ಬ್ರೇಕಿಂಗ್ ನ್ಯೂಸ್
29-04-24 11:50 am Bangalore Correspondent ಕ್ರೈಂ
ಬೆಂಗಳೂರು, ಎ.28: ಫ್ಲ್ಯಾಟ್ ಮೇಲೆ ಲಕ್ಷಾಂತರ ರೂ. ಸಾಲ ಮಾಡಿದ್ದಲ್ಲದೆ, ಮರುಪಾವತಿ ಮಾಡದೆ ವಂಚಿಸಿದ್ದ ಮಾಲೀಕ, ಅದೇ ಫ್ಲ್ಯಾಟನ್ನು ಮತ್ತೊಬ್ಬರಿಗೆ 40 ಲಕ್ಷ ರೂ. ಬೆಲೆಗೆ ಲೀಸಿಗೆ ನೀಡಿ ಮತ್ತೊಂದು ವಂಚನೆ ಎಸಗಿದ ಬಗ್ಗೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೀಡಾದ ಲ್ಯಾಂಗ್ಫೋರ್ಡ್ ರಸ್ತೆಯ ರೋಹನ್ ಎಂಬವರು ವಂಚನೆಗೆ ಸಂಬಂಧಿಸಿ ನ್ಯಾಯಾಲಯದಲ್ಲಿ ಖಾಸಗಿ ಮೊಕದ್ದಮೆ ಹೂಡಿದ್ದರು. ಕೋರ್ಟ್ ನಿರ್ದೇಶನದಂತೆ, ಫ್ಲ್ಯಾಟ್ ಮಾಲೀಕ ಆರೋಪಿ ಮೊಹಮ್ಮದ್ ಅಲೀಮುದ್ದೀನ್ (32) ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಹೈದರಾಬಾದ್ ಮೂಲದ ಉದ್ಯಮಿಯಾಗಿರುವ ಆರೋಪಿ ಅಲೀಮುದ್ದೀನ್, ಲ್ಯಾಂಗ್ಫೋರ್ಡ್ ರಸ್ತೆಯ ಬೈಡ್ ಸ್ಟ್ರೀಟ್ನಲ್ಲಿ ವಸತಿ ಸಮುಚ್ಚಯದಲ್ಲಿ ಮನೆ ಹೊಂದಿದ್ದರು. ಬಳಿಕ ಅದೇ ಫ್ಲ್ಯಾಟ್ ಅನ್ನು ಎಸ್ ಬಿಐ ಬ್ಯಾಂಕಿಗೆ ಅಡವಿಟ್ಟು ಸಾಲ ಪಡೆದಿದ್ದರು. ಸಾಲದ ಕಂತನ್ನು ಸರಿಯಾಗಿ ಪಾವತಿ ಮಾಡುತ್ತಿರಲಿಲ್ಲ. ಇದರ ನಡುವಲ್ಲೇ ಫ್ಲ್ಯಾಟ್ ಅನ್ನು ರೋಹನ್ ಹಾಗೂ ಅವರ ಪತ್ನಿ ಹೆಸರಿಗೆ ಭೋಗ್ಯಕ್ಕೆ ನೀಡಿದ್ದರು. ಅವರಿಂದ ₹40 ಲಕ್ಷ ಪಡೆದಿದ್ದು ಈಗ ಬ್ಯಾಂಕ್ ನೋಟಿಸ್ ಬರುತ್ತಿದ್ದಂತೆ ಫ್ಲಾಟಿನ ನಿಜ ವಿಚಾರ ಗೊತ್ತಾಗಿದೆ.
ಭೋಗ್ಯದ ಹಣ ಪಡೆದಿರುವ ಅಲೀಮುದ್ದೀನ್, ಬೆಂಗಳೂರು ನಗರ ಬಿಟ್ಟು ಪರಾರಿಯಾಗಿದ್ದಾರೆ. ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಇಲ್ಲ. ಬ್ಯಾಂಕ್ ಅಧಿಕಾರಿಗಳು, ಫ್ಲ್ಯಾಟ್ ಜಪ್ತಿ ಮಾಡಲು ಹಲವು ಬಾರಿ ನೋಟಿಸ್ ನೀಡಿದ್ದು ಅದಕ್ಕೆ ಅಲೀಮುದ್ದೀನ್ ಉತ್ತರ ನೀಡಿರಲಿಲ್ಲ. ಹೀಗಾಗಿ, ಆಸ್ತಿ ಜಪ್ತಿ ಮಾಡಲು ಬ್ಯಾಂಕ್ ಅಧಿಕಾರಿಗಳು ನ್ಯಾಯಾಲಯದಿಂದ ಆದೇಶ ಪಡೆದಿರುವುದಾಗಿ ಗೊತ್ತಾಗಿದೆ.
ಮನೆಗೆ ಲಕ್ಷಾಂತರ ರೂ. ಸಾಲ ಬಾಕಿ ಇರುವ ಮಾಹಿತಿಯನ್ನು ಮುಚ್ಚಿಟ್ಟಿದ್ದ ಅಲೀಮುದ್ದೀನ್, ಭೋಗ್ಯದ ಹೆಸರಿನಲ್ಲಿ ಮತ್ತೆ ವಂಚಿಸಿರುವುದಾಗಿ ದೂರುದಾರರು ಆರೋಪಿಸಿದ್ದಾರೆ.
Businessman cheats couple by giving house on lease after cheating Bank of 40 lakhs loan in Bangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm