ಬ್ರೇಕಿಂಗ್ ನ್ಯೂಸ್
15-05-24 10:20 am Bangalore Correspondent ಕ್ರೈಂ
ಬೆಂಗಳೂರು, ಮೇ.15: ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 40 ಲಕ್ಷ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ವಿಜಯನಗರ ಪೊಲೀಸರು ಸಿಐಡಿ ವಿಭಾಗದ ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ.
ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿದ ಸಿಐಡಿ ವಿಭಾಗದ ಮಹಿಳಾ ಪೊಲೀಸ್ ಅಧಿಕಾರಿ ಸೇರಿ ಇಬ್ಬರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಸಿಐಡಿ ಘಟಕದಲ್ಲಿ ಸೆಕ್ಷನ್ ಸುಪರಿಡೆಂಟ್ ಆಗಿದ್ದ ಅನಿತಾ ಬಿ.ಎಸ್ ಹಾಗೂ ರಾಮಚಂದ್ರ ಭಟ್ ಬಂಧಿತರು.
ಚಿಕ್ಕಮಗಳೂರಿನ ಕಲ್ಯಾಣನಗರದ ನಿವಾಸಿ ಸುನಿಲ್ ಎಂಬವರಿಗೆ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 40 ಲಕ್ಷ ರೂ. ವಂಚನೆ ಮಾಡಿದ್ದಾರೆ. ರಾಮಚಂದ್ರ ಭಟ್ ಎನ್ನುವವರು ಸಿಐಡಿ ಇಲಾಖೆ ಅಧಿಕಾರಿ ಅನಿತಾ ಅವರನ್ನು ಭೇಟಿ ಮಾಡಿಸಿ ಪರಿಚಯ ಮಾಡಿಕೊಟ್ಟಿದ್ದಾರೆ. ಈ ವೇಳೆ ಯುವಕ ಸುನೀಲ್ಗೆ ಕೆಪಿಎಸ್ಸಿ ನೇಮಕಾತಿಯ ಮೂಲಕ ಲೋಕೋಪಯೋಗಿ (ಪಿಡಬ್ಲ್ಯೂಡಿ) ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ ಹುದ್ದೆಯನ್ನು ಕೊಡಿಸುವುದಾಗಿ ನಂಬಿಸಿದ್ದರು. ಹಂತ ಹಂತವಾಗಿ ಹಣ ಕೊಟ್ಟರೆ ಕೆಲಸ ಕೊಡಿಸುವುದಾಗಿ ನಂಬಿಸಿ 40 ಲಕ್ಷ ರೂ. ವರೆಗೆ ಹಣ ಪಡೆದಿದ್ದಾರೆ. ಆದರೆ, ಕೆಲಸ ಮಾತ್ರ ಸಿಕ್ಕಿರಲಿಲ್ಲ.
ಯುವಕ ಸರ್ಕಾರಿ ಕೆಲಸ ಸಿಗಲ್ಲ ಎಂಬ ಅನುಮಾನದಲ್ಲಿ ತನ್ನ ಹಣ ಹಿಂತಿರುಗಿಸುವಂತೆ ಕೇಳಿದ್ದಾನೆ. ಆಗ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಉದ್ಯೋಗಕ್ಕೆ ವಾಮ ಮಾರ್ಗದಲ್ಲಿ ಹಣ ಕೊಟ್ಟು ಭ್ರಷ್ಟಾಚಾರ ಮಾಡಿದ ಆರೋಪದಡಿ ನಿನ್ನನ್ನು ಜೈಲಿಗೆ ಹಾಕಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಯುವಕ ಸುನೀಲ್ ಮನೆಯವರ ಒತ್ತಾಸೆ ಮೇರೆಗೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ವಂಚನೆ ದೂರು ದಾಖಲಿಸಿದ್ದಾನೆ. ಆರೋಪಿಗಳು ಇದೇ ರೀತಿ ಬೇರೆ ಇಬ್ಬರಿಗೂ ವಂಚನೆ ಮಾಡಿದ್ದು ಕೋಟಿಗೂ ಹೆಚ್ಚು ವಂಚನೆ ಮಾಡಿರುವುದಾಗಿ ತನಿಖೆಯಲ್ಲಿ ಪತ್ತೆಯಾಗಿದೆ.
Two CID staffs arrested for cheating people in the name of government jobs in Bangalore. Anita BS and Ramachandra Bhatt, who were working as section superintendents in Bengaluru’s CID unit, have been arrested in this connection, informed the police.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
07-08-25 11:19 am
Mangalore Correspondent
ಧರ್ಮಸ್ಥಳದಲ್ಲಿ ಪರ-ವಿರೋಧ ಗಲಾಟೆ ; ಯೂಟ್ಯೂಬ್, ಮಾಧ್...
06-08-25 11:11 pm
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm