ಬ್ರೇಕಿಂಗ್ ನ್ಯೂಸ್
25-04-24 10:18 pm Mangalore Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನಲ್ಲಿ ಷೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದು, ಹಲವರಿಂದ ಹಣ ಪಡೆದು ವಂಚಿಸಿದ್ದ ಕೃಷ್ಣಪ್ರಸಾದ್ ಶೆಟ್ಟಿ (42) ಎಂಬ ವ್ಯಕ್ತಿ 2023ರ ನವೆಂಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದು, ಈವರೆಗೂ ಪತ್ತೆಯಾಗಿಲ್ಲ.
ಕೃಷ್ಣಪ್ರಸಾದ್ ಶೆಟ್ಟಿ ಮೂಲತಃ ಹೆಬ್ರಿ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಮಂಗಳೂರಿನಲ್ಲಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದೇ ವೇಳೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಆಗುತ್ತದೆಯೆಂದು ಸ್ನೇಹಿತರು, ಸಂಬಂಧಿಕರನ್ನು ನಂಬಿಸಿ ಹಣ ಪಡೆದಿದ್ದರು. ಎರಡು ಕೋಟಿ ವರೆಗೂ ಹಣ ಪಡೆದು ವಂಚಿಸಿದ್ದಾರೆಂದು ಹಣ ಕಳಕೊಂಡವರು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದರು.
ಇದರ ಬೆನ್ನಲ್ಲೇ ನವೆಂಬರ್ 16ರಂದು ಪತ್ನಿಯ ಜೊತೆಗೆ ಕಾರಿನಲ್ಲಿ ಬಂಟ್ಸ್ ಹಾಸ್ಟೆಲ್ ಬಳಿಯ ಏಕ್ಸಿಸ್ ಬ್ಯಾಂಕಿಗೆ ಬಂದಿದ್ದರು. ಪತ್ನಿಯನ್ನು ಕಾರಿನಲ್ಲಿ ಕುಳ್ಳಿರಿಸಿ, ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಹೋದವರು ಮರಳಿರಲಿಲ್ಲ. ಮರುದಿನ ಸ್ನೇಹಿತರಿಗೆ ಬೆಂಗಳೂರಿಗೆ ತೆರಳಿದ್ದೇನೆ ಎಂದು ಹೇಳಿದ್ದರು. ಪತಿ ಬರದೇ ಇರುವುದರಿಂದ ಪತ್ನಿ ಮಂಗಳೂರಿನ ಬಂದರು ಠಾಣೆಗೆ ನಾಪತ್ತೆ ದೂರು ನೀಡಿದ್ದರು.
ಇದಲ್ಲದೆ, ಸೈಬರ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದರಿಂದ ಹಣ ವಂಚಿತರು ಪೊಲೀಸರಿಗೆ ಒತ್ತಡ ಹೇರಿ ತನಿಖೆಗೆ ಆಗ್ರಹ ಮಾಡಿದ್ದರು. ಪೊಲೀಸರು ಕೃಷ್ಣಪ್ರಸಾದ್ ಶೆಟ್ಟಿಯ ಬಗ್ಗೆ ಹುಡುಕಾಟವನ್ನೂ ನಡೆಸಿದ್ದರು. ಆರೋಪಿ ಕೃಷ್ಣಪ್ರಸಾದ್ ತಲೆಮರೆಸಿಕೊಂಡಿದ್ದಾನೆಯೇ, ಏನಾದ್ರೂ ಮಾಡಿಕೊಂಡಿದ್ದಾನೆಯೇ ತಿಳಿದಿಲ್ಲ. ಈ ವ್ಯಕ್ತಿ ಎಲ್ಲಿಯಾದರೂ ಕಂಡುಬಂದಲ್ಲಿ ಮಂಗಳೂರು ಪೊಲೀಸರಿಗೆ ತಿಳಿಸುವಂತೆ ಕೋರಿದ್ದಾರೆ.
Mangalore Fraud of crores in the name of share market, Krishnaprasad Shetty native of Hebri goes missing since six months. Police have requested to call them if they find him anywhere.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm