ಬ್ರೇಕಿಂಗ್ ನ್ಯೂಸ್
12-04-24 03:21 pm HK NEWS ಕ್ರೈಂ
ಬೆಂಗಳೂರು, ಎ.12: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧಿಸಿ ಪ್ರಮುಖ ಇಬ್ಬರು ಆರೋಪಿಗಳನ್ನು ಕಡೆಗೂ ಎನ್ಐಎ ಅಧಿಕಾರಿಗಳು ಬಲೆಗೆ ಕೆಡವಿದ್ದಾರೆ. ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಾಂಬ್ ಇಟ್ಟು ಪರಾರಿಯಾಗಿದ್ದ ಶಿವಮೊಗ್ಗ ಮೂಲದ ಮುಸಾವಿರ್ ಹುಸೇನ್ ಹಾಗೂ ಕೃತ್ಯಕ್ಕೆ ಸಂಚು ನಡೆಸಿದ್ದ ಅಬ್ದುಲ್ ಮತೀನ್ ತಾಹಾನನ್ನು ಎನ್ಐಎ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಬಂಧಿಸಿದೆ.
ಈ ಬಗ್ಗೆ ಎನ್ಐಎ ಹೇಳಿಕೆ ಬಿಡುಗಡೆ ಮಾಡಿದ್ದು, ಪಶ್ಚಿಮ ಬಂಗಾಳದಲ್ಲಿ ಅಡಗಿಕೊಂಡಿದ್ದರು. ಎ.12ರಂದು ಬೆಳಗ್ಗೆ ಕೊಲ್ಕತ್ತಾದಲ್ಲಿ ನಿಗೂಢ ಜಾಗದಲ್ಲಿ ಅಡಗಿದ್ದ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜಿಬ್ ಅವರನ್ನು ಬಂಧಿಸಲಾಗಿದೆ. ಮುಸಾವಿರ್ ಹುಸೇನ್ ಶಾಜಿಬ್ ಕೆಫೆಯಲ್ಲಿ ಐಇಡಿ ಬಾಂಬ್ ಇಟ್ಟು ಸ್ಪೋಟಿಸಿದ್ದ, ಅಬ್ದುಲ್ ಮತೀನ್ ತಾಹಾ ಬಾಂಬ್ ಬಾಂಬ್ ಇಡುವುದಕ್ಕೆ ಪ್ಲಾನ್ ಮಾಡಿದ್ದ. ಪ್ರಕರಣದಲ್ಲಿ ಅಬ್ದುಲ್ ಮತೀನ್ ಮಾಸ್ಟರ್ ಮೈಂಡ್ ಆಗಿ ಕೆಲಸ ಮಾಡಿದ್ದ ಎಂದು ಹೇಳಿದೆ.
ಕೋಲ್ಕತ್ತಾದಲ್ಲಿ ಉಗ್ರರು ನಕಲಿ ದಾಖಲೆ ನೀಡಿ ಹೆಸರು ಬದಲಿಸಿಕೊಂಡು ವಾಸ್ತವ್ಯ ಹೂಡಿದ್ದರು. ಕಾರ್ಯಾಚರಣೆಗೆ ಎನ್ ಐಎ ಜೊತೆ ಐಬಿ, ಪಶ್ಚಿಮ ಬಂಗಾಳ, ತೆಲಂಗಾಣ, ಕರ್ನಾಟಕ, ಕೇರಳ ಪೊಲೀಸರು ಸಹಕಾರ ನೀಡಿದ್ದರು. ಎಲ್ಲಾ ಏಜೆನ್ಸಿಗಳ ಸಹಾಯದಿಂದ ಉಗ್ರರ ಬಂಧನವಾಗಿದೆ ಎಂದು ಎನ್ ಐಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಲ್ಕಾತ್ತಾ ಹೊರವಲಯದ ಪೂರ್ವ ಮಿಡ್ನಾಪುರ ಜಿಲ್ಲೆಯ ದಿಘಾ ಎಂಬಲ್ಲಿ ಇವರು ತಮ್ಮ ಹೆಸರು ಬದಲಿಸಿಕೊಂಡು ವಾಸವಿದ್ದರು. ಮಧ್ಯರಾತ್ರಿ 2.30ರ ಸುಮಾರಿಗೆ ಉಗ್ರರು ಅಡಗಿದ್ದ ಮನೆಯ ಮೇಲೆ ದಾಳಿ ನಡೆಸಿ, ನಿದ್ದೆಯಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳೀಯ ನ್ಯಾಯಾಲಯಕ್ಕೆ ಹಾಜರು ಪಡಿಸಲಿರುವ ಎನ್ ಐಎ ತಂಡ ಬಳಿಕ ಬೆಂಗಳೂರಿಗೆ ಕರೆತರಲಿದೆ.
The National Investigation Agency said on Friday that it has arrested two accused, including the "mastermind" behind the Bengaluru's Rameswaram Cafe blast near Kolkata. According to media reports, the NIA apprehended Mussavir Hussain Shazib, the key accused who allegedly placed the IED at the Bengaluru cafe, and Abdul Matheen Taha, the alleged mastermind behind the planning and execution of the blast. The two accused are residents of the Thirthahalli area in Karnataka's Shivamogga district.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am