ಬ್ರೇಕಿಂಗ್ ನ್ಯೂಸ್
19-04-24 03:43 pm HK News Desk ಕ್ರೈಂ
ಹುಬ್ಬಳಿ, ಏ.19: ಹುಬ್ಬಳ್ಳಿಯ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಖಂಡಿಸಿ ಹಂತಕನ ತವರೂರು ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ಪ್ರತಿಭಟನೆ ಜೋರಾಗಿದ್ದು, ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ಮುನವಳ್ಳಿ ಸಂಪೂರ್ಣ ಬಂದ್ ಆಗಿದೆ.
ಹಂತಕ ಫಯಾಜ್ ನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಹಿಂದೂ ಸಂಘಟನೆಗಳು, ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರೆ, ಈ ಪ್ರತಿಭಟನೆಗೆ ಮುಸ್ಲಿಂ ಸಮಾಜ ಬಾಂಧವರೂ ಸಾಥ್ ನೀಡಿ, ಹಂತಕನಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಮುನವಳ್ಳಿ-ಸಂಕೇಶ್ವರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಯವರು, ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಜಿಲ್ಲೆಯಾದ್ಯಂತ ಕೃತ್ಯ ಖಂಡಿಸಿ ಪ್ರತಿಭಟನೆ ನಡೆಯುತ್ತಿವೆ. ಸ್ಥಳಕ್ಕೆ ಪ್ಯಾರಾ ಮಿಲಿಟರಿ ಸೇರಿದಂತೆ ವಿವಿಧ ಪೊಲೀಸ್ ಪಡೆ ಗಳನ್ನು ಬಂದೋಬಸ್ತ್ ಗೆ ನಿಯೋಜಿಸಲಾಗಿದೆ.


ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಕೊಲೆಗೆ ಹುಬ್ಬಳ್ಳಿ ನಗರ ಬೆಚ್ಚಿ ಬಿದ್ದಿದೆ. ಆರೋಪಿ ಫಯಾಜ್ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಆರೋಪಿ ಫಯಾಜ್ ಯುವತಯನ್ನು ಕೊಲೆ ಮಾಡಿದ್ದೇಕೆ ಎಂಬುದರ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಿಮ್ಸ್ ಆಸ್ಪತ್ರೆಗೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿದ್ದು, ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಕೊಲೆ ಆರೋಪಿಯ ವಿರುದ್ಧ ಕುಟುಂಬಸ್ಥರ ಆಕ್ರೋಶ ಹೊರಹಾಕಿದ್ದಾರೆ.



ನಮ್ಮ ಮಗಳಿಗೆ ಹೀಗಾದ್ರೆ ಸಾರ್ವಜನಿಕರ ಸ್ಥಿತಿ ಏನಾಗಬೇಕು?
ನಾವು ಊರೆಲ್ಲಾ ತಿರುಗಾಡುತ್ತಾ ಜನಸೇವೆ ಮಾಡಿಕೊಂಡು ಇರುತ್ತೇವೆ. ನಮ್ಮ ಮಗಳಿಗೆ ಹೀಗಾದ್ರೆ ಸಾರ್ವಜನಿಕರ ಸ್ಥಿತಿ ಏನಾಗಬೇಕು? ಮಕ್ಕಳನ್ನು ಕಾಲೇಜಿಗೆ ಕಳುಹಿಸಲು ಪೋಷಕರಿಗೆ ಭಯ ಆಗುತ್ತೆ ಅಲ್ಲವಾ? ನಮ್ಮ ಕೆಟ್ಟ ಗಳಿಗೆ ನಮ್ಮ ಮಗಳು ಹೋದಳು. ಇರೋ ಒಬ್ಬಳು ಮಗಳು, ನಮ್ಮ ಶ್ರೀಮತಿಗೆ ನಾನು ಹೇಗೆ ಸಾಂತ್ವಾನ ಹೇಳಲಿ. ಪೊಲೀಸರು ಮತ್ತು ಕಾಲೇಜು ಆಡಳಿತ ಮಂಡಳಿ ಈ ಬಗ್ಗೆ ಮುಂಜಾಗ್ರತ ಕ್ರಮ ತೆಗೆದುಕೊಳ್ಳಬೇಕು ಎಂದು ನೇಹಾ ತಂದೆ ಆಗ್ರಹಿಸಿದರು.
Hubballi student neha murder, Hindu groups, congress bjp stage protest, muslim community demands death sentence. Neha Hiremath, the daughter of Congress HDMC corporator Niranjan Hiremath was laid to rest a day after she was brutally stabbed by Mohammed Fayaz on the BVB College campus on Thursday. Fayaz had stabbed nine times and fled the scene, as Neha bled to death, on Thursday.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm