ಬ್ರೇಕಿಂಗ್ ನ್ಯೂಸ್
15-05-24 02:56 pm Bangalore Correspondent ಕ್ರೈಂ
ಬೆಂಗಳೂರು, ಮೇ.15: ರಾಜಧಾನಿ ಬೆಂಗಳೂರಿನ ಕೆಂಗೇರಿ ಠಾಣಾ ವ್ಯಾಪ್ತಿಯ ಒಂಟಿ ಮಹಿಳೆ ಕೊಲೆ ಪ್ರಕರಣವನ್ನ ಕೊನೆಗೂ ಪೊಲೀಸರು ಭೇದಿಸಿದ್ದಾರೆ.
24 ವರ್ಷದ ಮೋನಿಕಾ ಬಂಧಿತ ಆರೋಪಿಯಾಗಿದ್ದು, ಮೇ10 ರಂದು ಕೆಂಗೇರಿಯ ಕೋನಸಂದ್ರದಲ್ಲಿ ಬರ್ಬರ ಕೊಲೆ ನಡೆದಿತ್ತು. ಮೃತ ಮಹಿಳೆಯನ್ನು ದಿವ್ಯಾ ಎಂದು ಗುರುತಿಸಲಾಗಿದೆ.
ಸಲೂನ್ ಶಾಪ್ ಹೊಂದಿರುವ ಗುರುರಾಜ್, ಪತ್ನಿ ದಿವ್ಯಾ ಜತೆ ಕೋನಸಂದ್ರದಲ್ಲಿ ಸ್ವಂತ ಮನೆಯಲ್ಲಿ ವಾಸಿಸುತ್ತಿದ್ದರು. ಮೇ10 ಮಧ್ಯಾಹ್ನ 1.30ರ ಸುಮಾರಿಗೆ ದಿವ್ಯಾ ಕತ್ತುಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿ ಅವರ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದರು. ವಿವಿಧ ಆಯಾಮದಲ್ಲಿ ತನಿಖೆ ನಡೆಸಿದ ಪೊಲೀಸರು ದಿವ್ಯಾ ಅವರ ಮನೆಯ ಮೇಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ಮೋನಿಕಾ ಎಂಬ ಕಳ್ಳಿಯನ್ನ ಬಂಧಿಸಿದ್ದಾರೆ.
ಕೋಲಾರ ಮೂಲದ ಮೋನಿಕಾ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡಿದ್ದು, ಕಳೆದ ಮೂರು ತಿಂಗಳಿಂದ ಮೃತೆ ದಿವ್ಯಾ ಮನೆಯಲ್ಲಿ ಬಾಡಿಗೆಯಿದ್ದಳು. ಕಂಪನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ಕೆಲಸ ತೊರೆದಿದ್ದಳು. ಬಳಿಕ ಸಾಲ ತೀರಿಸಲು ಹಾಗೂ ಶೋಕಿ ಜೀವನ ನಡೆಸಲು ಈ ಕೃತ್ಯ ಮಾಡಿದ್ದಾಳೆ ಎಂದು ತಿಳಿದುಬಂದಿದೆ.
ಮೋನಿಕಾ ಲವರ್ ಟಾಟಾ ಎಸಿ ವಾಹನ ಖರೀದಿಗೆ ಹಣದ ಮುಗ್ಗಟ್ಟು ಎದುರಿಸಿದ್ದ. ಜೊತೆ ಈಕೆಯ ಮೇಲಿನ ಸಾಲ ಒತ್ತಡ ಸೃಷ್ಟಿಸಿತ್ತು. ಮನೆ ಮಾಲಕಿ ದಿವ್ಯಾ ಮೈ ಮೇಲಿದ್ದ ಒಡವೆ ಮೇಲೆ ಮೋನಿಕಾಳ ಕಣ್ಣು ಕುಕ್ಕಿಸಿತ್ತು. ಸಲುಗೆ ಬೆಳೆಸಿಕೊಂಡು ಮನೆ ಮಾಲೀಕರ ಚಲನಾವಲನಾಗಳ ಗಮನಿಸಿ ಯುವತಿ ಹತ್ಯೆಗೆ ಸಂಚು ರೂಪಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿವ್ಯಾ ಗಂಡ ಗುರುಮೂರ್ತಿ ಎಂದಿನಂತೆ ಕೆಲಸಕ್ಕಾಗಿ ಹೋಗಿದ್ದ ವೇಳೆ ದಿವ್ಯಾ ಒಬ್ಬಂಟಿಯಾಗಿರುವುದನ್ನ ಅರಿತಿದ್ದ ಮೋನಿಕಾ, ಮನೆಗೆ ಹೋಗಿ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾಳೆ. ಬಳಿಕ ಆಕೆ ಮೈಮೇಲಿದ್ದ 36 ಗ್ರಾಂ ಚಿನ್ನದ ಸರ ಕಸಿದು ಎಸ್ಕೇಪ್ ಆಗಿದ್ಲು. ಕದ್ದ ಚಿನ್ನದ ಸರವನ್ನ ಗಿರವಿ ಇಟ್ಟು ಬಂದ ದುಡ್ಡಿನಲ್ಲಿ ಮೋಜು ಮಸ್ತಿ ಮಾಡಿದ್ದಾಳೆ . ಇನ್ನು ಅದೇ ಮನೆಯಲ್ಲೇ ಉಳಿದುಕೊಂಡು ಏನು ಮಾಡಿಲ್ಲವೆಂಬಂತೆ ನಾಟಕವಾಡುತ್ತಿದ್ದಳು. ತನಿಖೆ ಕೈಗೊಂಡ ಇನ್ ಸ್ಪೆಕ್ಟರ್ ಕೊಟ್ರೇಶಿ ನೇತೃತ್ವದ ತಂಡವು ಅನುಮಾನದ ಮೇರೆಗೆ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ ಸತ್ಯ ಸಂಗತಿ ಬಾಯ್ಬಿಟ್ಟಿದ್ದಾಳೆ. ಸದ್ಯ ಆಕೆಯನ್ನ ಪೊಲೀಸ್ ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ.
24 year old girl arrested for killing house owner over gold chain in Bangalore. The arrested has been identified as Monica. The deceased has been identified as Divya. The murder took place on May 10.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm