ಬ್ರೇಕಿಂಗ್ ನ್ಯೂಸ್
03-12-20 04:38 pm Headline Karnataka News Network ಕ್ರೈಂ
ಮುಂಬೈ, ಡಿ.3: ಮಲೈಕಾ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿ ಹಗರಣದ ರೂವಾರಿ, ಸಂಸ್ಥೆಯ ಅಧ್ಯಕ್ಷನಾಗಿದ್ದ ಗಿಲ್ಬರ್ಟ್ ಬ್ಯಾಪ್ಟಿಸ್ಟ್ ನನ್ನು ಮೀರಾ ರೋಡ್ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ನಿರೀಕ್ಷಣಾ ಜಾಮೀನು ಕೋರಿ ಗಿಲ್ಬರ್ಟ್ ಬ್ಯಾಪ್ಟಿಸ್ಟ್ ಮತ್ತು ಸೊಸೈಟಿಯ ನಿರ್ದೇಶಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಕೋರ್ಟ್ ಜಾಮೀನು ನಿರಾಕರಿಸಿ, ಗಿಲ್ಬರ್ಟ್ ಅರ್ಜಿಯನ್ನು ವಜಾ ಮಾಡಿತ್ತು. ಕೋರ್ಟ್ ಜಾಮೀನು ನಿರಾಕರಿಸಿದ ಬೆನ್ನಿಗೇ ಮುಂಬೈನ ಮೀರಾ ರೋಡ್ ಪೊಲೀಸರು ಗಿಲ್ಬರ್ಟ್ ಬ್ಯಾಪ್ಟಿಸ್ಟ್ ನನ್ನು ಬಂಧಿಸಿದ್ದಾರೆ.


ಇದಕ್ಕೂ ಮುನ್ನ ಕಳೆದ ತಿಂಗಳು ಥಾಣೆ ಕೋರ್ಟ್ ಗಿಲ್ಬರ್ಟ್ ಜಾಮೀನು ಅರ್ಜಿಯನ್ನು ವಜಾ ಮಾಡಿತ್ತು. ಆಬಳಿಕ ಗಿಲ್ಬರ್ಟ್ ಸುಪ್ರೀಂ ಮೆಟ್ಟಿಲೇರಿದ್ದು ಅಲ್ಲಿಯೂ ಜಾಮೀನು ಅರ್ಜಿ ನಿರಾಕರಿಸಲ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಗಿಲ್ಬರ್ಟ್ ಸೇರಿ ಸೊಸೈಟಿಯ ಮೂವರು ನಿರ್ದೇಶಕರಾದ ದೀಪಕ್ ಪೂಜಾರಿ, ಲೋಯಲ್ ಬ್ಯಾಪ್ಟಿಸ್ಟ್ ಮತ್ತು ಪ್ರಕಾಶ್ ಕೋಟ್ಯಾನ್ ಅವರನ್ನು ಬಂಧಿಸಿದ್ದಾರೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಡಿ.8ರ ವರೆಗೆ ಕಸ್ಟಡಿ ಪಡೆದಿದ್ದಾರೆ.
ಮಲೈಕಾ ಸೊಸೈಟಿಯ ಕಚೇರಿಗಳು ಮುಂಬೈ, ಗೋವಾ, ಉಡುಪಿ, ಮಂಗಳೂರು ಸೇರಿ ಹಲವೆಡೆ ಇದ್ದು, 2 ಸಾವಿರಕ್ಕೂ ಹೆಚ್ಚು ಮಂದಿ ಹೂಡಿಕೆದಾರರಿಗೆ 350 ಕೋಟಿಗೂ ಹೆಚ್ಚು ಮೊತ್ತವನ್ನು ಪಂಗನಾಮ ಹಾಕಿದ್ದಾರೆ. ಮುಂಬೈನ ಮೀರಾ ರೋಡ್ ನಲ್ಲಿರುವ ಸೊಸೈಟಿ ಕಚೇರಿಯ ವಿರುದ್ಧ ಮೊದಲ ದೂರು ಕಳೆದ ಅಕ್ಟೋಬರ್ 2ರಂದು ಮೀರಾ ರೋಡ್ ಠಾಣೆಯಲ್ಲಿ ದಾಖಲಾಗಿತ್ತು.
ಐಪಿಸಿ ಸೆಕ್ಷನ್ ಗಳಾದ 420 (ಮೋಸ), 406 (ನಂಬಿಕೆ ದ್ರೋಹ), 34 (ಕಾಮನ್ ಇಂಟೆನ್ಷನ್) ಸೇರಿದಂತೆ ಮಹಾರಾಷ್ಟ್ರ ಹೂಡಿಕೆದಾರರ ಹಿತಾಸಕ್ತಿ ಪರ ಕಾಯ್ದೆ (ಎಂಪಿಐಡಿ) ಅಡಿ ಪ್ರಕರಣ ದಾಖಲಾಗಿತ್ತು.


ಮುಂಬೈನಲ್ಲಿ 50ಕ್ಕೂ ಹೆಚ್ಚು ಮಂದಿ ದೂರು ದಾಖಲಿಸಿದ್ದಾರೆ. ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲಿ 150ಕ್ಕೂ ಹೆಚ್ಚು ಮಂದಿ ತಮಗೆ ವಂಚನೆ ಆಗಿರುವ ಬಗ್ಗೆ ದೂರು ದಾಖಲಿಸಿದ್ದರು. ಮಂಗಳೂರು ಪೊಲೀಸರು ಸೊಸೈಟಿಯಲ್ಲಿ ಮ್ಯಾನೇಜರ್ ಆಗಿದ್ದ ರೀನಾ ಜೋಷ್ ಎಂಬವರನ್ನು ಈಗಾಗ್ಲೇ ಬಂಧಿಸಿದ್ದಾರೆ.
Malaika Credit Society owner Gilbert Baptist has been arrested by the Mumbai police for cheating investors of Rs 350 crores.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm