ಬ್ರೇಕಿಂಗ್ ನ್ಯೂಸ್
05-05-24 02:44 pm HK News Desk ಕ್ರೈಂ
ಕಾರವಾರ, ಮೇ.5: ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.
ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.
ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.
ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.
ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.
Karwar Dandeli Wife throws 6 year old baby to water canal, body found. She was angry and frustrated by husbands behaviour, the baby was said to be mute.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm