ಬ್ರೇಕಿಂಗ್ ನ್ಯೂಸ್
25-04-24 10:18 pm Mangalore Correspondent ಕ್ರೈಂ
ಮಂಗಳೂರು, ಎ.25: ಮಂಗಳೂರಿನಲ್ಲಿ ಷೇರು ಮಾರುಕಟ್ಟೆ ವಹಿವಾಟು ನಡೆಸುತ್ತಿದ್ದು, ಹಲವರಿಂದ ಹಣ ಪಡೆದು ವಂಚಿಸಿದ್ದ ಕೃಷ್ಣಪ್ರಸಾದ್ ಶೆಟ್ಟಿ (42) ಎಂಬ ವ್ಯಕ್ತಿ 2023ರ ನವೆಂಬರ್ ತಿಂಗಳಲ್ಲಿ ನಾಪತ್ತೆಯಾಗಿದ್ದು, ಈವರೆಗೂ ಪತ್ತೆಯಾಗಿಲ್ಲ.
ಕೃಷ್ಣಪ್ರಸಾದ್ ಶೆಟ್ಟಿ ಮೂಲತಃ ಹೆಬ್ರಿ ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಮಂಗಳೂರಿನಲ್ಲಿ ಕುಟುಂಬದ ಜೊತೆಗೆ ನೆಲೆಸಿದ್ದರು. ಇದೇ ವೇಳೆ, ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಡಬಲ್ ಆಗುತ್ತದೆಯೆಂದು ಸ್ನೇಹಿತರು, ಸಂಬಂಧಿಕರನ್ನು ನಂಬಿಸಿ ಹಣ ಪಡೆದಿದ್ದರು. ಎರಡು ಕೋಟಿ ವರೆಗೂ ಹಣ ಪಡೆದು ವಂಚಿಸಿದ್ದಾರೆಂದು ಹಣ ಕಳಕೊಂಡವರು ಮಂಗಳೂರಿನ ಸೈಬರ್ ಠಾಣೆಗೆ ದೂರು ನೀಡಿದ್ದರು.
ಇದರ ಬೆನ್ನಲ್ಲೇ ನವೆಂಬರ್ 16ರಂದು ಪತ್ನಿಯ ಜೊತೆಗೆ ಕಾರಿನಲ್ಲಿ ಬಂಟ್ಸ್ ಹಾಸ್ಟೆಲ್ ಬಳಿಯ ಏಕ್ಸಿಸ್ ಬ್ಯಾಂಕಿಗೆ ಬಂದಿದ್ದರು. ಪತ್ನಿಯನ್ನು ಕಾರಿನಲ್ಲಿ ಕುಳ್ಳಿರಿಸಿ, ಬ್ಯಾಂಕಿಗೆ ಹೋಗಿ ಬರುತ್ತೇನೆಂದು ಹೋದವರು ಮರಳಿರಲಿಲ್ಲ. ಮರುದಿನ ಸ್ನೇಹಿತರಿಗೆ ಬೆಂಗಳೂರಿಗೆ ತೆರಳಿದ್ದೇನೆ ಎಂದು ಹೇಳಿದ್ದರು. ಪತಿ ಬರದೇ ಇರುವುದರಿಂದ ಪತ್ನಿ ಮಂಗಳೂರಿನ ಬಂದರು ಠಾಣೆಗೆ ನಾಪತ್ತೆ ದೂರು ನೀಡಿದ್ದರು.
ಇದಲ್ಲದೆ, ಸೈಬರ್ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದರಿಂದ ಹಣ ವಂಚಿತರು ಪೊಲೀಸರಿಗೆ ಒತ್ತಡ ಹೇರಿ ತನಿಖೆಗೆ ಆಗ್ರಹ ಮಾಡಿದ್ದರು. ಪೊಲೀಸರು ಕೃಷ್ಣಪ್ರಸಾದ್ ಶೆಟ್ಟಿಯ ಬಗ್ಗೆ ಹುಡುಕಾಟವನ್ನೂ ನಡೆಸಿದ್ದರು. ಆರೋಪಿ ಕೃಷ್ಣಪ್ರಸಾದ್ ತಲೆಮರೆಸಿಕೊಂಡಿದ್ದಾನೆಯೇ, ಏನಾದ್ರೂ ಮಾಡಿಕೊಂಡಿದ್ದಾನೆಯೇ ತಿಳಿದಿಲ್ಲ. ಈ ವ್ಯಕ್ತಿ ಎಲ್ಲಿಯಾದರೂ ಕಂಡುಬಂದಲ್ಲಿ ಮಂಗಳೂರು ಪೊಲೀಸರಿಗೆ ತಿಳಿಸುವಂತೆ ಕೋರಿದ್ದಾರೆ.
Mangalore Fraud of crores in the name of share market, Krishnaprasad Shetty native of Hebri goes missing since six months. Police have requested to call them if they find him anywhere.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm