ಬ್ರೇಕಿಂಗ್ ನ್ಯೂಸ್
19-04-24 09:25 pm Mangalore Correspondent ಕ್ರೈಂ
ಮಂಗಳೂರು, ಎ.19: ಆ್ಯಸಿಡ್ ದಾಳಿಗೀಡಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಂತ್ರಸ್ತ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದು ಆಮೂಲಕ ತನ್ನ ಆತ್ಮವಿಶ್ವಾಸವನ್ನು ಎತ್ತಿ ತೋರಿಸಿದ್ದಾಳೆ.
ಮಾರ್ಚ್ 4ರಂದು ಕಾಲೇಜಿನಲ್ಲಿ ದ್ವಿತೀಯ ಪಿಯು ಪರೀಕ್ಷೆಗೆ ತಯಾರಾಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಆರೋಪಿ ಅಬಿನ್ ಎಂಬಾತ ಆ್ಯಸಿಡ್ ದಾಳಿ ನಡೆಸಿದ್ದ. ತನ್ನ ಪ್ರೀತಿ ನಿರಾಕರಿಸಿದ್ದಕ್ಕಾಗಿ ಏಸಿಡ್ ಎರಚಿದ್ದ ಅನ್ನುವುದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಇತರ ಇಬ್ಬರು ಸಹಪಾಠಿಗಳು ಸೇರಿ ಮೂವರು ವಿದ್ಯಾರ್ಥಿನಿಯರು ಘಟನೆಯಲ್ಲಿ ಗಾಯಗೊಂಡಿದ್ದರು. ಸಂತ್ರಸ್ತ ವಿದ್ಯಾರ್ಥಿನಿ ಗಂಭೀರ ಗಾಯಗೊಂಡಿದ್ದರಿಂದ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇನ್ನೂ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಮಧ್ಯೆ ವಿದ್ಯಾರ್ಥಿನಿ ತನ್ನ ತಾಯಿಯೊಂದಿಗೆ ಐಸೊಲೇಶನ್ ವಾರ್ಡ್ ನಲ್ಲಿ ಇದ್ದುಕೊಂಡೇ ಸಿಇಟಿಗೆ ತಯಾರಿ ನಡೆಸುತ್ತಿದ್ದಳು. ಸಿಇಟಿ ಪರೀಕ್ಷೆಗಾಗಿ ಈಕೆ ಮತ್ತು ದಾಳಿಗೀಡಾದ ಇಬ್ಬರು ಸಹಪಾಠಿಗಳಿಗೆ ಪುತ್ತೂರಿನಲ್ಲಿ ಪರೀಕ್ಷಾ ಕೇಂದ್ರ ನಿಗದಿಯಾಗಿತ್ತು. ಚಿಕಿತ್ಸೆ ವೇಳೆ ದೂರದ ಪ್ರಯಾಣ ಮಾಡದಂತೆ ಬಾಲಕಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಸಲಹೆ ನೀಡಿದ್ದ ಕಾರಣ ದ.ಕ ಜಿಲ್ಲಾ ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿರ್ದೇಶಕಿ ಎಸ್. ರಮ್ಯಾ ಅವರ ಗಮನಕ್ಕೆ ತಂದು, ಆಸ್ಪತ್ರೆಯಿಂದ ಒಂದು ಕಿ.ಮೀ ದೂರದಲ್ಲಿರುವ ನಂತೂರು ಪದವು ಪದವಿಪೂರ್ವ ಕಾಲೇಜಿನಲ್ಲಿ ಸಿಇಟಿ ಬರೆಯಲು ಬಾಲಕಿಗೆ ಅನುಮತಿಸಲಾಗಿತ್ತು.
ವಿದ್ಯಾರ್ಥಿನಿ ತನ್ನ ತಾಯಿಯೊಂದಿಗೆ ಆಂಬ್ಯುಲೆನ್ಸ್ ನಲ್ಲಿ ಕಾಲೇಜಿಗೆ ಬಂದು ಪ್ರತ್ಯೇಕ ಕೊಠಡಿಯಲ್ಲಿ ಗುರುವಾರ ಜೀವಶಾಸ್ತ್ರ ಪತ್ರಿಕೆಯ ಪರೀಕ್ಷೆ ಬರೆದಿದ್ದಳು. ಅದೇ ದಿನ ಮಧ್ಯಾಹ್ನ 12.15ಕ್ಕೆ ಆಸ್ಪತ್ರೆಗೆ ಮರಳಿ 2.30 ಕ್ಕೆ ಮತ್ತೆ ಬಂದು ಗಣಿತ ಪರೀಕ್ಷೆಗೆ ಬರೆದಿದ್ದಾಳೆ. ಶುಕ್ರವಾರ ಭೌತ ಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯದ ಪರೀಕ್ಷೆಗಳನ್ನೂ ಬರೆದಿದ್ದಾರೆ.
Mangalore Acid attack, victim writes CET exams amid treatment.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm