ಬ್ರೇಕಿಂಗ್ ನ್ಯೂಸ್
17-05-24 01:44 pm HK News Desk ಕ್ರೈಂ
ಬೆಳಗಾವಿ, ಮೇ.17: ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕನೊಬ್ಬ ಚಾಕುವಿನಿಂದ ನಡೆಸಿದ ದಾಳಿಯಲ್ಲಿ ರೈಲ್ವೆ ಸಿಬ್ಬಂದಿ ಮೃತಪಟ್ಟಿದ್ದು, ಟಿಟಿಇ ಸೇರಿ ಮೂವರು ಗಾಯಗೊಂಡಿದ್ದಾರೆ.
ಬೋಗಿ ಅಟೆಂಡರ್ ದೇವಋಷಿ ವರ್ಮಾ (23) ಮೃತಪಟ್ಟವರು. ಆರೋಪಿಯು ಹೃದಯಕ್ಕೇ ಚಾಕು ಇರಿದಿದ್ದರಿಂದ ವರ್ಮಾ ತೀವ್ರ ನಿತ್ರಾಣಗೊಂಡರು. ಅವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು ಆದ್ರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.
ಪುದುಚೆರಿ- ಮುಂಬೈ ಚಾಲುಕ್ಯ ಎಕ್ಸ್ಪ್ರೆಸ್ ರೈಲಿನ ಎಸ್-8 ಬೋಗಿಯಲ್ಲಿ ಘಟನೆ ನಡೆದಿದೆ. ರೈಲುಧಾರವಾಡ ದಾಟಿ ಬೆಳಗಾವಿಯತ್ತ ಚಲಿಸುತ್ತಿತ್ತು. ಗುಂಜಿ-ಖಾನಾಪುರ ಮಧ್ಯದಲ್ಲಿ ಟಿಟಿ ಅಶ್ರಫ್ ಕಿತ್ತೂರ ಟಿಕೆಟ್ ಚೆಕ್ ಮಾಡುತ್ತಿದ್ದರು. ಬೋಗಿಯಲ್ಲಿ ಮುಸುಕು ಧರಿಸಿ ಕುಳಿತಿದ್ದ ವ್ಯಕ್ತಿಯಿಂದ ಟಿಕೆಟ್ ಕೇಳಿದರು. ಅವರಿಗೆ ಟಿಕೆಟ್ ತೋರಿಸಲು ನಿರಾಕರಿಸಿದಾಗ ಮಾತಿಗೆ ಮಾತು ಬೆಳೆಯಿತು. ತನ್ನ ಬಳಿ ಇದ್ದ ಚಾಕು ತೆಗೆದ ಮುಸುಕುಧಾರಿ ಟಿಟಿ ಮೇಲೆ ಹಲ್ಲೆ ನಡೆಸಿದ. ಗಾಯಗೊಂಡ ಟಿಟಿಇ ಅವರನ್ನು ರಕ್ಷಿಸಲು ಅಟೆಂಡರ್ ದೇವಋಷಿ ಧಾವಿಸಿದರು. ಆರೋಪಿ ಅವರ ಎದೆಗೂ ಚಾಕು ಇರಿದ. ಜಗಳ ಬಿಡಿಸಲು ಬಂದ ಇನ್ನಿಬ್ಬರು ಸಿಬ್ಬಂದಿ ಮೇಲೂ ಚಾಕುವಿನಿಂದ ದಾಳಿ ನಡೆಸಿದ್ದಾನೆ.
ರೈಲು ಸಂಜೆ 5ರ ಸುಮಾರಿಗೆ ಬೆಳಗಾವಿ ನಿಲ್ದಾಣ ತಲುಪಿತು. ಗಾಯಗೊಂಡ ನಾಲ್ವರನ್ನೂ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ತೀವ್ರ ರಕ್ತಸ್ರಾವವಾಗಿದ್ದರಿಂದ ದೇವಋಷಿ ಅಸುನೀಗಿದರು. ಟಿಟಿ ಸೇರಿ ಮೂವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ. ಆರೋಪಿ ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪರಾರಿಯಾಗಿದ್ದಾನೆ.
ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಜಿಲ್ಲಾಸ್ಪತ್ರೆಗೆ ಹಾಗೂ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ದೇವಋಷಿ ಅವರ ಮರಣೋತ್ತರ ಪರೀಕ್ಷೆ ಮಾಡಿ, ಶವವನ್ನು ಇಲಾಖೆಯ ಸಿಬ್ಬಂದಿಗೆ ಹಸ್ತಾಂತರಿಸಲಾಗಿದೆ.
ದೇವಋಷಿ ಹೊರಗುತ್ತಿಗೆ ಆಧಾರದ ಮೇಲೆ ಬೋಗಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು.
Ticketless Passenger Murders Railway Staffer, attack Tc for asking ticket in belagavi and later jumps from moving train. According to Belagavi Police Commissioner Iada Martin Marbaniang, the passenger picked up an argument with the TTE when he was asked to show his ticket. The accused then pulled out a knife and attacked the staffer.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm