ಬ್ರೇಕಿಂಗ್ ನ್ಯೂಸ್
24-03-24 09:51 pm Mangalore Correspondent ಕ್ರೈಂ
ಮಂಗಳೂರು, ಮಾ.24: ಅಪಚಿರಿತ ವ್ಯಕ್ತಿಯೊಬ್ಬ ವಾಟ್ಸ್ ಆಪ್ ನಲ್ಲಿ ಪಾರ್ಟ್ ಟೈಮ್ ಜಾಬ್ ಇರುವುದಾಗಿ ಹೇಳಿ ವಂಚಿಸಿದ್ದಲ್ಲದೆ, 1.15 ಲಕ್ಷ ರೂ. ಪೀಕಿಸಿ ಮೋಸಗೈದ ಪ್ರಕರಣದಲ್ಲಿ ಮಂಗಳೂರು ಪೊಲೀಸರು ರಾಜಸ್ಥಾನ ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ವಾಟ್ಸಪ್ ಸಂದೇಶ ಕಳುಹಿಸಿ ಪಾರ್ಟ್ ಟೈಂ ಜಾಬ್ ಹೆಸರಿನಲ್ಲಿ ಲಿಂಕ್ ಕಳುಹಿಸಿ, ಈ ಲಿಂಕ್ ಮುಖಾಂತರ ಹಣ ತೊಡಗಿಸಿ, ಟಾಸ್ಕ್ ಕಂಪ್ಲೀಟ್ ಮಾಡುವ ಮುಖಾಂತರ ಹಣ ಮಾಡಬಹುದು ಎಂಬುದಾಗಿ ಪಿರ್ಯಾದಿದಾರರನ್ನು ನಂಬಿಸಿ ಒಟ್ಟು 1,15,000 ಹಣ ಪಡೆದು ವಂಚನೆ ಮಾಡಿದ್ದಾರೆ. ಪ್ರಕರಣದಲ್ಲಿ ರಾಜಸ್ಥಾನ ಜೋಧಪುರ ಜಿಲ್ಲೆಯ ಮುಸಲ್ಮಾನ್ ಕಾ ಬಾವುರಿ, ರಾಮ್ ದೇವ್ ಮಂದಿರ ಹತ್ತಿರದ ನಿವಾಸಿ ಸದ್ದಾಂ ಗೌರಿ @ ಬಾವುರಿ (30) ಎಂಬಾತನನ್ನು ಬಂಧಿಸಲಾಗಿದೆ.
ಜೋಧ್ ಪುರ್ ಜಿಲ್ಲೆಯ ಬಾವುರಿಯಿಂದ ಆರೋಪಿಯನ್ನು ದಸ್ತಗಿರಿ ಮಾಡಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ. ಆರೋಪಿತನಿಂದ ಕೃತ್ಯಕ್ಕೆ ಬಳಸಿದ ವಿವೋ ಕಂಪನಿಯ ಮೊಬೈಲ್ ಫೋನ್ -02, ಡೆಬಿಟ್ ಕಾರ್ಡ್-08, ಬ್ಯಾಂಕ್ ಚೆಕ್ ಬುಕ್ -04, ಆಧಾರ್ ಕಾರ್ಡ್, ಪಾನ್ ಕಾರ್ಡ್ ಇತ್ಯಾದಿ ಸೊತ್ತುಗಳನ್ನು ವಶಪಡಿಸಲಾಗಿದೆ.
ಆರೋಪಿ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ ಅಗರವಾಲ್ ಹಾಗೂ ಡಿ.ಸಿ.ಪಿ ಸಿದ್ದಾರ್ಥ ಗೊಯಲ್ ಮಾರ್ಗದರ್ಶನದಲ್ಲಿ ಸಿಸಿಆರ್ ಬಿ ಘಟಕದ ಎಸಿಪಿ ರವೀಶ್ ನಾಯಕ್ ನೇತೃತ್ವದಲ್ಲಿ ಮಂಗಳೂರು ನಗರ ಸೆನ್ ಕ್ರೈಂ ಪೊಲೀಸ್ ಠಾಣೆಯ ಠಾಣಾಧಿಕಾರಿ ಶ್ಯಾಮಸುಂದರ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
An unidentified man duped him of Rs 1.15 lakh by promising to have a part-time job on WhatsApp. Mangaluru police have arrested a man from Rajasthan in connection with a cheating case.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm