ಬ್ರೇಕಿಂಗ್ ನ್ಯೂಸ್
30-11-20 06:31 pm Mangalore Correspondent ಕ್ರೈಂ
ಮಂಗಳೂರು, ನ.30: ಮಹಿಳೆಯೊಬ್ಬರ ಮನೆಗೆ ನುಗ್ಗಿ, ಅಸಭ್ಯವಾಗಿ ವರ್ತಿಸಿದ್ದಲ್ಲದೆ ಪೊಲೀಸ್ ವಾರ್ತೆ ಪತ್ರಿಕೆ ಹೆಸರಲ್ಲಿ ಬ್ಲಾಕ್ ಮೇಲ್ ಮಾಡಿರುವ ಬಗ್ಗೆ ಬಜ್ಪೆ ಠಾಣೆಯಲ್ಲಿ ಮೂರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಪೊಲೀಸ್ ವಾರ್ತೆ ಪತ್ರಿಕೆಯ ಸುಭಾಸ್ ಶೆಟ್ಟಿ, ಮನೋಜ್ ಉಳ್ಳಾಲ್ ಮತ್ತು ನಿತಿನ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ನ.26ರಂದು ಈ ಮೂವರು ಮರವೂರಿನ ಮನೆಗೆ ಐ ಟ್ವೆಂಟಿ ಕಾರಿನಲ್ಲಿ ತೆರಳಿದ್ದು, ಅಲ್ಲಿ ದಿವ್ಯ ಎಂಬ ಹುಡುಗಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಆಬಳಿಕ ಮೊಬೈಲಿನಲ್ಲಿ ಫೋಟೊ ತೆಗೆದು, ನಾವು ಮೀಡಿಯಾದವರು. ನಿಮ್ಮಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದೆ. ಈ ಬಗ್ಗೆ ನಾವು ಪೊಲೀಸ್ ವಾರ್ತೆ ಪತ್ರಿಕೆಯಲ್ಲಿ ಮತ್ತು ಸ್ಟೇಟ್ ಚಾನಲಿನಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ. ಆಬಳಿಕ ಒಂದು ಲಕ್ಷ ರೂ. ಕೊಟ್ಟರೆ ಸುದ್ದಿ ಹಾಕುವುದಿಲ್ಲ ಎಂದು ಹೇಳಿ ಹಣದ ಬೇಡಿಕೆ ಮುಂದಿಟ್ಟಿದ್ದಾರೆ.



ಕೊನೆಗೆ, 15 ಸಾವಿರ ರೂ.ವನ್ನು ಮನೆಯವರು ಕೊಟ್ಟಿದ್ದಾರೆ. ಉಳಿದ ಹಣವನ್ನು ಆಮೇಲೆ ಕೊಡುವುದಾಗಿ ಹೇಳಿದ್ದಾರೆ. ಆದರೆ, ಮರುದಿನ ಮನೋಜ್ ಮತ್ತು ನಿತಿನ್ ಮನೆಯವರಿಗೆ ಫೋನ್ ಮಾಡಿ, ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದರು. ಈ ಬಗ್ಗೆ ಮಹಿಳೆ, ಫೋನ್ ಮಾಡಿ ಹಣ ಕೇಳುತ್ತಿರುವ ಬಗ್ಗೆ ಕರೆಯನ್ನು ರೆಕಾರ್ಡ್ ಮಾಡಿದ್ದರು. ಹಣ ಕೊಡದಿದ್ದರೆ ಚಾನೆಲ್ನಲ್ಲಿ ಸುದ್ದಿ ಹಾಕಿಸುತ್ತೇನೆ ಎಂದು ಬೆದರಿಕೆ ಒಡ್ಡಿದ್ದರಿಂದ ಮಹಿಳೆ ಹೆದರಿದ್ದರು.
ಆಬಳಿಕ ಮಹಿಳೆ ಮತ್ತು ಪತಿ ಚಂದ್ರಶೇಖರ್ ಬಜ್ಪೆ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರಿನಲ್ಲಿ ಮೂವರ ಹೆಸರು ನಮೂದಿಸಿದ್ದು, ಬ್ಲಾಕ್ ಮೇಲ್ ವಿಚಾರದಲ್ಲಿ ವಿವರವಾಗಿ ದೂರು ತಿಳಿಸಿದ್ದಾರೆ. ಸುಭಾಸ್ ಶೆಟ್ಟಿ ಮತ್ತು ಆತನ ಮೂವರು ಸಹಚರರು ಈಗ ತಲೆಮರೆಸಿಕೊಂಡಿದ್ದಾರೆ. ಬಜ್ಪೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
The Bajpe Police have registered Blackmail and Extortion case against Journalist Police Varthe Subhas Shetty, Manoj Ullal and Nitin.
30-01-26 05:00 pm
Bangalore Correspondent
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm