ಬ್ರೇಕಿಂಗ್ ನ್ಯೂಸ್
05-05-24 02:44 pm HK News Desk ಕ್ರೈಂ
ಕಾರವಾರ, ಮೇ.5: ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.
ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.
ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.
ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.
ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.
Karwar Dandeli Wife throws 6 year old baby to water canal, body found. She was angry and frustrated by husbands behaviour, the baby was said to be mute.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm