ಬ್ರೇಕಿಂಗ್ ನ್ಯೂಸ್
29-03-24 09:32 am HK NEWS ಕ್ರೈಂ
ಲಕ್ನೋ, ಮಾ 29: 68ಕ್ಕೂ ಅಧಿಕ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದ ಉತ್ತರಪ್ರದೇಶದ 5 ಬಾರಿಯ ಶಾಸಕ, ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿ (60) ಗುರುವಾರ ಮೃತಪಟ್ಟಿದ್ದಾರೆ.
8 ಪ್ರಕರಣಗಳಲ್ಲಿ ದೋಷಿ ಎಂದು ಸಾಬೀತಾಗಿ 2005 ರಿಂದಲೂ ಜೈಲಲ್ಲಿದ್ದ ಅನ್ಸಾರಿ, ಗುರುವಾರ ಸಂಜೆ ರಂಜಾನ್ ಉಪವಾಸ ಮುರಿಯುತ್ತಿದ್ದಂತೆ ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಹೃದಯಾಘಾತದಿಂದ ಕೊನೆಯುಸಿರೆಳೆದರು. ಮಂಗಳವಾರವಷ್ಟೇ ಕಿಬ್ಬೊಟ್ಟೆ ನೋವಿನ ಕಾರಣ 14 ಗಂಟೆ ಕಾಲ ಆಸ್ಪ ತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದರು.
ಅಲರ್ಟ್ ಘೋಷಣೆ ;
ಅನ್ಸಾರಿ ಸಾವಿನ ಹಿನ್ನೆಲೆ ಉತ್ತರ ಪ್ರದೇಶದಾದ್ಯಂತ ನಿಷೇಧಾಜ್ಞೆ ಹೊರಡಿಸಲಾಗಿದ್ದು, ಅಲರ್ಟ್ ಘೋಷಿಸಿ, ಭದ್ರತೆ ಬಿಗಿಗೊಳಿಸಲಾಗಿದೆ. ಮಾಫಿಯಾ ಡಾನ್ ಹಠಾತ್ ನಿಧನದ ಬಳಿಕ ಗಾಜಿಪುರ, ಅಜಂಗಢ ಪೊಲೀಸರಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವದಂತಿಗಳು, ಪ್ರಚೋದಕ ಮತ್ತು ಆಕ್ಷೇಪಾರ್ಹ ಪೋಸ್ಟ್ಗಳನ್ನು ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡಲಾಗಿದೆ. ಮುಹಮ್ಮದಾಬಾದ್ನಲ್ಲಿರುವ ಮುಖ್ತಾರ್ ಅವರ ಪೂರ್ವಜರ ಮನೆಯಲ್ಲಿ ಜನರು ಸೇರಲು ಪ್ರಾರಂಭಿಸಿದ್ದಾರೆ. ಮುಖ್ತಾರ್ ಅನ್ಸಾರಿ ಮನೆ ಸುತ್ತ ಪೊಲೀಸ್ ಪಡೆ ನಿಯೋಜಿಸಲಾಗಿದೆ.
ಮುಖ್ತಾರ್ ಅನ್ಸಾರಿ ಸಾವಿನ ಹಿಂದೆ ಸಂಚು ಅಡಗಿದೆ. ಜೈಲಲ್ಲಿ ಯಾರೋ ವಿಷವುಣಿಸಿ ಕೊಂದಿದ್ದಾರೆ ಎಂದು ಅವರ ಸಹೋದರ, ಘಾಜಿಪುರ ಸಂಸದ ಅಫ್ಜಲ್ ಅನ್ಸಾರಿ ಆರೋಪಿಸಿದ್ದಾರೆ. ಅನ್ಸಾರಿಯನ್ನು ಎನ್ ಕೌಂಟರ್ ಮಾಡಲು ಸಂಚು ನಡೆದಿದೆ ಎಂದು ಈ ಹಿಂದೆಯೇ ಅವರ ಕುಟುಂಬಸ್ಥರು ಆರೋಪಿಸಿದ್ದರು.

ಅನಾರೋಗ್ಯದ ನಡುವೆಯೂ ಮಾಫಿಯಾ ಡಾನ್ ಮುಕ್ತಾರ್ ಅನ್ಸಾರಿ ರಂಜಾನ್ ಪ್ರಯುಕ್ತ ಉಪವಾಸ ನಡೆಸುತ್ತಿದ್ದರು ಎಂದು ಹೇಳಲಾಗಿದೆ. ಮಾರ್ಚ್ 26ರಂದು ಎದೆ ನೋವು ಕಾಣಿಸಿಕೊಂಡ ಹಿನ್ನಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. 14 ಗಂಟೆಗಳ ಚಿಕಿತ್ಸೆಯ ನಂತರ ವೈದ್ಯರು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ ನಂತರ ಮುಕ್ತಾರ್ ಅನ್ಸಾರಿಯನ್ನು ಬಂದಾ ಮಂಡಲ್ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಇದಾದ ಬಳಿಕ ಮತ್ತೊಮ್ಮೆ ಮುಖ್ತಾರ್ ಅನ್ಸಾರಿ ಅವರಿಗೆ ಹೃದಯಾಘಾತವಾಗಿತ್ತು ಎಂದು ತಿಳಿದುಬಂದಿದೆ.
Jailed gangster-turned-politician Mukhtar Ansari has died of a cardiac arrest after being hospitalised on Thursday evening. The five-time former MLA from Mau in Uttar Pradesh had been in jail in the state and in Punjab since 2005. A medical bulletin said the 63-year-old, who was lodged in a jail in UP's Banda, had been taken to the Rani Durgavati Medical College in the district by jail authorities in an unconscious state around 8.25 pm on Thursday after complaining of vomiting.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm