ಬ್ರೇಕಿಂಗ್ ನ್ಯೂಸ್
29-04-24 11:50 am Bangalore Correspondent ಕ್ರೈಂ
ಬೆಂಗಳೂರು, ಎ.28: ಫ್ಲ್ಯಾಟ್ ಮೇಲೆ ಲಕ್ಷಾಂತರ ರೂ. ಸಾಲ ಮಾಡಿದ್ದಲ್ಲದೆ, ಮರುಪಾವತಿ ಮಾಡದೆ ವಂಚಿಸಿದ್ದ ಮಾಲೀಕ, ಅದೇ ಫ್ಲ್ಯಾಟನ್ನು ಮತ್ತೊಬ್ಬರಿಗೆ 40 ಲಕ್ಷ ರೂ. ಬೆಲೆಗೆ ಲೀಸಿಗೆ ನೀಡಿ ಮತ್ತೊಂದು ವಂಚನೆ ಎಸಗಿದ ಬಗ್ಗೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೀಡಾದ ಲ್ಯಾಂಗ್ಫೋರ್ಡ್ ರಸ್ತೆಯ ರೋಹನ್ ಎಂಬವರು ವಂಚನೆಗೆ ಸಂಬಂಧಿಸಿ ನ್ಯಾಯಾಲಯದಲ್ಲಿ ಖಾಸಗಿ ಮೊಕದ್ದಮೆ ಹೂಡಿದ್ದರು. ಕೋರ್ಟ್ ನಿರ್ದೇಶನದಂತೆ, ಫ್ಲ್ಯಾಟ್ ಮಾಲೀಕ ಆರೋಪಿ ಮೊಹಮ್ಮದ್ ಅಲೀಮುದ್ದೀನ್ (32) ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಹೈದರಾಬಾದ್ ಮೂಲದ ಉದ್ಯಮಿಯಾಗಿರುವ ಆರೋಪಿ ಅಲೀಮುದ್ದೀನ್, ಲ್ಯಾಂಗ್ಫೋರ್ಡ್ ರಸ್ತೆಯ ಬೈಡ್ ಸ್ಟ್ರೀಟ್ನಲ್ಲಿ ವಸತಿ ಸಮುಚ್ಚಯದಲ್ಲಿ ಮನೆ ಹೊಂದಿದ್ದರು. ಬಳಿಕ ಅದೇ ಫ್ಲ್ಯಾಟ್ ಅನ್ನು ಎಸ್ ಬಿಐ ಬ್ಯಾಂಕಿಗೆ ಅಡವಿಟ್ಟು ಸಾಲ ಪಡೆದಿದ್ದರು. ಸಾಲದ ಕಂತನ್ನು ಸರಿಯಾಗಿ ಪಾವತಿ ಮಾಡುತ್ತಿರಲಿಲ್ಲ. ಇದರ ನಡುವಲ್ಲೇ ಫ್ಲ್ಯಾಟ್ ಅನ್ನು ರೋಹನ್ ಹಾಗೂ ಅವರ ಪತ್ನಿ ಹೆಸರಿಗೆ ಭೋಗ್ಯಕ್ಕೆ ನೀಡಿದ್ದರು. ಅವರಿಂದ ₹40 ಲಕ್ಷ ಪಡೆದಿದ್ದು ಈಗ ಬ್ಯಾಂಕ್ ನೋಟಿಸ್ ಬರುತ್ತಿದ್ದಂತೆ ಫ್ಲಾಟಿನ ನಿಜ ವಿಚಾರ ಗೊತ್ತಾಗಿದೆ.
ಭೋಗ್ಯದ ಹಣ ಪಡೆದಿರುವ ಅಲೀಮುದ್ದೀನ್, ಬೆಂಗಳೂರು ನಗರ ಬಿಟ್ಟು ಪರಾರಿಯಾಗಿದ್ದಾರೆ. ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಇಲ್ಲ. ಬ್ಯಾಂಕ್ ಅಧಿಕಾರಿಗಳು, ಫ್ಲ್ಯಾಟ್ ಜಪ್ತಿ ಮಾಡಲು ಹಲವು ಬಾರಿ ನೋಟಿಸ್ ನೀಡಿದ್ದು ಅದಕ್ಕೆ ಅಲೀಮುದ್ದೀನ್ ಉತ್ತರ ನೀಡಿರಲಿಲ್ಲ. ಹೀಗಾಗಿ, ಆಸ್ತಿ ಜಪ್ತಿ ಮಾಡಲು ಬ್ಯಾಂಕ್ ಅಧಿಕಾರಿಗಳು ನ್ಯಾಯಾಲಯದಿಂದ ಆದೇಶ ಪಡೆದಿರುವುದಾಗಿ ಗೊತ್ತಾಗಿದೆ.
ಮನೆಗೆ ಲಕ್ಷಾಂತರ ರೂ. ಸಾಲ ಬಾಕಿ ಇರುವ ಮಾಹಿತಿಯನ್ನು ಮುಚ್ಚಿಟ್ಟಿದ್ದ ಅಲೀಮುದ್ದೀನ್, ಭೋಗ್ಯದ ಹೆಸರಿನಲ್ಲಿ ಮತ್ತೆ ವಂಚಿಸಿರುವುದಾಗಿ ದೂರುದಾರರು ಆರೋಪಿಸಿದ್ದಾರೆ.
Businessman cheats couple by giving house on lease after cheating Bank of 40 lakhs loan in Bangalore.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm