ಬ್ರೇಕಿಂಗ್ ನ್ಯೂಸ್
14-04-24 03:47 pm HK NEWS ಕ್ರೈಂ
ಮುಂಬೈ, ಎ.14: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಆವರಣಕ್ಕೆ ಎರಡು ಬೈಕಿನಲ್ಲಿ ಬಂದಿದ್ದ ಆಗಂತುಕರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಯಾರಿಗೂ ಗಾಯ ಆಗಿಲ್ಲ.
ನಸುಕಿನ 4.50ರ ವೇಳೆಗೆ ಘಟನೆ ನಡೆದಿದ್ದು, ಈ ಸಂದರ್ಭದಲ್ಲಿ ಸಲ್ಮಾನ್ ಖಾನ್ ಅದೇ ಅಪಾರ್ಟ್ಮೆಂಟ್ ನಲ್ಲಿ ಇದ್ದರು. ಆಗಂತುಕರು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಈ ಹಿಂದೆ ಸಲ್ಮಾನ್ ಹತ್ಯೆ ಮಾಡುತ್ತೇನೆ ಎಂದಿದ್ದ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಸೋದರ ಅನ್ಮೋಲ್ ಬಿಷ್ಣೋಯಿ ಈ ದಾಳಿಯ ಹೊಣೆ ಹೊತ್ತುಕೊಂಡಿದ್ದಾನೆ. ಅನ್ಮೋಲ್ ಸದ್ಯಕ್ಕೆ ಅಮೆರಿಕದಲ್ಲಿ ವಾಸವಿದ್ದಾನೆ.
ಘಟನೆ ಹಿನ್ನೆಲೆಯಲ್ಲಿ ಸಲ್ಮಾನ್ ಅವರಿದ್ದ ನಿವಾಸಕ್ಕೆ ಪೊಲೀಸರ ಭದ್ರತೆ ಹೆಚ್ಚಿಸಲಾಗಿದೆ. ಸ್ಥಳಕ್ಕೆ ಕ್ರೈಮ್ ಬ್ರಾಂಚ್ ಮತ್ತು ಫಾರೆನ್ಸಿಕ್ ತಜ್ಞರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ತನಿಖೆಗೆ 15 ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಕೆನಡಾದಲ್ಲಿ ಅಡಗಿದ್ದ ಗ್ಯಾಂಗ್ ಸ್ಟರ್ ಗೋಲ್ಡಿ ಬ್ರಾರ್ ಮತ್ತು ಲಾರೆನ್ಸ್ ಬಿಷ್ಣೋಯಿ ಅವರು ಈ ಹಿಂದೆ ಸಲ್ಮಾನ್ ಖಾನ್ ಕೊಲ್ಲುವುದಕ್ಕೆ ತಮ್ಮ ಶೂಟರ್ ಗಳನ್ನು ಮುಂಬೈಗೆ ಕಳಿಸಿದ್ದೇವೆ ಎಂದಿದ್ದರು. ಆನಂತರ, ಲಾರೆನ್ಸ್ ಬಿಷ್ಣೋಯಿ ಅವರನ್ನು ಪಂಜಾಬಿನಲ್ಲಿ ನಡೆದಿದ್ದ ಕೊಲೆ ಪ್ರಕರಣ ಒಂದರಲ್ಲಿ ಬಂಧಿಸಲಾಗಿತ್ತು.
ಜೀವ ಬೆದರಿಕೆ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ನಿವಾಸದಲ್ಲಿ ಮೂರು ಶಿಫ್ಟ್ ನಲ್ಲಿ ಪೊಲೀಸರನ್ನು ಕಾವಲಿಗೆ ನಿಯೋಜನೆ ಮಾಡಲಾಗಿದೆ. ಅಲ್ಲದೆ, ಸಲ್ಮಾನ್ ಖಾನ್ ಗೆ ಸ್ವತಃ ಪರವಾನಗಿ ಇರುವ ಪಿಸ್ತೂಲ್ ಒದಗಿಸಲಾಗಿತ್ತು. ಜೊತೆಗೆ ತಿರುಗಾಟದ ಸಂದರ್ಭದಲ್ಲಿಯೂ ಪೊಲೀಸರು ಕಾವಲಿಗೆ ಜೊತೆಗಿರುತ್ತಾರೆ. ಆದರೂ ನಸುಕಿನ ವೇಳೆಯಲ್ಲಿ ಎರಡು ಬೈಕಿನಲ್ಲಿ ಬಂದಿದ್ದವರು ಬೆದರಿಕೆ ಯತ್ನವಾಗಿ ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಬೈಕಿನಲ್ಲಿ ಬಂದಿದ್ದ ಆಗಂತುಕರು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Gunshots were heard outside Bollywood actor Salman Khan's Mumbai residence early this morning, police said. At 5 am today, two unidentified men on a motorcycle fired five rounds in the air outside Mr Khan's home, in Bandra, and sped away from the scene.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm