ಬ್ರೇಕಿಂಗ್ ನ್ಯೂಸ್
05-05-24 02:44 pm HK News Desk ಕ್ರೈಂ
ಕಾರವಾರ, ಮೇ.5: ತಾಯಿಯೊಬ್ಬಳು ಕೋಪದಲ್ಲಿ ತನ್ನ ಮಗುವನ್ನೇ ಕಾಲುವೆಗೆ ಎಸೆದಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಹಾಲಮಡ್ಡಿಯಲ್ಲಿ ಘಟನೆ ನಡೆದಿದೆ. ಸಾವಿತ್ರಿ ಎಂಬಾಕೆ ತನ್ನ ಆರು ವರ್ಷದ ಮಗನನ್ನು ನಾಲೆಗೆ ಎಸೆದಿದ್ದಾಳೆ. ವಿನೋದ್ (6) ಮೃತ ದುರ್ದೈವಿ.
ಮಗುವು ಮೂಕನಾಗಿದ್ದರಿಂದ ಸಾವಿತ್ರಿ ಹಾಗೂ ರವಿಕುಮಾರ್ ದಂಪತಿ ನಡುವೆ ಗಲಾಟೆ ನಡೆಯುತ್ತಿತ್ತು. ರವಿಕುಮಾರ್ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಪ್ರತೀ ಬಾರಿ ಗಲಾಟೆಯಾದಾಗಲೂ ಮಗು ಸಾಯಲಿ ಎಂದು ಸಾವಿತ್ರಿಗೆ ಬೈಯ್ಯುತ್ತಿದ್ದ.

ನಿನ್ನೆ ಶನಿವಾರ ರಾತ್ರಿಯೂ ಸಹ ಸಾವಿತ್ರಿ ಹಾಗೂ ಪತಿ ರವಿಕುಮಾರ್ ಜತೆಗೆ ಜಗಳ ನಡೆದಿದೆ. ಪತಿ ಜತೆಗೆ ಗಲಾಟೆ ಆದಾಗ ಸಾವಿತ್ರಿ ಕೋಪದಲ್ಲಿ ಮಗುವನ್ನು ಎತ್ತಿಕೊಂಡು ಹೋಗಿ ನಾಲೆಗೆ ಎಸೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮಗುವನ್ನು ಹುಡುಕಾಡಲು ಮುಂದಾಗಿದ್ದಾರೆ.
ಆದರೆ ಮಗು ಸಿಗದಿದ್ದಾಗ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಹಾಲಮಡ್ಡಿಯಲ್ಲಿ ನಡೆದ ಶೋಧ ಕಾರ್ಯಾಚರಣೆ ವೇಳೆ ಮೃತದೇಹವು ಪತ್ತೆಯಾಗಿದೆ. ನಾಲೆಗೆ ಎಸೆಯಲ್ಪಟ್ಟಾಗ ಮೊಸಳೆಯೊಂದು ಮಗುವಿನ ಬಲಗೈ ಕಚ್ಚಿ ಎಳೆದು ಹೋಗಿತ್ತು. ಆರು ವರ್ಷದ ಗಂಡು ಮಗುವಿಗಾಗಿ ನಿನ್ನೆ ಶನಿವಾರ ರಾತ್ರಿಯಿಂದ ಶೋಧ ಕಾರ್ಯಾಚರಣೆ ಮುಂದುವರಿದಿತ್ತು.
ಭಾನುವಾರ ಬೆಳಗ್ಗೆ ಕಾರ್ಯಾಚರಣೆ ವೇಳೆ ಮಗುವಿನ ಜತೆ ಆಗಾಗ ಮೊಸಳೆಯು ಕಾಣಿಸಿಕೊಂಡಿತ್ತು. ದಾಂಡೇಲಿಯ ಗ್ರಾಮೀಣ ಠಾಣಾ ಪೊಲೀಸರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ಸಹಕಾರದಲ್ಲಿ ಮಗುವಿನ ಮೃತದೇಹ ಪತ್ತೆ ಮಾಡಲಾಗಿದೆ. ಮುಳುಗು ತಜ್ಞರು ಮೊಸಳೆಯ ಬಾಯಿಯಿಂದ ಮಗುವಿನ ಮೃತದೇಹ ಬಿಡಿಸಿಕೊಂಡು ಬಂದಿದ್ದಾರೆ.
ಇನ್ನೂ ಆರೋಪಿಗಳಾದ ರವಿ ಕುಮಾರ್ ಹಾಗೂ ಸಾವಿತ್ರಿ ದಂಪತಿಯನ್ನು ದಾಂಡೇಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ. ಅಪ್ಪ-ಅಮ್ಮನ ಜಗಳದಲ್ಲಿ ಏನು ತಿಳಿಯದ ಮಗುವೊಂದು ಪ್ರಾಣವನ್ನೇ ಕಳೆದುಕೊಂಡಿದೆ.
Karwar Dandeli Wife throws 6 year old baby to water canal, body found. She was angry and frustrated by husbands behaviour, the baby was said to be mute.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm