ಬ್ರೇಕಿಂಗ್ ನ್ಯೂಸ್
09-04-24 03:39 pm Mangalore Correspondent ಕ್ರೈಂ
ಮಂಗಳೂರು, ಎ.9: ಪತ್ನಿಯನ್ನು ಕೊಲೆಗೈದ ಪತಿಯ ಮೇಲಿನ ಆರೋಪ ಸಾಬೀತಾಗಿದ್ದು ಅಪರಾಧಿಗೆ ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ಹಾಗೂ ₹ 1.50 ಲಕ್ಷ ದಂಡ ವಿಧಿಸಿ ತೀರ್ಪಿತ್ತಿದೆ.
ಕಾವೂರಿನ ಗಣೇಶ್ ಕುಮಾರ್ (46) ಶಿಕ್ಷೆಗೆ ಒಳಗಾದ ಅಪರಾಧಿ. ಕಾವೂರಿನ ಬಾಡಿಗೆ ಮನೆಯಲ್ಲಿ ಪತ್ನಿ ಶಾಂತಾ ಹಾಗೂ ತನ್ನ ಇಬ್ಬರು ಮಕ್ಕಳ ಜೊತೆ ಗಣೇಶ್ ವಾಸವಿದ್ದ. ಪತ್ನಿ ಜೊತೆ ನಿತ್ಯವೂ ಗಲಾಟೆ ಮಾಡುತ್ತಿದ್ದ. ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದುದಲ್ಲದೇ ಜೀವ ಬೆದರಿಕೆ ಒಡ್ಡುತ್ತಿದ್ದ. 2020ರ ಜುಲೈ 1ರಂದು ಸಂಜೆ 5.30ರ ಸುಮಾರಿಗೆ ಮನೆಗೆ ಸಾಮಾನು ತರುವ ನೆಪದಲ್ಲಿ ಪತ್ನಿಯನ್ನು ದ್ವಿಚಕ್ರ ವಾಹನದಲ್ಲಿ ಹೊರಗಡೆ ಕರೆದೊಯ್ದಿದ್ದ. ಅಂತೋನಿ ಕಟ್ಟೆ ಎಂಬಲ್ಲಿ ಪತ್ನಿಯನ್ನ, ಕುತ್ತಿಗೆ ಹಿಸುಕಿ, ಕಪ್ಪು ಕಲ್ಲಿನ ಕ್ವಾರಿಗೆ ದೂಡಿ ಕೊಲೆ ಮಾಡಿದ್ದ. ಕೃತ್ಯದ ಬಗ್ಗೆ ದೂರು ನೀಡಿದ್ದ ಲೀಲಾವತಿ ಎಂಬುವರಿಗೂ ಜೀವ ಬೆದರಿಕೆ ಒಡ್ಡಿದ್ದ. ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಇನ್ಸ್ಪೆಕ್ಟರ್ ರಾಘವ ಎಸ್. ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು.
ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ ಪ್ರಕರಣದ ವಿಚಾರಣೆ ನಡೆಸಿದ್ದು ಕೊಲೆ ಆರೋಪ ಸಾಬೀತಾಗಿದ್ದರಿಂದ ಕಠಿಣ ಜೀವಾವಧಿ ಶಿಕ್ಷೆ ಮತ್ತು₹ 1 ಲಕ್ಷ ದಂಡ, ಪತ್ನಿಗೆ ಹಿಂಸೆ ನೀಡಿದ್ದಕ್ಕೆ 3 ವರ್ಷ ಕಠಿಣ ಶಿಕ್ಷೆ ಮತ್ತು ₹25 ಸಾವಿರ ದಂಡ, ಜೀವ ಬೆದರಿಕೆ ಒಡ್ಡಿದ್ದಕ್ಕೆ 2 ವರ್ಷ ಕಠಿಣ ಶಿಕ್ಷೆ ಮತ್ತು ₹25 ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಸಂತ್ರಸ್ತರಾಗಿರುವ ದಂಪತಿಯ ಇಬ್ಬರು ಮಕ್ಕಳಿಗೆ ಸೂಕ್ತ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಧೀಶರು ಶಿಫಾರಸು ಮಾಡಿದ್ದಾರೆ. ಪ್ರಕರಣದಲ್ಲಿ ಸರ್ಕಾರಿ ವಕೀಲರಾದ ಜ್ಯೋತಿ ಪ್ರಮೋದ ನಾಯಕ ಮತ್ತು ಬಿ.ಶೇಖರ ಶೆಟ್ಟಿ ಹಾಗೂ ಚೌಧರಿ ಮೋತಿಲಾಲ ಅವರು ಸಂತ್ರಸ್ತರ ಪರ ವಾದ ಮಂಡಿಸಿದ್ದರು.
The VI Additional District and Sessions Judge, Kantharaju S.V, on Monday, sentenced a man to life imprisonment for murdering his wife. The convict is Ganesh Kumar, 46, from Kavoor. Public prosecutor Choudhari Motilal said that the accused had murdered his wife, Shantha, by strangulating her neck and later pushing her into a quarry pit at Antony Katte on July 1, 2020. It is said that the couple used to have regular arguments.
06-05-25 11:23 pm
Bangalore Correspondent
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
07-05-25 12:20 pm
HK News Desk
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm