ಬ್ರೇಕಿಂಗ್ ನ್ಯೂಸ್
15-05-24 11:34 pm Mangalore Correspondent ಕ್ರೈಂ
ಮಂಗಳೂರು, ಮೇ.16: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆಹಚ್ಚಿ 270 ಗ್ರಾಂ ಡ್ರಗ್ಸ್ ವಶಪಡಿಸಿ ನಾಲ್ವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ಎಂಡಿಎಂಎ ಡ್ರಗ್ಸ್ ಅನ್ನು ಕಾರಿನಲ್ಲಿ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದೇರಳಕಟ್ಟೆ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದಾಗ ಕಾರ್ಯಾಚರಣೆ ನಡೆಸಿದ್ದಾರೆ. ಬಿಜೈ ನ್ಯೂರೋಡ್ ನಿವಾಸಿ ಮೊಹಮ್ಮದ್ ಅಮೀನ್ ರಾಫಿ(23), ಅಡ್ಡೂರು ನಿವಾಸಿ ಮೊಹಮ್ಮದ್ ಸಿನಾನ್ ಅಬ್ದುಲ್ಲಾ(23), ಬಂದರು ನಿವಾಸಿ ಮೊಹಮ್ಮದ್ ನೌಮಾನ್(22), ಬೋಳಿಯಾರ್ ನಿವಾಸಿ ಮೊಹಮ್ಮದ್ ಸಫೀಲ್(23) ಬಂಧಿತರು.
)
ಆರೋಪಿಗಳಿಂದ 6,50,000 ರೂ. ಮೌಲ್ಯದ 270 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 4 ಮೊಬೈಲ್ ಫೋನ್ ಗಳು, ಟೊಯೊಟಾ ಕೊರೊಲ್ಲಾ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಲಾಗಿದೆ. ವಶಪಡಿಸಿದ ಸೊತ್ತಿನ ಒಟ್ಟು ಮೌಲ್ಯ ರೂ.14,85,500 ಆಗಬಹುದು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳು ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಕರ್ನಾಟಕ, ಕೇರಳ ರಾಜ್ಯದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ. ಆರೋಪಿಗಳ ಪೈಕಿ ಮೊಹಮ್ಮದ್ ಅಮೀನ್ ರಾಫಿ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು 2021ನೇ ಇಸವಿಯಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿರುತ್ತದೆ.
The Central Crime Branch (CCB) sleuths in Mangaluru has arrested four people and seized 270 gram MDMA worth Rs 6.50 lakh at Deralakatte.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm