ಬ್ರೇಕಿಂಗ್ ನ್ಯೂಸ್
23-03-24 08:43 pm Mangaluru Correspondent ಕ್ರೈಂ
ಮಂಗಳೂರು, ಮಾ.23: ಬಿಲ್ಡರ್ ಒಬ್ಬರಿಂದ ಮಹಾನಗರ ಪಾಲಿಕೆಗೆ ಬರೆದುಕೊಟ್ಟ ಜಾಗದ ಟಿಡಿಆರ್ ಮಾಡಿಕೊಡಲು 25 ಲಕ್ಷ ಲಂಚ ಬೇಡಿಕೆಯಿಟ್ಟು ಅದನ್ನು ಸ್ವೀಕರಿಸುತ್ತಿದ್ದಾಗಲೇ ಮೂಡಾ ಕಮಿಷನರ್ ಮನ್ಸೂರ್ ಆಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬಿಲ್ಡರ್ ಒಬ್ಬರು ಮಂಗಳೂರು ತಾಲೂಕು ಕುಡುಪು ಗ್ರಾಮದ ಸರ್ವೇ ನಂ. 57/ಪಿ ರಲ್ಲಿ ಒಟ್ಟು 10.8 ಎಕ್ರೆ ಜಮೀನನ್ನು ಖರೀದಿಸಿದ್ದು, ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಪಚ್ಚನಾಡಿ ಮತ್ತು ಕುಡುಪು ಗ್ರಾಮಗಳ ಸುತ್ತಮುತ್ತ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಘನತ್ಯಾಜ್ಯ ನಿರ್ವಹಣೆಯ ಘಟಕವನ್ನು ಭವಿಷ್ಯದಲ್ಲಿ ವಿಸ್ತರಿಸುವ ಉದ್ದೇಶದಿಂದ ಸದ್ರಿ ಜಮೀನನ್ನು ಟಿ.ಡಿ.ಆರ್ ನಿಯಮದಡಿ ಖರೀದಿ ಮಾಡುವ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆಯೊಂದಿಗೆ ಫಿರ್ಯಾದಿದಾರರಿಗೆ ಹಾಗೂ ಜಮೀನಿನ ಈ ಹಿಂದಿನ ಮಾಲಕರಿಗೆ ಪತ್ರ ವ್ಯವಹಾರವಾಗಿತ್ತು. ಅದರಂತೆ ಸದ್ರಿ ಜಮೀನು 2024 ಜನವರಿಯಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಹೆಸರಿಗೆ ನೋಂದಣಿಯಾಗಿತ್ತು.
ಬಳಿಕ ಮಹಾನಗರ ಪಾಲಿಕೆಯ ಆಯುಕ್ತರು ಸದ್ರಿ ಜಮೀನಿನ ಟಿ.ಡಿ.ಆರ್ ನೀಡಲು ಮುಡಾ ಆಯುಕ್ತರಿಗೆ ಫೆಬ್ರವರಿ ತಿಂಗಳಲ್ಲಿ ಪತ್ರ ಕಳುಹಿಸಿದ್ದು, ಮುಡಾ ಆಯುಕ್ತರಾದ ಮನ್ಸೂರ್ ಆಲಿರವರು ಸದ್ರಿ ಫೈಲ್ ಅನ್ನು ಪೆಂಡಿಂಗ್ ಇಟ್ಟಿದ್ದರು. ಈ ಬಗ್ಗೆ ಬಿಲ್ಡರ್ ಮುಡಾ ಆಯುಕ್ತರಾದ ಮನ್ಸೂರ್ ಆಲಿ ಅವರ ಬಳಿ ಹೋಗಿ ಮಾತನಾಡಿದಾಗ 25 ಲಕ್ಷ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಬಿಲ್ಡರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಶನಿವಾರ ಮುಡಾ ಆಯುಕ್ತ ಮನ್ಸೂರ್ ಆಲಿಯವರ ಸೂಚನೆಯಂತೆ ಬ್ರೋಕರ್ ಕೊಡಿಯಾಲ್ ಬೈಲ್ ನಿವಾಸಿ ಮಹಮ್ಮದ್ ಸಲೀಂ ಪಿರ್ಯಾದುದಾರರಿಂದ ರೂ.25,00,000 ಲಂಚದ ಹಣವನ್ನು ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರು ಬಲೆಗೆ ಕೆಡವಿದ್ದಾರೆ. ಬಳಿಕ 25 ಲಕ್ಷ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವ ಮೂಡಾ ಆಯುಕ್ತ ಮನ್ಸೂರ್ ಅಲಿರವರನ್ನು ಮತ್ತು ಲಂಚದ ಹಣವನ್ನು ಸ್ವೀಕರಿಸಿದ ಬೋಕರ್ ಮಹಮ್ಮದ್ ಸಲಿಂ ಅವರನ್ನು ಲೋಕಾಯುಕ್ತ ಅಧಿಕಾರಿಗಳು ದಸ್ತಗಿರಿ ಮಾಡಿದ್ದಾರೆ.
ಡಿವೈಎಸ್ಪಿ ಚಲುವರಾಜು ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ಅಮಾನುಲ್ಲ, ಸುರೇಶ್ ಕುಮಾರ್ ಪಿ. ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡಿದ್ದರು.
Mangalore Lokayukta arrest MUDA commissioner Mansoor Ali for accepting Rs 25 lakh. Lokayukta sleuths have apprehended Mansoor Ali, commissioner of the Mangaluru Urban Development Authority (MUDA), red-handed while accepting a bribe of Rs 25 lac. The bribe was being solicited in exchange for issuing TDR clearance. Under the leadership of DySP Cheluvaraj, inspectors Amanulla and Suresh Kumar, the operation unfolded, resulting in the arrest of Mansoor Ali and broker Mohammed Saleem.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am