ಬ್ರೇಕಿಂಗ್ ನ್ಯೂಸ್
23-03-24 04:15 pm HK News Desk ಕ್ರೈಂ
ವಿಜಯಪುರ, ಮಾ 23: ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಜೋಡಿ ಕೊಲೆ ನಡೆದಿರುವ ಘಟನೆ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಬಳಿ ನಡೆದಿದೆ. ತಾಲೂಕಿನ ಗಣಿ ಗ್ರಾಮದ ನಿವಾಸಿಗಳಾದ ಕಲ್ಲಪ್ಪ ಕುಂಬಾರ(35) ಪಾರ್ವತಿ ತಳವಾರ(38) ಕೊಲೆಯಾದವರು.
ವಿವಾಹಿತೆ ಪಾರ್ವತಿ ಹಾಗೂ ಕಲ್ಲಪ್ಪ ಮಧ್ಯೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದ್ದು, ಮಾರಡಗಿ ತಾಂಡಾದ ಬಳಿಯ ಜಮೀನೊಂದರಲ್ಲಿ ಪಾರ್ವತಿ ಹಾಗೂ ಕಲ್ಲಪ್ಪ ಇಬ್ಬರೂ ಒಟ್ಟಿಗೆ ಇದ್ದಾಗ ಕೊಲೆ ನಡೆದಿದೆ. ಕೊಲೆ ಮಾಡಿದ ಬಳಿಕ ಶವದ ಮೇಲೆ ಮುಳ್ಳುಕಂಟಿ ಹಾಕಿ ಕೊಲೆಗಾರರು ಪರಾರಿಯಾಗಿದ್ರು ಆದ್ರೆ ಪೊಲೀಸರು ಈಗ ಮೂವರನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ ಹತ್ಯೆಯಾದ ಮಹಿಳೆಯ ಮಗನೂ ಸೇರಿದ್ದಾನೆ.
ಬಂಧಿತರನ್ನು ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಹತ್ಯೆಯಾಗಿದ್ದ ಪಾರ್ವತಿ ತಳವಾರ ಮಗ ಲಕ್ಷ್ಮಣ ಭೀಮಪ್ಪ, ಆತನ ಸ್ನೇಹಿತರಾದ ಶಶಿಕುಮಾರ ರಂಗಪ್ಪ ಹಾಗೂ ಬಸವರಾಜ ಪರಪ್ಪ ಹಡಪದ ಎಂದು ಗುರುತಿಸಲಾಗಿದೆ.
ಲಕ್ಷ್ಮಣ ತಳವಾರ ಹತ್ಯೆಯಾಗಿರುವ ಪಾರ್ವತಿಯ ಮಗ. ಪಾರ್ವತಿ ಗಣಿ ಗ್ರಾಮದ ಸೋಮನಿಂಗಪ್ಪ ಕುಂಬಾರ ಎಂಬಾತನೊಂದಿಗೆ ಅನೈತಿಕ ಸಬಂಧ ಹೊಂದಿದ್ಲು. ತಾಯಿಯ ಅನೈತಿಕ ಸಂಬಂಧದಿಂದ ರೋಸಿ ಹೋಗಿದ್ದ ಮಗ ಲಕ್ಷ್ಮಣ ತನ್ನ ಇನ್ನಿಬ್ಬರು ಸ್ನೇಹಿತರೊಂದಿಗೆ ಸೇರಿಕೊಂಡು ಹತ್ಯೆಯ ಸಂಚು ರೂಪಿಸಿದ್ದ.
ಮಾ.18 ರಂದು ರಾತ್ರಿ ಆಕಳವಾಡಿ-ಮಾರಡಗಿ ಬಳಿ ಲಕ್ಷ್ಮಣನ ತಾಯಿ ಹಾಗೂ ಆಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿ ಸೇರಿದಂತೆ ಜೋಡಿ ಕೊಲೆ ಮಾಡಿ, ಬಳಿಕ ಆರೋಪಿಗಳು ಪರಾರಿಯಾಗಿದ್ದರು.
ನಿಡಗುಂದಿ ಸಿಪಿಐ ಶರಣಗೌಡ ಗೌಡರ, ಎಸೈ ಶಿವರಾಜ ಧರಿಗೋಣ ನೇತೃತ್ವದ ತನಿಖಾ ತಂಡ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತನಿಖಾ ತಂಡಕ್ಕೆ ಬಹುಮಾನ ಘೋಷಿಸಿದ್ದಾಗಿ ಎಸ್ಪಿ ಋಷಿಕೇಶ ಭಗವಾನ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Murder, Illecit affair, son kills own mother and her lover in Vijayapura. The police have arrested three persons in connection to this case including her son.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am