ಬ್ರೇಕಿಂಗ್ ನ್ಯೂಸ್
30-11-20 06:31 pm Mangalore Correspondent ಕ್ರೈಂ
ಮಂಗಳೂರು, ನ.30: ಮಹಿಳೆಯೊಬ್ಬರ ಮನೆಗೆ ನುಗ್ಗಿ, ಅಸಭ್ಯವಾಗಿ ವರ್ತಿಸಿದ್ದಲ್ಲದೆ ಪೊಲೀಸ್ ವಾರ್ತೆ ಪತ್ರಿಕೆ ಹೆಸರಲ್ಲಿ ಬ್ಲಾಕ್ ಮೇಲ್ ಮಾಡಿರುವ ಬಗ್ಗೆ ಬಜ್ಪೆ ಠಾಣೆಯಲ್ಲಿ ಮೂರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಪೊಲೀಸ್ ವಾರ್ತೆ ಪತ್ರಿಕೆಯ ಸುಭಾಸ್ ಶೆಟ್ಟಿ, ಮನೋಜ್ ಉಳ್ಳಾಲ್ ಮತ್ತು ನಿತಿನ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ನ.26ರಂದು ಈ ಮೂವರು ಮರವೂರಿನ ಮನೆಗೆ ಐ ಟ್ವೆಂಟಿ ಕಾರಿನಲ್ಲಿ ತೆರಳಿದ್ದು, ಅಲ್ಲಿ ದಿವ್ಯ ಎಂಬ ಹುಡುಗಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಆಬಳಿಕ ಮೊಬೈಲಿನಲ್ಲಿ ಫೋಟೊ ತೆಗೆದು, ನಾವು ಮೀಡಿಯಾದವರು. ನಿಮ್ಮಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ. ಈ ಬಗ್ಗೆ ನಾವು ಪೊಲೀಸ್ ವಾರ್ತೆ ಪತ್ರಿಕೆಯಲ್ಲಿ ಮತ್ತು ಸ್ಟೇಟ್ ಚಾನಲಿನಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ. ಆಬಳಿಕ ಒಂದು ಲಕ್ಷ ರೂ. ಕೊಟ್ಟರೆ ಸುದ್ದಿ ಹಾಕುವುದಿಲ್ಲ ಎಂದು ಹೇಳಿ ಹಣದ ಬೇಡಿಕೆ ಮುಂದಿಟ್ಟಿದ್ದಾರೆ.



ಕೊನೆಗೆ, 15 ಸಾವಿರ ರೂ.ವನ್ನು ಮನೆಯವರು ಕೊಟ್ಟಿದ್ದಾರೆ. ಉಳಿದ ಹಣವನ್ನು ಆಮೇಲೆ ಕೊಡುವುದಾಗಿ ಹೇಳಿದ್ದಾರೆ. ಆದರೆ, ಮರುದಿನ ಮನೋಜ್ ಮತ್ತು ನಿತಿನ್ ಮನೆಯವರಿಗೆ ಫೋನ್ ಮಾಡಿ, ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ಬಗ್ಗೆ ಮಹಿಳೆ, ಫೋನ್ ಮಾಡಿ ಹಣ ಕೇಳುತ್ತಿರುವ ಬಗ್ಗೆ ಕರೆಯನ್ನು ರೆಕಾರ್ಡ್ ಮಾಡಿದ್ದರು. ಹಣ ಕೊಡದಿದ್ದರೆ ಚಾನೆಲ್ನಲ್ಲಿ ಸುದ್ದಿ ಹಾಕಿಸುತ್ತೇನೆ ಎಂದು ಬೆದರಿಕೆ ಒಡ್ಡಿದ್ದರಿಂದ ಮಹಿಳೆ ಹೆದರಿದ್ದರು.
ಆಬಳಿಕ ಮಹಿಳೆ ಮತ್ತು ಪತಿ ಚಂದ್ರಶೇಖರ್ ಬಜ್ಪೆ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಮೂವರ ಹೆಸರು ನಮೂದಿಸಿದ್ದು, ಬ್ಲಾಕ್ ಮೇಲ್ ವಿಚಾರದಲ್ಲಿ ವಿವರವಾಗಿ ದೂರು ತಿಳಿಸಿದ್ದಾರೆ. ಸುಭಾಸ್ ಶೆಟ್ಟಿ ಮತ್ತು ಆತನ ಮೂವರು ಸಹಚರರು ಈಗ ತಲೆಮರೆಸಿಕೊಂಡಿದ್ದಾರೆ. ಬಜ್ಪೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
The Bajpe Police have registered Blackmail and Extortion case against Journalist Police Varthe Subhas Shetty, Manoj Ullal and Nitin.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm