ಬ್ರೇಕಿಂಗ್ ನ್ಯೂಸ್
30-04-24 10:16 pm HK News Desk ಕ್ರೈಂ
ಮುಂಬೈ, ಎ.30: ಮುಂಬೈ ಪೊಲೀಸರು ಅತಿ ದೊಡ್ಡ ಸೈಬರ್ ಮೋಸದ ಕಳ್ಳಾಟವನ್ನು ಪತ್ತೆ ಮಾಡಿದ್ದಾರೆ. ಎಂಎನ್ ಸಿ ಕಂಪನಿಯಲ್ಲಿ ಡೈರೆಕ್ಟರ್ ಆಗಿ ನಿವೃತ್ತರಾಗಿದ್ದ ಮಹಿಳೆಯೊಬ್ಬರಿಗೆ ತಾವು ಪೊಲೀಸ್, ಸಿಬಿಐ ಅಧಿಕಾರಿಗಳೆಂದು ಹೇಳಿ ಬರೋಬ್ಬರಿ 25 ಕೋಟಿ ರೂಪಾಯಿ ಪೀಕಿಸ್ಕೊಂಡು ವಂಚನೆ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಹಿಳೆಗೆ ಕಳೆದ ಫೆಬ್ರವರಿ ತಿಂಗಳಲ್ಲಿ ವಾಟ್ಸಪ್ ಕರೆಯೊಂದು ಬಂದಿತ್ತು. ಟೆಲಿಕಾಂ ಡಿಪಾರ್ಟ್ಮೆಂಟ್ ನಿಂದ ಎಂದು ಫೋನ್ ಮಾಡಿದ್ದವರು ತಿಳಿಸಿದ್ದು, ನಿಮ್ಮ ಮೂರು ಮೊಬೈಲ್ ನಂಬರ್ ಡಿ ಏಕ್ಟಿವೇಟ್ ಆಗುತ್ತೆ ಎಂದಿದ್ದರು. ನಿವೃತ್ತಿ ಬದುಕಿನಲ್ಲಿರುವ ಮಹಿಳೆ ಕೂಡಲೇ ಯಾಕಪ್ಪಾ, ನನ್ನ ಮೊಬೈಲ್ ಸಂಖ್ಯೆಯನ್ನು ಹಾಗೆ ಮಾಡ್ತೀಯಾ ಎಂದು ಕೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿದ ಆ ವ್ಯಕ್ತಿ ನಿಮ್ಮ ಮೇಲೆ ಕೇಸು ಆಗಿದೆ, ಆ ಬಗ್ಗೆ ತಿಳಿದುಕೊಳ್ಳಬೇಕೆಂದಿದ್ದರೆ ನಾನು ಪೊಲೀಸರಿಗೆ ಕನೆಕ್ಟ್ ಮಾಡ್ತೀನಿ ಎಂದಿದ್ದಾನೆ.
ಆನಂತರ, ಮತ್ತೊಬ್ಬ ವ್ಯಕ್ತಿ ಸಂಪರ್ಕಕ್ಕೆ ಬಂದಿದ್ದು, ತಾನು ಪೊಲೀಸ್ ಅಧಿಕಾರಿಯೆಂದು ಪರಿಚಯ ಮಾಡಿಕೊಂಡಿದ್ದಾನೆ. ಹಣಕಾಸು ವಂಚನೆ ಪ್ರಕರಣ ಒಂದರಲ್ಲಿ ನಿಮ್ಮ ಮೊಬೈಲ್ ನಂಬರ್ ಮತ್ತು ಆಧಾರ್ ಕಾರ್ಡ್ ಲಿಂಕ್ ಆಗಿರುವುದು ಕಂಡುಬಂದಿದೆ. ಹಾಗಾಗಿ, ತನಿಖೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾನೆ. ಅದೇ ಸಂದರ್ಭದಲ್ಲಿ ಪೂರಕವಾಗಿ ತನಿಖೆಯನ್ನು ಸಿಬಿಐನವರು ಮಾಡುತ್ತಿದ್ದು ಬೇಕಾದ್ರೆ ಅವರಿಗೂ ಸಂಪರ್ಕ ಕಲ್ಪಿಸುತ್ತೇನೆ ಎಂದು ಹೇಳಿ ಸಿಬಿಐ ಅಧಿಕಾರಿಯ ಸೋಗಿನಲ್ಲಿದ್ದ ಮತ್ತೊಬ್ಬನಿಗೆ ಸಂಪರ್ಕ ಕೊಡಿಸಿದ್ದಾನೆ.
ಸಿಬಿಐ ಅಧಿಕಾರಿ ದರ್ಪದಿಂದ ಮಾತನಾಡಿದ್ದಲ್ಲದೆ, ಮಹಿಳೆಯನ್ನು ಮನೆಗೆ ಬಂದು ಬಂಧಿಸುವುದಾಗಿ ಹೇಳಿ ಹೆದರಿಸಿದ್ದಾನೆ. ಅಷ್ಟರಲ್ಲಿ ಪೊಲೀಸ್ ಆಗಿದ್ದ ವ್ಯಕ್ತಿ ನಿಮ್ಮನ್ನು ನಾವು ಒಂದಷ್ಟು ಹಣ ಕೊಟ್ಟರೆ ಬಚಾವ್ ಮಾಡ್ತೀವಿ ಎಂದು ಹೇಳಿ ಮಹಿಳೆಯನ್ನು ಪುಸಲಾಯಿಸಿದ್ದಾನೆ. ನಿಮ್ಮದೇ ಹೆಸರಲ್ಲಿ ಪ್ರತ್ಯೇಕ ಖಾತೆ ಓಪನ್ ಮಾಡಿ ಒಂದಷ್ಟು ಹಣವನ್ನು ನೀವು ಡಿಪಾಸಿಟ್ ಮಾಡಬೇಕು. ಆನಂತರ, ಆ ಹಣ ನಿಮಗೆ ರಿಟರ್ನ್ ಆಗುತ್ತದೆ ಎಂದು ನಂಬಿಸಿದ್ದಾನೆ. ಅಲ್ಲದೆ, ಆ ಹಣ ನೇರವಾಗಿ ಆರ್ ಬಿಐ ಖಾತೆಗೆ ಹೋಗುತ್ತದೆ, ಅಲ್ಲಿ ಸೇಫ್ ಆಗಿರುತ್ತದೆ ಎಂದೂ ಹೇಳಿದ್ದಾನೆ. ಆನಂತರ ಸೈಬರ್ ಕಳ್ಳರೇ ಆಕೆಯ ಆಧಾರ್ ಕಾರ್ಡ್ ಪಡೆದು ಮಹಿಳೆಯ ಹೆಸರಿನಲ್ಲೇ ಕರೆಂಟ್ ಎಕೌಂಟ್ ಓಪನ್ ಮಾಡುತ್ತಾರೆ. ಮಹಿಳೆಯ ಬಳಿ ಆ ಖಾತೆಗೆ ಹಣ ಹಾಕುವಂತೆ ಹೇಳಿದ್ದಲ್ಲದೆ, ಇದರ ರಶೀದಿಯನ್ನು ನೀವು ಸ್ಥಳೀಯ ಠಾಣೆಯಲ್ಲಿ ಪಡೆದುಕೊಳ್ಳಬಹುದು ಎಂದು ನಂಬಿಸಿದ್ದಾರೆ.
ಮಹಿಳೆ ಮೋಸಗಾರರು ಹೇಳಿದಂತೆ, 25 ಕೋಟಿಯಷ್ಟು ಮೊತ್ತವನ್ನು ಆ ಖಾತೆಗೆ ಡಿಪಾಸಿಟ್ ಮಾಡಿದ್ದರು. ಹಣವನ್ನು ಡಿಪಾಸಿಟ್ ಮಾಡಿದ ಬಳಿಕ ಮೋಸಗಾರರು ಸಂಪರ್ಕಕ್ಕೆ ಬಾರದೇ ಇದ್ದುದರಿಂದ ಸಂಶಯಗೊಂಡು ಮುಂಬೈ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಸದ್ಯಕ್ಕೆ 31 ಬ್ಯಾಂಕ್ ಖಾತೆಗಳನ್ನು ಜಪ್ತಿ ಮಾಡಿದ್ದಾರೆ. ಆರೋಪಿಗಳ ಜಾಡು ಹಿಡಿದು ತನಿಖೆಯನ್ನು ಉತ್ತರ ಭಾರತಕ್ಕೆ ವಿಸ್ತರಣೆ ಮಾಡಿದ್ದಾರೆ.
THE MUMBAI cyber police registered an FIR earlier this month when the former director of a corporate firm lost nearly Rs 25 crore in a cyber fraud that took place between February 6 and April 3.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm