ಬ್ರೇಕಿಂಗ್ ನ್ಯೂಸ್
15-05-24 12:21 pm HK News Desk ಕ್ರೈಂ
ಹುಬ್ಬಳ್ಳಿ, ಮೇ.15: ನೇಹಾ ಹಿರೇಮಠ ಹತ್ಯೆ ಕೇಸ್ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಮತ್ತೊಬ್ಬ ಯುವತಿಯೊಬ್ಬಳ ಕೊಲೆಯಾಗಿದೆ.
ನೇಹಾ ಕೊಲೆಯಾದ ಮಾದರಿಯಲ್ಲಿಯೇ ಸಾಯಿಸುವೆ ಎಂದು ಎಚ್ಚರಿಸಿದ್ದ ಯುವಕ ನಸುಕಿನಲ್ಲಿ ಯುವತಿ ಮನೆಗೆ ನುಗ್ಗಿ ಚೂರಿಯಿಂದ ತಿವಿದು ಭೀಕರ ಕೊಲೆ ಮಾಡಿದ್ದಾನೆ. ಹುಬ್ಬಳ್ಳಿ ನಗರದ ವೀರಾಪುರ ಓಣಿ ಗುಡಿಓಣಿ ನಿವಾಸಿ ಅಂಜಲಿ ಅಂಬಿಗೇರ (20) ಎಂಬಾಕೆಯೇ ಸಾವನ್ನಪ್ಪಿದ ಯುವತಿ. ಈಕೆಯನ್ನು ಮೈಸೂರು ಮೂಲದ ವಿಶ್ವ ಅಲಿಯಾಸ್ ಗಿರೀಶ್ ಸಾವಂತ (21) ಎಂಬಾತ ಮನೆಯವರ ಎದುರಲ್ಲೇ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಯುವಕ ಕಳೆದ ಹಲವು ಸಮಯದಿಂದ ಅಂಜಲಿಗೆ ಪ್ರೀತಿಸು ಎಂದು ಪೀಡಿಸುತ್ತಿದ್ದನಂತೆ. ಆದರೆ ಅಂಜಲಿ ಪ್ರೀತಿ ನಿರಾಕರಿಸಿದಕ್ಕೆ ಬುಧವಾರ ಬೆಳಂಬೆಳ್ಳಗ್ಗೆ ವೀರಾಪುರ ಓಣಿಯಲ್ಲಿನ ಅಂಜಲಿ ನಿವಾಸಕ್ಕೆ ತೆರಳಿ ಮನೆಯ ಬಾಗಿಲು ಬಡಿದು ಏಕಾಏಕಿ ಅಂಜಲಿ ಹೊಟ್ಟೆಗೆ ಚಾಕು ಇರಿದಿದ್ದಾನೆ. ಸಮಾಧಾನವಾಗದೇ ಮನೆ ತುಂಬೆಲ್ಲಾ ಎಳೆದಾಡಿ ಚಾಕುವಿನಿಂದ ಚುಚ್ಚಿದ್ದಾನೆ. ಮನೆಯವರು ಬಿಡಿಸಲು ಹೋದರೂ ಎಳೆದಾಡಿ ಕೊಲೆ ಮಾಡಿದ್ದಾನೆ.


ಕೊಲೆ ಮಾಡಿದ ಯುವಕ ಮೃತ ಯುವತಿಯನ್ನು ಮೈಸೂರು ಪ್ರವಾಸಕ್ಕೆ ಬಾ ಎಂದು ಕಾಡುತ್ತಿದ್ದ. ಒಂದು ವೇಳೆ ನೀನು ನನ್ನ ಜೊತೆ ಬರದೆ ಹೋದ್ರೆ ನೇಹಾಗೆ ಆದ ಹಾಗೆಯೇ ನಿನಗೂ ಮಾಡ್ತೀನಿ ಎಂದು ಧಮ್ಕಿ ಹಾಕಿದ್ದ. ಕೃತ್ಯ ಎಸಗಿದ ಗಿರೀಶ್ ಸಾವಂತ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಕೇಸು ದಾಖಲಾಗಿತ್ತು.
ಇನ್ನು ಆರೋಪಿ ಗಿರೀಶ್ ಸಾವಂತ ಅಂಜಲಿಗೆ ಬೆದರಿಕೆ ಹಾಕಿರುವ ವಿಚಾರವಾಗಿ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ, ಅಜ್ಜಿಯ ಮಾತಿಗೆ ಪೊಲೀಸರು ನಿಗಾ ವಹಿಸಲಿಲ್ಲ ಎಂಬ ಆರೋಪ ಕುಟುಂಬದಿಂದ ಕೇಳಿಬಂದಿದೆ. ಇದೆಲ್ಲ ಮೂಢನಂಬಿಕೆ, ಹಾಗೇನೂ ಆಗಲ್ಲ ಎಂದು ಬೆಂಡಿಗೇರಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು. ಬೆಳಗ್ಗಿನಿಂದಲೇ ಹುಬ್ಬಳ್ಳಿ ನಗರದಾದ್ಯಂತ ಎಲರ್ಟ್ ಮಾಡಿದ ಪೊಲೀಸರು ಆರೋಪಿಯನ್ನು ಮಧ್ಯಾಹ್ನ ವೇಳೆಗೆ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
20 year old Anjali brutally killed for rejecting love in Hubballi. The arrested has been identified as Girish. He was threatening Anjali of killing her just like Neha Hiremath if she didn't agree for his love proposal. He entered Anjalis house and killed her by Stabbing her several times.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm