ಬ್ರೇಕಿಂಗ್ ನ್ಯೂಸ್
03-05-24 03:21 pm Bangalore Correspondent ಕ್ರೈಂ
ಬೆಂಗಳೂರು, ಮೇ.03: ವಿವಾಹಿತ ಮಹಿಳೆಯನ್ನು ಮದುವೆಯಾಗುವಂತೆ ಪೀಡಿಸಿದಲ್ಲದೆ, ಅದನ್ನು ನಿರಾಕರಿಸಿದಕ್ಕೆ ಆಕೆಯ ಮನೆಗೆ ಬೆಂಕಿ ಇಟ್ಟ ಆರೋಪಿಯನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆ.ಜಿ.ಹಳ್ಳಿ ನಿವಾಸಿ ಅಬಾರ್ಜ್ (24) ಬಂಧಿತ ಆರೋಪಿ. ಕೆ.ಜಿ.ಹಳ್ಳಿಯಲ್ಲಿ ಸಣ್ಣ- ಪುಟ್ಟ ಕೆಲಸ ಮಾಡಿಕೊಂಡಿದ್ದ ಆರೋಪಿ ಹಾಗೂ ದೂರುದಾರ ವಿವಾಹಿತ ಮಹಿಳೆ ದೂರದ ಸಂಬಂಧಿಗಳಾಗಿದ್ದಾರೆ. ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಟೈಲರಿಂಗ್ ಕೆಲಸ ಮಾಡುತ್ತಿರುವ ಪತಿ ಹಾಗೂ ಮೂವರು ಮಕ್ಕಳ ಜತೆ ಸಾರಾಯಿಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.
ಈ ಮಧ್ಯೆ ಆರೋಪಿ, ಕೆಲ ತಿಂಗಳಿಂದ ದೂರುದಾರ ಮಹಿಳೆಗೆ ಪತಿಯಿಂದ ವಿಚ್ಛೇದನ ಪಡೆದುಕೊಂಡು ತನ್ನೊಂದಿಗೆ ಮದುವೆಯಾಗುವಂತೆ ಪೀಡಿಸುತ್ತಿದ್ದ. ಈ ವಿಚಾರವನ್ನು ತನ್ನ ಗಂಡನಿಗೂ ತಿಳಿಸಿದ್ದರು. ಹೀಗಾಗಿ ಹಿರಿಯರ ಸಮ್ಮುಖದಲ್ಲಿ ಮಹಿಳೆಗೆ ಮತ್ತೂಮ್ಮೆ ತೊಂದರೆ ಕೊಡದಂತೆ ಎಚ್ಚರಿಕೆ ನೀಡಿ ಸಂಧಾನ ಮಾಡಲಾಗಿತ್ತು. ಹಳೇ ಚಾಳಿ ಮುಂದುವರಿಸಿದ್ದ ಆರೋಪಿ, ಮಹಿಳೆಯನ್ನು ಹಿಂಬಾಲಿಸಲಾರಂಭಿಸಿದ್ದ. ಮದುವೆಯಾಗುವಂತೆ ಪುನಃ ಪೀಡಿಸಲಾರಂಭಿಸಿದ್ದ. ದೂರುದಾರ ಮಹಿಳೆ ಹಾಗೂ ಕುಟುಂಬದವರು, ಏಪ್ರಿಲ್ 10ರಂದು ರಾತ್ರಿ ಸಂಬಂಧಿಕರ ಮನೆಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇರಲಿಲ್ಲ. ಏಪ್ರಿಲ್ 11ರಂದು ನಸುಕಿನಲ್ಲಿ ಮನೆಗೆ ಬಂದಿದ್ದ ಆರೋಪಿ, ಬೆಂಕಿ ಹಚ್ಚಿ ಪರಾರಿಯಾಗಿದ್ದ. ಬೆಂಕಿ ನೋಡಿದ್ದ ಅಕ್ಕ–ಪಕ್ಕದ ಮನೆಯವರು ದೂರುದಾರ ಮಹಿಳೆಗೆ ವಿಷಯ ತಿಳಿಸಿದ್ದರು. ಅವರು ಮನೆಗೆ ಬರುವಷ್ಟರಲ್ಲಿ ಎಲೆಕ್ಟ್ರಾನಿಕ್ ವಸ್ತುಗಳು ಹಾಗೂ ಪೀಠೋಪಕರಣ ಸುಟ್ಟುಹೋಗಿದ್ದವು.
The Sampigehalli police have arrested a 25-year-old man for allegedly burning down a woman’s house after she spurned his wedding proposal.The fire, which occurred on April 11 when no one was at home near Saraipalya in northeast Bengaluru, was initially suspected to have been caused by a short circuit. Later, a fire report was filed at the Sampigehalli police station.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm