ಬ್ರೇಕಿಂಗ್ ನ್ಯೂಸ್
25-04-24 10:18 pm Mangalore Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನಲ್ಲಿ ಷೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದು, ಹಲವರಿಂದ ಹಣ ಪಡೆದು ವಂಚಿಸಿದ್ದ ಕೃಷ್ಣಪ್ರಸಾದ್ ಶೆಟ್ಟಿ (42) ಎಂಬ ವ್ಯಕ್ತಿ 2023ರ ನವೆಂಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದು, ಈವರೆಗೂ ಪತ್ತೆಯಾಗಿಲ್ಲ.
ಕೃಷ್ಣಪ್ರಸಾದ್ ಶೆಟ್ಟಿ ಮೂಲತಃ ಹೆಬ್ರಿ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಮಂಗಳೂರಿನಲ್ಲಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದೇ ವೇಳೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಆಗುತ್ತದೆಯೆಂದು ಸ್ನೇಹಿತರು, ಸಂಬಂಧಿಕರನ್ನು ನಂಬಿಸಿ ಹಣ ಪಡೆದಿದ್ದರು. ಎರಡು ಕೋಟಿ ವರೆಗೂ ಹಣ ಪಡೆದು ವಂಚಿಸಿದ್ದಾರೆಂದು ಹಣ ಕಳಕೊಂಡವರು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದರು.
ಇದರ ಬೆನ್ನಲ್ಲೇ ನವೆಂಬರ್ 16ರಂದು ಪತ್ನಿಯ ಜೊತೆಗೆ ಕಾರಿನಲ್ಲಿ ಬಂಟ್ಸ್ ಹಾಸ್ಟೆಲ್ ಬಳಿಯ ಏಕ್ಸಿಸ್ ಬ್ಯಾಂಕಿಗೆ ಬಂದಿದ್ದರು. ಪತ್ನಿಯನ್ನು ಕಾರಿನಲ್ಲಿ ಕುಳ್ಳಿರಿಸಿ, ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಹೋದವರು ಮರಳಿರಲಿಲ್ಲ. ಮರುದಿನ ಸ್ನೇಹಿತರಿಗೆ ಬೆಂಗಳೂರಿಗೆ ತೆರಳಿದ್ದೇನೆ ಎಂದು ಹೇಳಿದ್ದರು. ಪತಿ ಬರದೇ ಇರುವುದರಿಂದ ಪತ್ನಿ ಮಂಗಳೂರಿನ ಬಂದರು ಠಾಣೆಗೆ ನಾಪತ್ತೆ ದೂರು ನೀಡಿದ್ದರು.
ಇದಲ್ಲದೆ, ಸೈಬರ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದರಿಂದ ಹಣ ವಂಚಿತರು ಪೊಲೀಸರಿಗೆ ಒತ್ತಡ ಹೇರಿ ತನಿಖೆಗೆ ಆಗ್ರಹ ಮಾಡಿದ್ದರು. ಪೊಲೀಸರು ಕೃಷ್ಣಪ್ರಸಾದ್ ಶೆಟ್ಟಿಯ ಬಗ್ಗೆ ಹುಡುಕಾಟವನ್ನೂ ನಡೆಸಿದ್ದರು. ಆರೋಪಿ ಕೃಷ್ಣಪ್ರಸಾದ್ ತಲೆಮರೆಸಿಕೊಂಡಿದ್ದಾನೆಯೇ, ಏನಾದ್ರೂ ಮಾಡಿಕೊಂಡಿದ್ದಾನೆಯೇ ತಿಳಿದಿಲ್ಲ. ಈ ವ್ಯಕ್ತಿ ಎಲ್ಲಿಯಾದರೂ ಕಂಡುಬಂದಲ್ಲಿ ಮಂಗಳೂರು ಪೊಲೀಸರಿಗೆ ತಿಳಿಸುವಂತೆ ಕೋರಿದ್ದಾರೆ.
Mangalore Fraud of crores in the name of share market, Krishnaprasad Shetty native of Hebri goes missing since six months. Police have requested to call them if they find him anywhere.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm