ಬ್ರೇಕಿಂಗ್ ನ್ಯೂಸ್
29-04-24 11:50 am Bangalore Correspondent ಕ್ರೈಂ
ಬೆಂಗಳೂರು, ಎ.28: ಫ್ಲ್ಯಾಟ್ ಮೇಲೆ ಲಕ್ಷಾಂತರ ರೂ. ಸಾಲ ಮಾಡಿದ್ದಲ್ಲದೆ, ಮರುಪಾವತಿ ಮಾಡದೆ ವಂಚಿಸಿದ್ದ ಮಾಲೀಕ, ಅದೇ ಫ್ಲ್ಯಾಟನ್ನು ಮತ್ತೊಬ್ಬರಿಗೆ 40 ಲಕ್ಷ ರೂ. ಬೆಲೆಗೆ ಲೀಸಿಗೆ ನೀಡಿ ಮತ್ತೊಂದು ವಂಚನೆ ಎಸಗಿದ ಬಗ್ಗೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಂಚನೆಗೀಡಾದ ಲ್ಯಾಂಗ್ಫೋರ್ಡ್ ರಸ್ತೆಯ ರೋಹನ್ ಎಂಬವರು ವಂಚನೆಗೆ ಸಂಬಂಧಿಸಿ ನ್ಯಾಯಾಲಯದಲ್ಲಿ ಖಾಸಗಿ ಮೊಕದ್ದಮೆ ಹೂಡಿದ್ದರು. ಕೋರ್ಟ್ ನಿರ್ದೇಶನದಂತೆ, ಫ್ಲ್ಯಾಟ್ ಮಾಲೀಕ ಆರೋಪಿ ಮೊಹಮ್ಮದ್ ಅಲೀಮುದ್ದೀನ್ (32) ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಹೈದರಾಬಾದ್ ಮೂಲದ ಉದ್ಯಮಿಯಾಗಿರುವ ಆರೋಪಿ ಅಲೀಮುದ್ದೀನ್, ಲ್ಯಾಂಗ್ಫೋರ್ಡ್ ರಸ್ತೆಯ ಬೈಡ್ ಸ್ಟ್ರೀಟ್ನಲ್ಲಿ ವಸತಿ ಸಮುಚ್ಚಯದಲ್ಲಿ ಮನೆ ಹೊಂದಿದ್ದರು. ಬಳಿಕ ಅದೇ ಫ್ಲ್ಯಾಟ್ ಅನ್ನು ಎಸ್ ಬಿಐ ಬ್ಯಾಂಕಿಗೆ ಅಡವಿಟ್ಟು ಸಾಲ ಪಡೆದಿದ್ದರು. ಸಾಲದ ಕಂತನ್ನು ಸರಿಯಾಗಿ ಪಾವತಿ ಮಾಡುತ್ತಿರಲಿಲ್ಲ. ಇದರ ನಡುವಲ್ಲೇ ಫ್ಲ್ಯಾಟ್ ಅನ್ನು ರೋಹನ್ ಹಾಗೂ ಅವರ ಪತ್ನಿ ಹೆಸರಿಗೆ ಭೋಗ್ಯಕ್ಕೆ ನೀಡಿದ್ದರು. ಅವರಿಂದ ₹40 ಲಕ್ಷ ಪಡೆದಿದ್ದು ಈಗ ಬ್ಯಾಂಕ್ ನೋಟಿಸ್ ಬರುತ್ತಿದ್ದಂತೆ ಫ್ಲಾಟಿನ ನಿಜ ವಿಚಾರ ಗೊತ್ತಾಗಿದೆ.
ಭೋಗ್ಯದ ಹಣ ಪಡೆದಿರುವ ಅಲೀಮುದ್ದೀನ್, ಬೆಂಗಳೂರು ನಗರ ಬಿಟ್ಟು ಪರಾರಿಯಾಗಿದ್ದಾರೆ. ಅವರು ಎಲ್ಲಿದ್ದಾರೆ ಎಂಬ ಮಾಹಿತಿ ಇಲ್ಲ. ಬ್ಯಾಂಕ್ ಅಧಿಕಾರಿಗಳು, ಫ್ಲ್ಯಾಟ್ ಜಪ್ತಿ ಮಾಡಲು ಹಲವು ಬಾರಿ ನೋಟಿಸ್ ನೀಡಿದ್ದು ಅದಕ್ಕೆ ಅಲೀಮುದ್ದೀನ್ ಉತ್ತರ ನೀಡಿರಲಿಲ್ಲ. ಹೀಗಾಗಿ, ಆಸ್ತಿ ಜಪ್ತಿ ಮಾಡಲು ಬ್ಯಾಂಕ್ ಅಧಿಕಾರಿಗಳು ನ್ಯಾಯಾಲಯದಿಂದ ಆದೇಶ ಪಡೆದಿರುವುದಾಗಿ ಗೊತ್ತಾಗಿದೆ.
ಮನೆಗೆ ಲಕ್ಷಾಂತರ ರೂ. ಸಾಲ ಬಾಕಿ ಇರುವ ಮಾಹಿತಿಯನ್ನು ಮುಚ್ಚಿಟ್ಟಿದ್ದ ಅಲೀಮುದ್ದೀನ್, ಭೋಗ್ಯದ ಹೆಸರಿನಲ್ಲಿ ಮತ್ತೆ ವಂಚಿಸಿರುವುದಾಗಿ ದೂರುದಾರರು ಆರೋಪಿಸಿದ್ದಾರೆ.
Businessman cheats couple by giving house on lease after cheating Bank of 40 lakhs loan in Bangalore.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm