಬಳಿಯಲ್ಲಿ ಕಾರೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಅದರಲ್ಲಿ ಮೂವರು ಅಪರಿಚಿತ ವ್ಯಕ್ತಿಗಳ ಮೃತದೇಹಗಳು ಪತ್ತೆಯಾಗಿವೆ. ತುಮಕೂರು ತಾಲೂಕಿನ ಕೋರ ಹೋಬಳಿಯ ಕುಚ್ಚಂಗಿ ಕೆರೆಯ ಬಳಿ ಘಟನೆ ನಡೆದಿದೆ.
ಸುಟ್ಟು ಹೋಗಿರುವ ಕಾರಿನ ನಂಬರ್ ಪ್ಲೇಟ್ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದ್ದು ಎನ್ನುವ ಮಾಹಿತಿಯಡಿ ಪೊಲೀಸರು ತನಿಖೆ ನಡೆಸಿದ್ದಾರೆ. ಕಾರು ಬೆಳ್ತಂಗಡಿ ಮೂಲಕ ರಫೀಕ್ ಎಂಬವರಿಗೆ ಸೇರಿದ್ದು ಎನ್ನುವ ಮಾಹಿತಿ ಇದೆ. ಕಾರಿನಲ್ಲಿದ್ದ ಶವ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ (45), ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಇಸಾಕ್ (56) ಮತ್ತು ಶಿರ್ಲಾಲು ನಿವಾಸಿ ಇಮ್ತಿಯಾಜ್ (34) ಎಂದು ಹೇಳಲಾಗುತ್ತಿದೆ. ಮೃತರ ಸಂಬಂಧಿಕರು ತುಮಕೂರಿಗೆ ಬಂದಿದ್ದು ಮೂವರ ಶವಗಳೂ ಗುರುತು ಸಿಗದಷ್ಟು ಸುಟ್ಟು ಹೋಗಿವೆ. ಯಾರಾದ್ರೂ ಕೊಲೆಗೈದು ಸುಟ್ಟು ಹೋಗಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಾರಿನಲ್ಲಿ ಒಟ್ಟು ಐವರು ಬೆಳ್ತಂಗಡಿಯಿಂದ ತೆರಳಿದ್ದರು ಎನ್ನಲಾಗುತ್ತಿದ್ದು ಇನ್ನಿಬ್ಬರು ಎಲ್ಲಿದ್ದಾರೆ ಎನ್ನುವ ಮಾಹಿತಿ ಲಭಿಸಿಲ್ಲ. ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಕೆ.ವಿ, ಅಡಿಷನಲ್ ಎಸ್ಪಿ ಮರಿಯಪ್ಪ, ಡಿವೈಎಸ್ಪಿ ಚಂದ್ರಶೇಖರ್ ಭೇಟಿ ನೀಡಿದ್ದಾರೆ. ಶ್ವಾನದಳ, ಎಫ್ ಎಸ್ ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
Car found in brunt condition at Tumkur, three bodies found of Mangalore native. The three are said to be from Belthangady. It is said they have been murdered and then burnt in the car. The deceased has been identified as Suhal, isaz and Imtiyaz.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm