ಬ್ರೇಕಿಂಗ್ ನ್ಯೂಸ್
15-04-24 04:14 pm Mangalore Correspondent ಕ್ರೈಂ
ಬಂಟ್ವಾಳ, ಎ.15: ಹಿಂದು ಯುವಸೇನೆಯ ಕಾರ್ಯಕರ್ತನೊಬ್ಬನ ಮೇಲೆ ಸ್ನೇಹಿತನೇ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಬಡ್ಡಕಟ್ಟೆ ಎಂಬಲ್ಲಿ ನಡೆದಿದೆ.
ಪುಷ್ಪರಾಜ್ ಬಡ್ಡಕಟ್ಟೆ ಇರಿತಕ್ಕೊಳಗಾದವರು. ಆಟೋ ಚಾಲಕ ಮತ್ತು ಫೈನಾನ್ಸ್ ವ್ಯವಹಾರ ಮಾಡುತ್ತಿದ್ದ ಪುಷ್ಪರಾಜ್ ಮೇಲೆ ರವಿ ನಾವೂರು ಎಂಬಾತ ಚೂರಿಯಿಂದ ಇರಿದಿದ್ದಾನೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


ಇಬ್ಬರ ನಡುವೆ ಹಣಕಾಸಿನ ವಿಚಾರದಲ್ಲಿ ದ್ವೇಷ ಇದ್ದುದರಿಂದ ಹಳೆಯ ವೈಷಮ್ಯದಲ್ಲಿ ಚೂರಿ ಇರಿತ ಮಾಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಪುಷ್ಪರಾಜ್ ಆಟೋ ರಿಕ್ಷಾ ಜೊತೆಗೆ ಬಡ್ಡಿಗೆ ಹಣ ಕೊಡುವ ವ್ಯವಹಾರ ಮಾಡುತ್ತಿದ್ದರು. ಸ್ಥಳೀಯವಾಗಿ ಯುವಸೇನೆಯಲ್ಲಿ ಪ್ರಮುಖನಾಗಿದ್ದು ಕೈಸಾಲ, ಬಡ್ಡಿ ಸಾಲ ಕೊಡುವ ಕೆಲಸ ಮಾಡುತ್ತಿದ್ದ. ನಿನ್ನೆ ರಾತ್ರಿ ರವಿ ಬಳಿ ಹಣದ ವಿಚಾರದಲ್ಲಿ ವಾಗ್ವಾದ ಆಗಿದ್ದು ಪ್ರತಿಯಾಗಿ ಇರಿತ ಮಾಡಿದ್ದಾನೆ. ಸದ್ಯಕ್ಕೆ ಅಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾಗಿ ಬಿಜೆಪಿ ಮೂಲಗಳು ತಿಳಿಸಿವೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮಂಗಳೂರಿನ ಆಸ್ಪತ್ರೆಗೆ ಭೇಟಿ ಕೊಟ್ಟು ಪುಷ್ಪರಾಜ್ ಆರೋಗ್ಯ ವಿಚಾರಿಸಿದ್ದಾರೆ. ಆರೋಪಿ ರವಿಗಾಗಿ ಬಂಟ್ವಾಳ ಪೊಲೀಸರು ಹುಡುಕಾಟ ನಡೆಸಿದ್ದಾರೆ.
Mangalore Bantwal man stabbed by friend over financial matter. Pushparaj is a BJP leader who has been stabbed by his friend Ravi.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm