ಬ್ರೇಕಿಂಗ್ ನ್ಯೂಸ್
09-05-24 10:59 am Mangalore Correspondent ಕ್ರೈಂ
ಮಂಗಳೂರು, ಮೇ.9: ನಗರದ ಬಾವುಟಗುಡ್ಡೆಯ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ಇಟ್ಟಿದ್ದ ಪ್ರಕರಣದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದು ಮೊಬೈಲಿನಲ್ಲಿ ಆರು ನಿಮಿಷದ ವಿಡಿಯೋ ಸೆರೆಯಾಗಿತ್ತು ಎನ್ನುವುದನ್ನು ಪತ್ತೆ ಮಾಡಿದ್ದಾರೆ. ಪ್ರಕರಣ ಸಂಬಂಧ ಸುರತ್ಕಲ್ ನಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಹುಡುಗನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಲ್ಲಿನ ಚಿಕಿತ್ಸೆಗಾಗಿ ಮೆಡಿಕಲ್ ಕಾಲೇಜಿನ ಡೆಂಟಲ್ ವಿಭಾಗಕ್ಕೆ 17 ವರ್ಷದ ಹುಡುಗ ತಾಯಿ ಜೊತೆಗೆ ಬರುತ್ತಿದ್ದ. ಈ ಹಿಂದೆ ಎರಡು ಬಾರಿ ಬಂದಿದ್ದ ಬಾಲಕ, ಮೊನ್ನೆ ತಾಯಿಗೆ ಹುಷಾರಿಲ್ಲವೆಂದು ಒಬ್ಬನೇ ಬಂದಿದ್ದ. ತಾಯಿ ಮೊಬೈಲನ್ನು ಜೊತೆಗೆ ತಂದಿದ್ದ ಹುಡುಗ, ಟಾಯ್ಲೆಟಲ್ಲಿ ವಿಡಿಯೋ ಆನ್ ಮಾಡಿ ಹೊರಗೆ ಸುತ್ತಾಡಲು ಹೋಗಿದ್ದ. ಕೆಲ ಹೊತ್ತಿನಲ್ಲಿ ಮೊಬೈಲ್ ರಿಂಗ್ ಆಗಿದ್ದರಿಂದ ಸೆಕ್ಯುರಿಟಿ ಸಿಬಂದಿ ಅಲರ್ಟ್ ಆಗಿದ್ದು, ಮೊಬೈಲನ್ನು ವಶಕ್ಕೆ ಪಡೆದಿದ್ದರು.
ಬಂದರು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು, ಮೊಬೈಲ್ ಸಂಖ್ಯೆ ಆಧಾರದಲ್ಲಿ ಬಾಲಕನ ತಾಯಿಯನ್ನು ಬರಲು ಹೇಳಿದ್ದಾರೆ. ಆನಂತರ, ಬಾಲಕ ಮತ್ತು ತಾಯಿ ಜೊತೆಗೇ ಮೆಡಿಕಲ್ ಕಾಲೇಜಿಗೆ ಬಂದಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮೊಬೈಲ್ ಆನ್ ಮಾಡಿಟ್ಟಿದ್ದರಿಂದ ಆ ಕ್ಷಣದ ವರೆಗೆ ಆರು ನಿಮಿಷದ ವಿಡಿಯೋ ಸೆರೆಯಾಗಿತ್ತು. ಆದರೆ, ಅದರಲ್ಲಿ ಯಾವುದೇ ಅಸಭ್ಯ ವಿಡಿಯೋ ದಾಖಲಾಗಿಲ್ಲ. ಒಬ್ಬ ಮಹಿಳೆಯೇನೋ ಬಂದು ಹೋಗುವ ಚಿತ್ರಣವಿದ್ದು, ಆಕೆಯ ತಲೆಯ ಭಾಗ ಮಾತ್ರ ಅಸ್ಪಷ್ಟವಾಗಿ ಬಂದಿದೆ. ಇಷ್ಟರಲ್ಲೇ ಮೊಬೈಲಿಗೆ ಕರೆ ಬಂದಿದ್ದು, ಕಿಡಿಗೇಡಿ ಕೃತ್ಯ ಬಯಲಾಗಿತ್ತು.
ಟಾಯ್ಲೆಟಲ್ಲಿ ಮೊಬೈಲ್ ಇಟ್ಟು ಹೋಗಿದ್ದ ಹುಡುಗ 17 ವರ್ಷದವನಾಗಿದ್ದು, ಆತನನ್ನು ಬಾಲಪರಾಧ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅಪ್ರಾಪ್ತನಾಗಿರುವ ಕಾರಣ ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುವಂತಿಲ್ಲ. ಮುಗ್ಧನಂತೆ ವರ್ತಿಸುವ ಹುಡುಗನ ತನಿಖೆಯೇ ಪೊಲೀಸರಿಗೆ ಸವಾಲಾಗಿದೆ.
Mangalore Mobile Phone in Toilet at KMC college Bavuta Gudde, 6 minute video found, minor arrested. The arrested is a 17 year old from surathkal. According to the police, the college security guard discovered the mobile while it was ringing even when no one was in the toilet. The phone was seized and a case has been registered in the North PS under Cr No 57/2024 u/s 354C IPC.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm